ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ.
ಭಾರತ ಇದುವರೆಗೂ ಅಭಿವೃದ್ಧಿಪಡಿಸಿದ ರಾಕೆಟ್ಗಳಲ್ಲೇ ಅತ್ಯಂತ ದೈತ್ಯ ಗಾತ್ರ (200 ಆನೆ ತೂಕದ) ಮತ್ತು ಸೂಪರ್ ಪವರ್ ಹೊಂದಿರುವ ಜಿಎಸ್ಎಲ್ವಿ ಮಾರ್ಕ್-3 ಉಡ್ಡಯನ ವಾಹಕವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಆ ಮೂಲಕ, ಇಂಥ ಭಾರೀ ತೂಕದ ರಾಕೆಟ್ ಹಾರಿಸಬಲ್ಲ ಸಾಮರ್ಥ್ಯ ಹೊಂದಿರುವ ಅಮೆರಿಕ, ರಷ್ಯಾ, ಯುರೋಪ್, ಚೀನಾ ಹಾಗೂ ಜಪಾನ್ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ.
ಜಿಎಸ್ಎಲ್ವಿ ಮಾರ್ಕ್ 3 ರಾಕೆಟ್, ತನ್ನೊಂದಿಗೆ ಜಿಸ್ಯಾಟ್ 19 ಉಪಗ್ರಹ ಕೂಡಾ ಹೊತ್ತೊಯ್ಯಲಿದೆ. ಜಿಸ್ಯಾಟ್ 19 ಉಪಗ್ರಹವು, ಅತ್ಯಾಧುನಿಕವಾಗಿದ್ದು, ಡಿಜಿಟಲ್ ಇಂಡಿಯಾದ ಕನಸು ನನಸು ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಭಾರತ ಇದುವರೆಗೆ 41 ಉಪಗ್ರಹಗಳನ್ನು ಹಾರಿಬಿಟ್ಟಿದ್ದು, ಅದರಲ್ಲಿ 13 ಸಂಪರ್ಕ ಉಪಗ್ರಹಗಳಾಗಿವೆ.
ಜಿಎಸ್ಎಲ್ವಿ ಮಾರ್ಕ್ 3 ರಾಕೆಟ್ ಮಹತ್ವ :-
ಸದ್ಯ ಇಸ್ರೋ ಬತ್ತಳಿಕೆಯಲ್ಲಿ ಪಿಎಸ್ಎಲ್ವಿ ಹಾಗೂ ಜಿಎಸ್ಎಲ್ವಿ ಮಾರ್ಕ್-2 ರಾಕೆಟ್ಗಳು 2 ಟನ್ ಭಾರ ಹೊತ್ತೊ ಯ್ಯ ಬಲ್ಲದು. ಅದಕ್ಕೂ ಮೇಲ್ಪಟ್ಟಭಾರದ ಉಪಗ್ರಹ ಒಯ್ಯುವ ಸಾಮರ್ಥ್ಯ ಜಿಎಸ್ಎಲ್ವಿ ಮಾರ್ಕ್ 3ಗೆ ಇದೆ. ಈ ರಾಕೆಟ್ ಬಳಕೆಯಿಂದ ಸಂಪರ್ಕ ಉಪಗ್ರಹಗಳನ್ನು ಉಡಾವಣೆ ಮಾಡಲು ಬೇರೆ ದೇಶಗಳ ಮೇಲೆ ಅವಲಂಬಿಸುವುದು ತಪ್ಪುತ್ತದೆ.
ಜಿಎಸ್ಎಲ್ವಿ ವಿಶೇಷತೆ:-
ದ್ರವರೂಪದ ಆಮ್ಲಜನಕ ಹಾಗೂ ದ್ರವರೂಪದ ಜಲಜನಕವನ್ನು ಇಂಧನವಾಗಿ ಬಳಸಿ ಕಾರ್ಯನಿರ್ವಹಿಸುವ ಕ್ರಯೋಜೆನಿಕ್ ಎಂಜಿನ್ ಮೂಲಕ ಪೂರ್ಣಪ್ರಮಾಣದ ರಾಕೆಟ್ ಉಡಾವಣೆ ಮಾಡುತ್ತಿರುವುದು ಇದೇ ಮೊದಲು.
ಜಿಎಸ್ಎಲ್ವಿ ಮಾರ್ಕ್ 3 ದೇಶದ ಅತ್ಯಂತ ದೈತ್ಯ ರಾಕೆಟ್ ಆಗಿದೆ. ಜತೆಗೆ ಅತ್ಯಂತ ಕುಬ್ಜ ರಾಕೆಟ್ ಕೂಡ ಹೌದು. ಎತ್ತರ 43 ಮೀಟರ್. (ಪಿಎಸ್ಎಲ್ವಿ ರಾಕೆಟ್ 44.4 ಮೀಟರ್ ಎತ್ತರವಿದೆ).
ಭೂಸ್ಥಿರ ವರ್ಗಾವಣೆ ಕಕ್ಷೆಗೆ 4 ಟನ್, ಕೆಳ ಭೂ ಕಕ್ಷೆಗೆ 8 ಟನ್ ತೂಕದ ಉಪಗ್ರಹ ಒಯ್ಯುವ ಸಾಮರ್ಥ್ಯ ಹೊಂದಿದೆ.
ಜಿಸ್ಯಾಟ್ 19 ವಿಶೇಷತೆ:-ಜಿಸ್ಯಾಟ್-19, ಉಪಗ್ರಹ ಆಧರಿತ ಧ್ವನಿ, ವೇಗದ ಇಂಟರ್ನೆಟ್ ಹಾಗೂ ವಿಡಿಯೋದಂತಹ ಅತ್ಯಂತ ಸುರಕ್ಷಿತ ಸೇವೆ ಆರಂಭಿಸುವ ನಿಟ್ಟಿನಲ್ಲಿ ಮೊದಲ ಉಪಗ್ರಹ . ಈ ಹಿಂದೆ ಉಡಾವಣೆ ಮಾಡಲಾದ 6-7 ಉಪಗ್ರಹಗಳಿಗೆ ಒಂದು ಜಿಸ್ಯಾಟ್- 19 ಸಮ. ಜಿಸ್ಯಾಟ್ 19ರಲ್ಲಿ ಟ್ರಾನ್ಸ್ಫಾಂಡರ್ಗಳು ಇರುವುದಿಲ್ಲ. ಈ ಹಿಂದಿನ ಉಪಗ್ರಹಗಳಲ್ಲಿ 1 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದ್ದರೆ ಈ ಉಪಗ್ರಹದಲ್ಲಿ ಒಮ್ಮೆಗೆ 8 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…