ದೇಶ-ವಿದೇಶ

ಇತಿಹಾಸ ನಿರ್ಮಿಸಿದ ಇಸ್ರೋ…..

174

ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ.

ಭಾರತ ಇದುವರೆಗೂ ಅಭಿವೃದ್ಧಿಪಡಿಸಿದ ರಾಕೆಟ್‌ಗಳಲ್ಲೇ ಅತ್ಯಂತ ದೈತ್ಯ ಗಾತ್ರ (200 ಆನೆ ತೂಕದ) ಮತ್ತು ಸೂಪರ್‌ ಪವರ್‌ ಹೊಂದಿರುವ ಜಿಎಸ್‌ಎಲ್‌ವಿ ಮಾರ್ಕ್-3 ಉಡ್ಡಯನ ವಾಹಕವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಆ ಮೂಲಕ, ಇಂಥ ಭಾರೀ ತೂಕದ ರಾಕೆಟ್‌ ಹಾರಿಸಬಲ್ಲ ಸಾಮರ್ಥ್ಯ ಹೊಂದಿರುವ ಅಮೆರಿಕ, ರಷ್ಯಾ, ಯುರೋಪ್‌, ಚೀನಾ ಹಾಗೂ ಜಪಾನ್‌ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ.

ಜಿಎಸ್‌ಎಲ್‌ವಿ ಮಾರ್ಕ್ 3 ರಾಕೆಟ್‌, ತನ್ನೊಂದಿಗೆ ಜಿಸ್ಯಾಟ್‌ 19 ಉಪಗ್ರಹ ಕೂಡಾ ಹೊತ್ತೊಯ್ಯಲಿದೆ. ಜಿಸ್ಯಾಟ್‌ 19 ಉಪಗ್ರಹವು, ಅತ್ಯಾಧುನಿಕವಾಗಿದ್ದು, ಡಿಜಿಟಲ್‌ ಇಂಡಿಯಾದ ಕನಸು ನನಸು ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಭಾರತ ಇದುವರೆಗೆ 41 ಉಪಗ್ರಹಗಳನ್ನು ಹಾರಿಬಿಟ್ಟಿದ್ದು, ಅದರಲ್ಲಿ 13 ಸಂಪರ್ಕ ಉಪಗ್ರಹಗಳಾಗಿವೆ.

ಜಿಎಸ್‏ಎಲ್‏ವಿ ಮಾರ್ಕ್ 3 ರಾಕೆಟ್ ಮಹತ್ವ :-

ಸದ್ಯ ಇಸ್ರೋ ಬತ್ತಳಿಕೆಯಲ್ಲಿ ಪಿಎಸ್‌ಎಲ್‌ವಿ ಹಾಗೂ ಜಿಎಸ್‌ಎಲ್‌ವಿ ಮಾರ್ಕ್-2 ರಾಕೆಟ್‌ಗಳು 2 ಟನ್‌ ಭಾರ ಹೊತ್ತೊ ಯ್ಯ ಬಲ್ಲದು. ಅದಕ್ಕೂ ಮೇಲ್ಪಟ್ಟಭಾರದ ಉಪಗ್ರಹ ಒಯ್ಯುವ ಸಾಮರ್ಥ್ಯ ಜಿಎಸ್‌ಎಲ್‌ವಿ ಮಾರ್ಕ್ 3ಗೆ ಇದೆ. ಈ ರಾಕೆಟ್‌ ಬಳಕೆಯಿಂದ ಸಂಪರ್ಕ ಉಪಗ್ರಹಗಳನ್ನು ಉಡಾವಣೆ ಮಾಡಲು ಬೇರೆ ದೇಶಗಳ ಮೇಲೆ ಅವಲಂಬಿಸುವುದು ತಪ್ಪುತ್ತದೆ.

ಜಿಎಸ್‌ಎಲ್‌ವಿ ವಿಶೇಷತೆ:-

ದ್ರವರೂಪದ ಆಮ್ಲಜನಕ ಹಾಗೂ ದ್ರವರೂಪದ ಜಲಜನಕವನ್ನು ಇಂಧನವಾಗಿ ಬಳಸಿ ಕಾರ್ಯನಿರ್ವಹಿಸುವ ಕ್ರಯೋಜೆನಿಕ್‌ ಎಂಜಿನ್‌ ಮೂಲಕ ಪೂರ್ಣಪ್ರಮಾಣದ ರಾಕೆಟ್‌ ಉಡಾವಣೆ ಮಾಡುತ್ತಿರುವುದು ಇದೇ ಮೊದಲು.

ಜಿಎಸ್‏ಎಲ್‏ವಿ ಮಾರ್ಕ್ 3 ದೇಶದ ಅತ್ಯಂತ ದೈತ್ಯ ರಾಕೆಟ್‌ ಆಗಿದೆ. ಜತೆಗೆ ಅತ್ಯಂತ ಕುಬ್ಜ ರಾಕೆಟ್‌ ಕೂಡ ಹೌದು. ಎತ್ತರ 43 ಮೀಟರ್‌. (ಪಿಎಸ್‌ಎಲ್‌ವಿ ರಾಕೆಟ್‌ 44.4 ಮೀಟರ್‌ ಎತ್ತರವಿದೆ).
ಭೂಸ್ಥಿರ ವರ್ಗಾವಣೆ ಕಕ್ಷೆಗೆ 4 ಟನ್‌, ಕೆಳ ಭೂ ಕಕ್ಷೆಗೆ 8 ಟನ್‌ ತೂಕದ ಉಪಗ್ರಹ ಒಯ್ಯುವ ಸಾಮರ್ಥ್ಯ ಹೊಂದಿದೆ.

ಜಿಸ್ಯಾಟ್‌ 19 ವಿಶೇಷತೆ:-ಜಿಸ್ಯಾಟ್‌-19, ಉಪಗ್ರಹ ಆಧರಿತ ಧ್ವನಿ, ವೇಗದ ಇಂಟರ್ನೆಟ್‌ ಹಾಗೂ ವಿಡಿಯೋದಂತಹ ಅತ್ಯಂತ ಸುರಕ್ಷಿತ ಸೇವೆ ಆರಂಭಿಸುವ ನಿಟ್ಟಿನಲ್ಲಿ ಮೊದಲ ಉಪಗ್ರಹ . ಈ ಹಿಂದೆ ಉಡಾವಣೆ ಮಾಡಲಾದ 6-7 ಉಪಗ್ರಹಗಳಿಗೆ ಒಂದು ಜಿಸ್ಯಾಟ್‌- 19 ಸಮ. ಜಿಸ್ಯಾಟ್‌ 19ರಲ್ಲಿ ಟ್ರಾನ್ಸ್‌ಫಾಂಡರ್‌ಗಳು ಇರುವುದಿಲ್ಲ. ಈ ಹಿಂದಿನ ಉಪಗ್ರಹಗಳಲ್ಲಿ 1 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದ್ದರೆ ಈ ಉಪಗ್ರಹದಲ್ಲಿ ಒಮ್ಮೆಗೆ 8 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ವಿಸ್ಮಯ ಜಗತ್ತು

    ಏಳು ವರ್ಷದ ನಂತರವೂ ತನ್ನ ಪೋಷಕನನ್ನು ಗುರುತು ಹಿಡಿದು ಆತನ ಹಿಂದೆ ಬಿದ್ದ ಜಿಂಕೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ರಾಜಕೀಯ

    ಇಂದಿರಾ ಕ್ಯಾಂಟೀನ್‌ ಮತ್ತು ನಮ್ಮ ಅಪ್ಪಾಜಿ ಕ್ಯಾಂಟೀನ್‌ ಇವೆರಡರಲ್ಲಿ ಜನರಿಗೆ ಯಾವುದು ಇಷ್ಟವಾಗುತ್ತೆ ಗೊತ್ತಾ?ಈ ಲೇಖನಿ ಓದಿ ನಿಮ್ಮ ಅಭಿಪ್ರಾಯ ತಿಳಿಸಿ…

    ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್‌’ ಎಂಬ ಹೆಸರಿನಲ್ಲಿ ಆರಂಭಿಸಿದೆ.

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…