News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಇತಿಹಾಸ ನಿರ್ಮಿಸಿದ ಇಸ್ರೋ…..

182

ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ.

ಭಾರತ ಇದುವರೆಗೂ ಅಭಿವೃದ್ಧಿಪಡಿಸಿದ ರಾಕೆಟ್‌ಗಳಲ್ಲೇ ಅತ್ಯಂತ ದೈತ್ಯ ಗಾತ್ರ (200 ಆನೆ ತೂಕದ) ಮತ್ತು ಸೂಪರ್‌ ಪವರ್‌ ಹೊಂದಿರುವ ಜಿಎಸ್‌ಎಲ್‌ವಿ ಮಾರ್ಕ್-3 ಉಡ್ಡಯನ ವಾಹಕವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಆ ಮೂಲಕ, ಇಂಥ ಭಾರೀ ತೂಕದ ರಾಕೆಟ್‌ ಹಾರಿಸಬಲ್ಲ ಸಾಮರ್ಥ್ಯ ಹೊಂದಿರುವ ಅಮೆರಿಕ, ರಷ್ಯಾ, ಯುರೋಪ್‌, ಚೀನಾ ಹಾಗೂ ಜಪಾನ್‌ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ.

ಜಿಎಸ್‌ಎಲ್‌ವಿ ಮಾರ್ಕ್ 3 ರಾಕೆಟ್‌, ತನ್ನೊಂದಿಗೆ ಜಿಸ್ಯಾಟ್‌ 19 ಉಪಗ್ರಹ ಕೂಡಾ ಹೊತ್ತೊಯ್ಯಲಿದೆ. ಜಿಸ್ಯಾಟ್‌ 19 ಉಪಗ್ರಹವು, ಅತ್ಯಾಧುನಿಕವಾಗಿದ್ದು, ಡಿಜಿಟಲ್‌ ಇಂಡಿಯಾದ ಕನಸು ನನಸು ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಭಾರತ ಇದುವರೆಗೆ 41 ಉಪಗ್ರಹಗಳನ್ನು ಹಾರಿಬಿಟ್ಟಿದ್ದು, ಅದರಲ್ಲಿ 13 ಸಂಪರ್ಕ ಉಪಗ್ರಹಗಳಾಗಿವೆ.

ಜಿಎಸ್‏ಎಲ್‏ವಿ ಮಾರ್ಕ್ 3 ರಾಕೆಟ್ ಮಹತ್ವ :-

ಸದ್ಯ ಇಸ್ರೋ ಬತ್ತಳಿಕೆಯಲ್ಲಿ ಪಿಎಸ್‌ಎಲ್‌ವಿ ಹಾಗೂ ಜಿಎಸ್‌ಎಲ್‌ವಿ ಮಾರ್ಕ್-2 ರಾಕೆಟ್‌ಗಳು 2 ಟನ್‌ ಭಾರ ಹೊತ್ತೊ ಯ್ಯ ಬಲ್ಲದು. ಅದಕ್ಕೂ ಮೇಲ್ಪಟ್ಟಭಾರದ ಉಪಗ್ರಹ ಒಯ್ಯುವ ಸಾಮರ್ಥ್ಯ ಜಿಎಸ್‌ಎಲ್‌ವಿ ಮಾರ್ಕ್ 3ಗೆ ಇದೆ. ಈ ರಾಕೆಟ್‌ ಬಳಕೆಯಿಂದ ಸಂಪರ್ಕ ಉಪಗ್ರಹಗಳನ್ನು ಉಡಾವಣೆ ಮಾಡಲು ಬೇರೆ ದೇಶಗಳ ಮೇಲೆ ಅವಲಂಬಿಸುವುದು ತಪ್ಪುತ್ತದೆ.

ಜಿಎಸ್‌ಎಲ್‌ವಿ ವಿಶೇಷತೆ:-

ದ್ರವರೂಪದ ಆಮ್ಲಜನಕ ಹಾಗೂ ದ್ರವರೂಪದ ಜಲಜನಕವನ್ನು ಇಂಧನವಾಗಿ ಬಳಸಿ ಕಾರ್ಯನಿರ್ವಹಿಸುವ ಕ್ರಯೋಜೆನಿಕ್‌ ಎಂಜಿನ್‌ ಮೂಲಕ ಪೂರ್ಣಪ್ರಮಾಣದ ರಾಕೆಟ್‌ ಉಡಾವಣೆ ಮಾಡುತ್ತಿರುವುದು ಇದೇ ಮೊದಲು.

ಜಿಎಸ್‏ಎಲ್‏ವಿ ಮಾರ್ಕ್ 3 ದೇಶದ ಅತ್ಯಂತ ದೈತ್ಯ ರಾಕೆಟ್‌ ಆಗಿದೆ. ಜತೆಗೆ ಅತ್ಯಂತ ಕುಬ್ಜ ರಾಕೆಟ್‌ ಕೂಡ ಹೌದು. ಎತ್ತರ 43 ಮೀಟರ್‌. (ಪಿಎಸ್‌ಎಲ್‌ವಿ ರಾಕೆಟ್‌ 44.4 ಮೀಟರ್‌ ಎತ್ತರವಿದೆ).
ಭೂಸ್ಥಿರ ವರ್ಗಾವಣೆ ಕಕ್ಷೆಗೆ 4 ಟನ್‌, ಕೆಳ ಭೂ ಕಕ್ಷೆಗೆ 8 ಟನ್‌ ತೂಕದ ಉಪಗ್ರಹ ಒಯ್ಯುವ ಸಾಮರ್ಥ್ಯ ಹೊಂದಿದೆ.

ಜಿಸ್ಯಾಟ್‌ 19 ವಿಶೇಷತೆ:-ಜಿಸ್ಯಾಟ್‌-19, ಉಪಗ್ರಹ ಆಧರಿತ ಧ್ವನಿ, ವೇಗದ ಇಂಟರ್ನೆಟ್‌ ಹಾಗೂ ವಿಡಿಯೋದಂತಹ ಅತ್ಯಂತ ಸುರಕ್ಷಿತ ಸೇವೆ ಆರಂಭಿಸುವ ನಿಟ್ಟಿನಲ್ಲಿ ಮೊದಲ ಉಪಗ್ರಹ . ಈ ಹಿಂದೆ ಉಡಾವಣೆ ಮಾಡಲಾದ 6-7 ಉಪಗ್ರಹಗಳಿಗೆ ಒಂದು ಜಿಸ್ಯಾಟ್‌- 19 ಸಮ. ಜಿಸ್ಯಾಟ್‌ 19ರಲ್ಲಿ ಟ್ರಾನ್ಸ್‌ಫಾಂಡರ್‌ಗಳು ಇರುವುದಿಲ್ಲ. ಈ ಹಿಂದಿನ ಉಪಗ್ರಹಗಳಲ್ಲಿ 1 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದ್ದರೆ ಈ ಉಪಗ್ರಹದಲ್ಲಿ ಒಮ್ಮೆಗೆ 8 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ