ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ.
ಭಾರತ ಇದುವರೆಗೂ ಅಭಿವೃದ್ಧಿಪಡಿಸಿದ ರಾಕೆಟ್ಗಳಲ್ಲೇ ಅತ್ಯಂತ ದೈತ್ಯ ಗಾತ್ರ (200 ಆನೆ ತೂಕದ) ಮತ್ತು ಸೂಪರ್ ಪವರ್ ಹೊಂದಿರುವ ಜಿಎಸ್ಎಲ್ವಿ ಮಾರ್ಕ್-3 ಉಡ್ಡಯನ ವಾಹಕವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಆ ಮೂಲಕ, ಇಂಥ ಭಾರೀ ತೂಕದ ರಾಕೆಟ್ ಹಾರಿಸಬಲ್ಲ ಸಾಮರ್ಥ್ಯ ಹೊಂದಿರುವ ಅಮೆರಿಕ, ರಷ್ಯಾ, ಯುರೋಪ್, ಚೀನಾ ಹಾಗೂ ಜಪಾನ್ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ.
ಜಿಎಸ್ಎಲ್ವಿ ಮಾರ್ಕ್ 3 ರಾಕೆಟ್, ತನ್ನೊಂದಿಗೆ ಜಿಸ್ಯಾಟ್ 19 ಉಪಗ್ರಹ ಕೂಡಾ ಹೊತ್ತೊಯ್ಯಲಿದೆ. ಜಿಸ್ಯಾಟ್ 19 ಉಪಗ್ರಹವು, ಅತ್ಯಾಧುನಿಕವಾಗಿದ್ದು, ಡಿಜಿಟಲ್ ಇಂಡಿಯಾದ ಕನಸು ನನಸು ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಭಾರತ ಇದುವರೆಗೆ 41 ಉಪಗ್ರಹಗಳನ್ನು ಹಾರಿಬಿಟ್ಟಿದ್ದು, ಅದರಲ್ಲಿ 13 ಸಂಪರ್ಕ ಉಪಗ್ರಹಗಳಾಗಿವೆ.
ಜಿಎಸ್ಎಲ್ವಿ ಮಾರ್ಕ್ 3 ರಾಕೆಟ್ ಮಹತ್ವ :-
ಸದ್ಯ ಇಸ್ರೋ ಬತ್ತಳಿಕೆಯಲ್ಲಿ ಪಿಎಸ್ಎಲ್ವಿ ಹಾಗೂ ಜಿಎಸ್ಎಲ್ವಿ ಮಾರ್ಕ್-2 ರಾಕೆಟ್ಗಳು 2 ಟನ್ ಭಾರ ಹೊತ್ತೊ ಯ್ಯ ಬಲ್ಲದು. ಅದಕ್ಕೂ ಮೇಲ್ಪಟ್ಟಭಾರದ ಉಪಗ್ರಹ ಒಯ್ಯುವ ಸಾಮರ್ಥ್ಯ ಜಿಎಸ್ಎಲ್ವಿ ಮಾರ್ಕ್ 3ಗೆ ಇದೆ. ಈ ರಾಕೆಟ್ ಬಳಕೆಯಿಂದ ಸಂಪರ್ಕ ಉಪಗ್ರಹಗಳನ್ನು ಉಡಾವಣೆ ಮಾಡಲು ಬೇರೆ ದೇಶಗಳ ಮೇಲೆ ಅವಲಂಬಿಸುವುದು ತಪ್ಪುತ್ತದೆ.
ಜಿಎಸ್ಎಲ್ವಿ ವಿಶೇಷತೆ:-
ದ್ರವರೂಪದ ಆಮ್ಲಜನಕ ಹಾಗೂ ದ್ರವರೂಪದ ಜಲಜನಕವನ್ನು ಇಂಧನವಾಗಿ ಬಳಸಿ ಕಾರ್ಯನಿರ್ವಹಿಸುವ ಕ್ರಯೋಜೆನಿಕ್ ಎಂಜಿನ್ ಮೂಲಕ ಪೂರ್ಣಪ್ರಮಾಣದ ರಾಕೆಟ್ ಉಡಾವಣೆ ಮಾಡುತ್ತಿರುವುದು ಇದೇ ಮೊದಲು.
ಜಿಎಸ್ಎಲ್ವಿ ಮಾರ್ಕ್ 3 ದೇಶದ ಅತ್ಯಂತ ದೈತ್ಯ ರಾಕೆಟ್ ಆಗಿದೆ. ಜತೆಗೆ ಅತ್ಯಂತ ಕುಬ್ಜ ರಾಕೆಟ್ ಕೂಡ ಹೌದು. ಎತ್ತರ 43 ಮೀಟರ್. (ಪಿಎಸ್ಎಲ್ವಿ ರಾಕೆಟ್ 44.4 ಮೀಟರ್ ಎತ್ತರವಿದೆ).
ಭೂಸ್ಥಿರ ವರ್ಗಾವಣೆ ಕಕ್ಷೆಗೆ 4 ಟನ್, ಕೆಳ ಭೂ ಕಕ್ಷೆಗೆ 8 ಟನ್ ತೂಕದ ಉಪಗ್ರಹ ಒಯ್ಯುವ ಸಾಮರ್ಥ್ಯ ಹೊಂದಿದೆ.
ಜಿಸ್ಯಾಟ್ 19 ವಿಶೇಷತೆ:-ಜಿಸ್ಯಾಟ್-19, ಉಪಗ್ರಹ ಆಧರಿತ ಧ್ವನಿ, ವೇಗದ ಇಂಟರ್ನೆಟ್ ಹಾಗೂ ವಿಡಿಯೋದಂತಹ ಅತ್ಯಂತ ಸುರಕ್ಷಿತ ಸೇವೆ ಆರಂಭಿಸುವ ನಿಟ್ಟಿನಲ್ಲಿ ಮೊದಲ ಉಪಗ್ರಹ . ಈ ಹಿಂದೆ ಉಡಾವಣೆ ಮಾಡಲಾದ 6-7 ಉಪಗ್ರಹಗಳಿಗೆ ಒಂದು ಜಿಸ್ಯಾಟ್- 19 ಸಮ. ಜಿಸ್ಯಾಟ್ 19ರಲ್ಲಿ ಟ್ರಾನ್ಸ್ಫಾಂಡರ್ಗಳು ಇರುವುದಿಲ್ಲ. ಈ ಹಿಂದಿನ ಉಪಗ್ರಹಗಳಲ್ಲಿ 1 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದ್ದರೆ ಈ ಉಪಗ್ರಹದಲ್ಲಿ ಒಮ್ಮೆಗೆ 8 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…