ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.

“ನ್ಯಾಯಬೆಲೆ ಅಂಗಡಿಗಳು ಇನ್ನು ಮುಂದೆ ಸೇವಾ ಸಿಂಧು ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕ”ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಜೊತೆಗೆ ಬಸ್, ರೈಲು, ವಿಮಾನ ಟಿಕೆಟ್ ಸೇರಿದಂತೆ ಅಗತ್ಯ ಸೇವೆಗಳನ್ನು ಒದಗಿಸುವ ವ್ಯವಸ್ಥೆ ಕಲ್ಪಿಸಲಾಗುವುದು.

ಕೇಂದ್ರ ಸರ್ಕಾರ ಸಾಮಾನ್ಯ ಸೇವಾ ಕೇಂದ್ರ (ಸಿಎಸ್ಸಿ ಎಸ್ಪಿವಿ) ಏಜೆನ್ಸಿ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಉಚಿತವಾಗಿ ಬ್ರಾಡ್ಬ್ಯಾಂಡ್ ಸಂಪರ್ಕ ಕಲ್ಪಿಸಿ ಕೊಡಲಾಗುತ್ತದೆ. ಇದರಿಂದ ನ್ಯಾಯಬೆಲೆ ಅಂಗಡಿಯವರಿಗೆ ಆದಾಯ ಬರುತ್ತದೆ. ರಾಜ್ಯ ಸರ್ಕಾರ ನ್ಯಾಯಬೆಲೆ ಅಂಗಡಿಯವರಿಗೆ ನೀಡುವ ಕಮಿಷನ್ನನ್ನು ಮೂರು ವರ್ಷಗಳವರೆಗೆ ಸಿಎಸ್ಸಿ ಎಜೆನ್ಸಿಗೆ ನೀಡಲಾಗುವುದು ಎಂದು ಹೇಳಿದರು..

ಪ್ರಾಥಮಿಕ ಹಂತದಲ್ಲಿ ಬೆಂಗಳೂರಿನ ಒಟ್ಟು 10 ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೇವೆ ಪ್ರಾರಂಭಗೊಳ್ಳಲಿವೆ. ಬೊಮ್ಮಸಂದ್ರ, ಮತ್ತಿಕೆರೆ, ರೆಹಮತ್ನಗರ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಎಲ್ಲ ಸೇವೆಗಳನ್ನು ಆಹಾರ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ.ನ್ಯಾಯಬೆಲೆ ಅಂಗಡಿ ಎಂದರೆ ಕೇವಲ ಪಡಿತರ ವಿತರಣೆ ಮಾತ್ರವಲ್ಲ, ವಿವಿಧ ಸೇವೆಗಳು ಲಭ್ಯವಾಗುವಂತೆ ಮಾಡಬೇಕು. ಆ ಮೂಲಕ ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸಲು ಪ್ರಮುಖ ಹೆಜ್ಜೆಯನ್ನು ಇರಿಸಲಾಗುತ್ತಿದೆ. ಇದು ದೇಶದ ಇತಿಹಾಸದಲ್ಲಿಯೇ ಮೊದಲ ಪ್ರಯತ್ನ ಎನ್ನಲಾಗಿದೆ.

ರಾಜ್ಯದಲ್ಲಿ ಒಟ್ಟು 24 ಸಾವಿರ ನ್ಯಾಯಬೆಲೆ ಅಂಗಡಿಗಳಿವೆ. ಹಂತಹಂತವಾಗಿ ರಾಜ್ಯದ ಇತರೆ ಜಿಲ್ಲೆಗಳಿಗೂ ಯೋಜನೆ ವಿಸ್ತರಿಸಲು ಉದ್ದೇಶಿಸಲಾಗಿದೆ. ಸಾರಿಗೆ, ವಿಮಾನಯಾನ, ಬೆಸ್ಕಾಂ ಹಾಗೂ ಜನರ ನಡುವಿನ ಕೊಂಡಿಯಾಗಿ ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸಲಿವೆ. ಸಂಬಂಧಪಟ್ಟ ಇಲಾಖೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಫ್ರಾಂಚೈಸಿ ಪಡೆದುಕೊಳ್ಳಲಿವೆ. ಬೆಂಗಳೂರು ಒನ್ ಮಾದರಿ ಸೇವೆಗಳು ಇಲ್ಲಿ ಲಭ್ಯವಾಗಲಿವೆ.

ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಇದು ದೊಡ್ಡ ವರದಾನವಾಗಲಿದೆ. ಬಸ್ ಹಾಗೂ ರೈಲು ಟಿಕೆಟ್ಗಳನ್ನು ಮುಂಗಡವಾಗಿ ಕಾಯ್ದಿರಿಸಲು ನಗರ ಪ್ರದೇಶಗಳಿಗೆ ಬರುವ ಅನಿವಾರ್ಯತೆಯನ್ನು ತಪ್ಪಿಸಲು ಸರ್ಕಾರ ಈ ಸೌಲಭ್ಯ ನೀಡುತ್ತಿದೆ.ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸಿ ಎಲ್ಲ ಸೇವೆಯೂ ಒಂದೆಡೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಇದು ಬಹು ವಿಶೇಷ ಯತ್ನ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.