News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ಈ ಊರಲ್ಲಿ ಬರೀ ಸುಂದರ ಹುಡುಗಿಯರೇ ಇರೋದು!ಇವರಿಗೆ ಇಷ್ಟ ಆದ್ರೆ ಮಾತ್ರ ಮದುವೆ ಆಗ್ತಾರೆ!ಮಾಡ್ರನ್ ಆಗಿರೋ ಇವರು ಮಾಡೋ ಕೆಲಸ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…

2405

ಬ್ರೆಜಿಲ್ ದೇಶಕ್ಕೆ ಹೋಗಿ ಆಗ್ನೇಯ ದಿಕ್ಕಿಗೆ ಹೊರಟರೆ ಬೆಲೋ ಹಾರಿಝಾಂಟ್ ಎಂಬ ಊರು ಸಿಗುತ್ತದೆ ಅಲ್ಲಿಂದ ಪೂರ್ವಕ್ಕೆ ಹೊರಟರೆ ನೊಯಿವಾ -ಡೂ- ಒಡೇರಿಯೋ (Noiva do Cordeiro)ಎಂಬ ಹೆಸರಿನ ಊರಿಗೆ ಹೋಗಬೇಕು.

ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

ಬರೀ ಹುಡುಗಿಯರೋ ಅಥವಾ ವಯಸ್ಸಾದವರೋ ಅಂತ ಕೇಳುವ ಹಾಗೆಯೇ ಇಲ್ಲ ಭಾರತೀಯ ಮಾಪನವಾದ ಏಳು ಮಲ್ಲಿಗೆ ತೂಕದ ಹುಡುಗಿಯರಿಂದ ಹಿಡಿದು ಎಲ್ಲಾ ತೂಕದ ಮಲ್ಲಿಗೆಯಂತಾ ಹುಡುಗಿಯರು ಕೂಡ ಇಲ್ಲಿದ್ದಾರೆ. ಇಲ್ಲಿರುವವರಲ್ಲಿ ಹಲವರನ್ನು ನೋಡಿದರೆ ಇಂದ್ರ ಇಲ್ಲಿಂದಲೇ ಆಯ್ಕಂಡ್ ಹೋಗಿರಬಹುದು ಎಂಬ ಸಂದೇಹ ಬರುವಷ್ಟು ಸುರಸುಂದರಿಯವರು ಇವರು.

ಇದ್ಯಾಕೆ ಹೀಗೆ ಅನ್ನೋದು ಬದಿಗಿರಲಿ ಮೊದಲಿಗೆ ಇವರ ಕಾನೂನು ಅನ್ನೋದಕ್ಕಿಂತ ಇವರು ಬದುಕುತ್ತಿರುವ ರೀತಿ ಸ್ವಲ್ಪ ವಿಚಿತ್ರವಿದೆ ಅಂದರೆ ಯಾರಾದರೂ ಹುಡುಗ ಇಲ್ಲಿನ ಹುಡುಗಿಯರನ್ನು ಮದುವೆ ಆಗುವುದಾದರೆ ಹುಡುಗಿ ಒಪ್ಪಿದರೆ ಆಗಬಹುದು .

 

ಆದರೆ ಮದುವೆಯಾದ ನಂತರ ವಾರಕ್ಕೊಮ್ಮೆ ಮಾತ್ರ ಗಂಡ ಮನೆಗೆ ಬರಬೇಕು ಹಾಗೂ ಜೊತೆಗಿದ್ದು ದುಡಿಮೆಯ ಲೆಕ್ಕ ಕೊಟ್ಟು ಮರುದಿನ ಕೆಲಸಕ್ಕೆ ಹೊರಡುತ್ತಿರಬೇಕು ! ಗಂಡನನ್ನು ಜೊತೆಯಲ್ಲೇ ಇಟ್ಟುಕೊಂಡು ಬದುಕಲು ಇವರಿಗೆ ಇಷ್ಟವಿಲ್ಲ ! ಇನ್ನು ಮಕ್ಕಳಾದಾಗ ಅದು ಗಂಡಾದರೆ ಆ ಹುಡುಗನಿಗೆ ಹದಿನೆಂಟು ವರ್ಷ ವಯಸ್ಸಾದದ್ದೇ ತಡ, ಒದ್ದು ದುಡಿಯಲು ಕಳುಹಿಸುತ್ತಾರೆ .

ಅವರ ಪ್ರೀತಿ ಪಾತ್ರವಾದ ಹೆಣ್ಣು ಹುಟ್ಟಿದರೆ ಅವರಂತೆಯೇ ನಿರಾತಂಕವಾಗಿ ಹೊಲದಲ್ಲಿ ಕೆಲಸ ಮಾಡುತ್ತಾ ಲೇಡಿ ರೈತರಂತೆ ಬದುಕಬಹುದು. ಅಲ್ಲಿನ ಪ್ರಮುಖ ಕೆಲಸವೇ ಕೃಷಿ ಹಾಗಂದ ಮಾತ್ರಕ್ಕೆ ಅದಾವುದೋ ಹಳೇ ನೈಟಿ ತೊಟ್ಟು ಹೊಲದಲ್ಲಿ ಕೆಲಸ ಮಾಡುವುದಿಲ್ಲ .ಫುಲ್ಲೀ ಅಪಡೇಟೇಡ್ ನಯಾ ನಯಾ ಡ್ರೆಸ್ ಧರಿಸಿ ಟಿಪ್ ಟಾಪಾಗಿ ಇರುವ ಟ್ರೆಂಡೀ ಹುಡುಗಿಯವರು ಇವರು.

ಅಸಲಿಗೆ ಇವರು ಹೀಗಾಗಿದ್ದಕ್ಕೆ ಕಾರಣ ಏನು ಅಂತ ಹಿನ್ನೆಲೆ ತಿಳಿಯಲು ನೋಡಿದರೆ ಹಿಂದೆಮ್ಮೆ 1891 “ಮರಿಯಾ ಸನ್ಹೋರಿಯಾ”ಎಂಬ ಹುಡುಗಿಗೆ ಮದುವೆ ಮಾಡಲು ಮುಂದಾದಾಗ ಆ ಹುಡುಗಿಗೆ ಹುಡುಗ ಇಷ್ಟವಾಗದೆ ಮದುವೆಗೆ ಒಪ್ಪುವುದಿಲ್ಲ ಆಗ ಹುಡುಗಿ ಮನೆಯವರೂ ಕೂಡ ಸುಮ್ಮನಾಗುತ್ತಾರೆ ಆದರೆ ಆ ಊರಿನ ಜನ ಈ ಹುಡುಗಿಯ ವಿರುದ್ಧ ತಿರುಗಿಬಿದ್ದು ಗಡೀಪಾರು ಮಾಡುತ್ತಾರೆ ಆ ಹುಡುಗಿ ಅಲ್ಲಿಂದ ಹೊರಬಂದು ಊರ ಹೊರಗಿನ ಜಾಗದಲ್ಲಿ ಹೊಸ ಊರನ್ನು ಸೃಷ್ಟಿಸುತ್ತಾಳೆ .

ಆನಂತರ ಹಿರಿಯಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ ಎಂಬಂತೆ ಇದೇ ಊರಿನಲ್ಲಿ ಮದುವೆ ವಿರೋಧಿಸಿದವರೆಲ್ಲಾ ಇವರಳ ಊರಿಗೆ ಸೇರಿ ಇವರದ್ದೇ ಸ್ವಂತ ನೆಲೆಯಾಗಿಸಿಕೊಳ್ಳುತ್ತಾ ಸಾಗುತ್ತಾರೆ ಅದೇ ಈ ಊರು ನೊಯಿವಾ -ಡೂ- ಒಡೇರಿಯೋ.

ಈಗ ಪ್ರಶ್ನೆ ಅವರ ಅಕ್ಕ ಪಕ್ಕ ಊರಿನವರು ಈ ಹುಡುಗಿಯರನ್ನ ಮದುವೆ ಆಗಬಹುದಲ್ಲ ಎಂದು .ಆದರೆ ಸಂಭಂದದ ರೀತಿ ನೋಡಿದರೆ ಇಲ್ಲಿರುವ ಶೇ 90 ರಷ್ಟು ಹುಡುಗಿಯರು ಅಕ್ಕಪಕ್ಕದ ಊರಿನವರಿಗೆ ಅಕ್ಕ.ತಂಗಿಯರಾಗಬೇಕಂತೆ ಇದು ಸಮಸ್ಯೆ.

ಕೃಪೆ: ಉಮೇಶ್ ಆಚಾರ್

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

    ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌…

  • ಸುದ್ದಿ

    ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

    ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.

  • ಸುದ್ದಿ

    ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

    ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ…

  • ಸುದ್ದಿ

    ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

  • ಸುದ್ದಿ

    ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

    ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…