ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಹಾಗೆಂದು ಎಲ್ಲಾ ತಲೆನೋವುಗಳೂ ಮೈಗ್ರೇನ್ ಅಲ್ಲ. ದೃಷ್ಟಿದೋಷ, ನೆಗಡಿಗೆ ಸಂಬಂಧಿಸಿದ ತೊಂದರೆಗಳು, ಜ್ವರ ಇತ್ಯಾದಿ ಕಾರಣಗಳಿಂದಲೂ ತಲೆನೋವು ಬರುತ್ತದೆ. ಆದರೆ ಅದು ಮೈಗ್ರೇನ್ ಅಲ್ಲ. ಆದರೆ ಮೈಗ್ರೇನ್ ತಲೆನೋವು ಅತ್ಯಂತ ಸಾಮಾನ್ಯವಾದದ್ದು.
ಮೈಗ್ರೇನ್ ಎಂದರೇನು ?
ಕೆಲವು ಕಾರಣಗಳಿಂದ ಒಂದು ವ್ಯಕ್ತಿಯ ತಲೆಯೊಳಗಿನ ರಕ್ತನಾಳಗಳ ಗಾತ್ರದಲ್ಲಿ ಅಸ್ತಿರತೆಯುಂಟಾಗಿ, ಅವು ಮೊದಲು ಸಂಕುಚಿತವಾಗಿ ನಂತರ ವಿಕಸಿತವಾಗುತ್ತದೆ.ಆಗ ರಕ್ತನಾಳಗಳಿಗೆ ಸಂಬಂಧಿಸಿದ ಸೂಕ್ಷ್ಮ ನರಗಳು ಉದ್ರೇಕಗೊಂಡು ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಅದೇ ಮೈಗ್ರೇನ್.
ಕಾರಣಗಳು, ಸಂದರ್ಭ ಮತ್ತು ಅಪಾಯಕಾರಿ ಅಂಶಗಳು:
ಸಾಮಾನ್ಯವಾಗಿ ಮೈಗ್ರೇನ್ ತಲೆನೋವು 10 ರಿಂದ 45 ವಯಸ್ಸಿನ ನಡುವೆ ಕಾಣಿಸಿಕೊಳ್ಳುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಜೀವನದ ಅಂತಿಮ ಹಂತಗಳಲ್ಲಿಯೂ ಸಹ ಕಾಣಿಸಿಕೊಳ್ಳಬಹುದು.ಮೈಗ್ರೇನ್ ಪುರುಷರಿಗಿಂತಲೂ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಮೈಗ್ರೇನ್ ತಲೆನೋವು ವಂಶಪರಂಪರಾಗತವಾಗಿ ಬರಬಹುದು. ಕೆಲವು ಮಹಿಳೆಯರಲ್ಲಿ , ಎಲ್ಲರಲ್ಲಿಯೂ ಅಲ್ಲ , ಅವರು ಗರ್ಭಿಣಿ ಆಗಿರುವಾಗ ಮೈಗ್ರೇನ್ ಕಾಣಿಸಿಕೊಳ್ಳಬಹುದು.
ಇದಕ್ಕೆ ನಿರ್ಧಿಷ್ಟ ಕಾರಣವನ್ನು ಹೇಳಲಾಗದಿದ್ದರೂ ಈ ಕೆಲವು ಸಾಮಾನ್ಯ ಕಾರಣಗಳನ್ನು ಹೇಳಬಹುದು.
1 ಹೆಚ್ಚು ಕೆಲಸದಿಂದಾಗಿ ಮಾನಸಿಕ ಒತ್ತಡ ಇರುವ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಇದು ಸಾಮಾನ್ಯ. ಅವರಿಗೆ ದಿನದ ಹೆಚ್ಚುಕಾಲ ಒತ್ತಡದ ಕೆಲಸ ಮತ್ತು ನಿದ್ರೆ ಕಡಿಮೆ, ಅನಿಯಮಿತ ಆಹಾರದ ಸೇವನೆ ಇರುತ್ತದೆ.
2 . ಮಾನಸಿಕ ಒತ್ತಡಗಳಾದ ಕೋಪ,ಚಿಂತೆ, ಖಿನ್ನತೆ,ಗಾಬರಿಗಳಿಂದ ತಲೆನೋವು ಉದ್ರೇಕವಾಗಬಹುದು.
3 .ಆಹಾರ ಸೇವನೆಯಿಂದ ವ್ಯತ್ಯಾಸವಾದ ಹಸಿವೆ, ಮದ್ಯ ಸೇವನೆ, ಕಡಿಮೆ ನೀರು ಕುಡಿಯುವುದರಿನ್ದಲೂ ತಲೆನೋವು ಉದ್ರೇಕವಾಗುತ್ತದೆ.
4 . ನಿದ್ರೆ ಮಾತ್ರೆ ಸೇವನೆ, ಬಿ. ಪಿ., ಹಲ್ಲು ನೋವು, ಕಣ್ಣಿನ ತೊಂದರೆ, ತಂಬಾಕು ಅಥವಾ ಸಿಗರೇಟು ಸೇವನೆ, ಗರ್ಭನಿರೋಧಕ ಮಾತ್ರೆ, ಮೂಗಿನ ಉಸಿರಾಟದ ತೊಂದರೆ, ಸಂಸ್ಕರಿಸದ ಆಹಾರ ಸೇವನೆ, ಅತಿ ಮುಖ್ಯವಾಗಿ ನಿದ್ರಾಹೀನತೆ ಮುಂತಾದುವುಗಳಿಂದ ಸಹ ತಲೆನೋವು ಉದ್ರೇಕಗೊಳ್ಳಬಹುದು.
5 . ಹೆಚ್ಚು ಕಾಲ ಬಿಸಿಲಿನಲ್ಲಿ ಇರುವುದು, ದೀರ್ಘಕಾಲ ಪ್ರಯಾಣ ಮಾಡುವುದು, ಮದುವೆ ಅಥವಾ ಇತರೆ ಗಲಾಟೆ ಇರುವ ಸಮಾರಂಭದಲ್ಲಿ ಹೆಚ್ಚು ಹೊತ್ತು ಭಾಗವಹಿಸುವುದು, ಕೆಲವರಿಗೆ ಹೆಚ್ಚಾಗಿ ಓದುವುದು, ಹೆಚ್ಚು ಕಾಲ ಸಿನೆಮಾ / ಟಿ. ವಿ, ನೋಡುವುದು ಇವುಗಳಿಂದ ತಲೆನೋವು ಉದ್ರೇಕಗೊಳಬಹುದು.
6 . ಕೆಲವು ಸ್ತ್ರೀಯರಿಗೆ ಋತುಚಕ್ರದ ಏರುಪೇರುಗಳಿಂದ ತಲೆನೋವು ಉದ್ರೇಕಗೊಳ್ಳಬಹುದು.
ಮೈಗ್ರೇನ್ ರೋಗಲಕ್ಷಣಗಳು:
ದೃಷ್ಟಿ ಅಸ್ತವ್ಯಸ್ತಗೊಳ್ಳುವುದು, ಅಥವಾ ಕಣ್ಣಿನ ಬದಿಗಳಲ್ಲಿ ಬೆಳಕಿನ ಬಿಂಬಗಳು ಅಥವಾ ಪ್ರಭಾವಳಿ ಸುತ್ತುತ್ತಿರುವಂತೆ ಅನ್ನಿಸುವುದನ್ನು ಮೈಗ್ರೇನ್ ಬರುತ್ತಿದೆ ಎನ್ನುವುದರ ಎಚ್ಚರಿಕೆಯ ಸೂಚನೆ ಎಂಬುದಾಗಿ ಪರಿಗಣಿಸಲಾಗುತ್ತದೆ. ಬೆಳಕಿನ ಬಿಂಬಗಳು ಒಂದು ಅಥವಾ ಎರಡೂ ಕಣ್ಣಿನ ಬದಿಗಳಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಳಗೆ ಹೇಳುವ ಒಂದು ಅಥವಾ ಎಲ್ಲ ರೋಗಲಕ್ಷಣಗಳ ಜತೆಗೆ ಕಾಣಿಸಿಕೊಳ್ಳಬಹುದು.
ಕಣ್ಣಿನಲ್ಲಿ ತಾತ್ಕಾಲಿಕವಾಗಿ ಆಂಶಿಕ ಕುರುಡುತನ ಅಥವಾ ಕಣ್ಣಿನ ಎದುರು ಕಪ್ಪು ಚುಕ್ಕೆಗಳು ಗೋಚರಿಸುವುದು,ದೃಷ್ಟಿ ಮಬ್ಟಾಗುವುದು,ಕಣ್ಣು ನೋವು,ಕಣ್ಣಿನ ಸುತ್ತಲೂ ನಕ್ಷತ್ರಗಳು ಅಥವಾ ಅಂಕುಡೊಂಕಾದ ಗೆರೆಗಳು ಗೋಚರಿಸುವುದು
ಕೊಳವೆಯೊಳಗಿನಿಂದ ನೋಡಿದಂತೆ ದೃಶ್ಯಗಳು ಅರೆಬರೆ ಕಾಣಿಸುವುದು (ಟನೆಲ್ಷನ್-ಕಣ್ಣಿನ ಮುಂಭಾಗದ ದೃಶ್ಯಗಳು ಮಾತ್ರವೇ ಗೋಚರಿಸಿ ಬದಿಗಳಲ್ಲಿನ ದೃಶ್ಯ ಕಾಣಿಸದೆಯೇ ಇರುವುದು)
ಮೈಗ್ರೇನ್ ಇರುವ ಎಲ್ಲ ವ್ಯಕ್ತಿಗಳಿಗೂ ಬೆಳಕಿನ ಪುಂಜ ಕಾಣಿಸದೆ ಇರಬಹುದು. ಇಂತಹ ಬೆಳಕಿನ ಪುಂಜ ಕಾಣಿಸಿಕೊಳ್ಳುವವರಲ್ಲಿ ತಲೆನೋವು ಕಾಣಿಸಿಕೊಳ್ಳುವುದಕ್ಕೆ ಸುಮಾರು 10-15 ನಿಮಿಷ ಮೊದಲು ಇದು ಕಾಣಿಸಿಕೊಳ್ಳಬಹುದು. ಹಾಗಿದ್ದರೂ ಸಹ ಅದು ಕೆಲವೇ ನಿಮಿಷಗಳಿಗೆ ಮೊದಲು ಅಥವಾ 24 ಗಂಟೆಗಳಿಗೂ ಮೊದಲು ಕಾಣಿಸಿಕೊಳ್ಳಬಹುದು. ಬೆಳಕಿನ ಪುಂಜ ಕಾಣಿಸಿಕೊಂಡ ಅನಂತರ ಯಾವಾಗಲೂ ತಲೆನೋವು ಬಂದೇ ಬರುತ್ತದೆ ಎಂದು ಹೇಳುವಂತಿಲ್ಲ.
ಮೈಗ್ರೇನ್ ತಲೆನೋವು ಬಹಳ ಸಣ್ಣದಾಗಿ ಇರಬಹುದು ಅಥವಾ ತೀವ್ರ ರೂಪದಲ್ಲಿಯೂ ಬಾಧಿಸಬಹುದು. ನೋವು ಕಣ್ಣಿನ ಹಿಂಭಾಗದಲ್ಲಿ ಅಥವಾ ಕತ್ತು ಮತ್ತು ತಲೆಯ ಹಿಂಭಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ರೋಗಿಗಳಲ್ಲಿ ಪ್ರತಿಯೊಂದು ಬಾರಿಯೂ ತಲೆನೋವು ಒಂದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ತಲೆನೋವು ಸಾಮಾನ್ಯವಾಗಿ ಈ ರೀತಿಯಲ್ಲಿ ಇರಬಹುದು.
ಬಹಳ ಸಣ್ಣದಾಗಿ ಆರಂಭವಾದ ನೋವು ಕೆಲವೇ ನಿಮಿಷಗಳಲ್ಲಿ ಅಥವಾ ಗಂಟೆಗಳಲ್ಲಿ ತೀವ್ರಗೊಳ್ಳಬಹುದು. 6 ರಿಂದ 48 ಗಂಟೆಗಳ ವರೆಗೂ ಇರಬಹುದು.
ಮೈಗ್ರೇನ್ ನ ನಿವಾರಣೆ :-
1 . ಮೈಗ್ರೇನ್ ತಲೆನೋವು ಬಂದಾಗ ಕೆಲವರಿಗೆ ಯಾವುದಾದರೂ ನೋವು ನಿವಾರಕ ಮಾತ್ರೆಯನ್ನು [ Pain killer ] ತೆಗೆದುಕೊಂಡರೆ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ.
2 . ಇನ್ನು ಕೆಲವರಿಗೆ ಏನನ್ನೂ ಉಪಯೋಗಿಸದೆ ನಿಷ್ಯಬ್ದವಾದ ಕೊಠಡಿಯಲ್ಲಿ ಕೆಲವು ಕಾಲ ವಿಶ್ರಾಂತಿ ತೆಗೆದುಕೊಳ್ಳುವುದರಿಂದಲೇ ತಲೆನೋವು ಕಡಿಮೆಯಾಗುತ್ತದೆ.
3 . ಇದಲ್ಲದೆ ಜೀವನ ಶೈಲಿಯನ್ನ್ನು ಬದಲಾಯಿಸಿಕೊಳ್ಳುವುದರಿಂದ ಈ ತೆರನ ತಲೆನೋವನ್ನು ನಿಯಂತ್ರಿಸಿಕೊಳ್ಳಬಹುದು.
ಮುನ್ಸೂಚನೆಗಳು:–
ಚಿಕಿತ್ಸೆಗೆ ಪ್ರತಿಯೊಬ್ಬನೂ ಸ್ಪಂದಿಸುವ ರೀತಿ ಹಾಗೂ ಪ್ರಮಾಣ ಭಿನ್ನ-ಭಿನ್ನವಾಗಿರುತ್ತವೆ. ಕೆಲವರಿಗೆ ಸ್ವಲ್ಪಮಟ್ಟಿನ ಚಿಕಿತ್ಸೆಯಿಂದ ಅಥವಾ ಚಿಕಿತ್ಸೆಯೇ ಇಲ್ಲದೆ ತಲೆನೋವು ಕಡಿಮೆ ಆಗಬಹುದು, ಇನ್ನು ಕೆಲವರಿಗೆ ಅನೇಕ ಔಷಧಿಗಳನ್ನು ಉಪಯೋಗಿಸಬೇಕಾಗಿ ಬರಬಹುದು ಅಥವಾ ಆಸ್ಪತ್ರೆಗೂ ಸೇರಬೇಕಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…