ಆರೋಗ್ಯ

ಈ ಕಾರಣಗಳಿಂದ ಮೈಗ್ರೇನ್‌ ತಲೆನೋವು ಬರುತ್ತದೆ..!ಇದರ ನಿವಾರಣೆ ಹೇಗೆ?ತಿಳಿಯಲು ಈ ಲೇಖನ ಓದಿ…

2882

ಮೈಗ್ರೇನ್‌ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ  ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

ಹಾಗೆಂದು ಎಲ್ಲಾ ತಲೆನೋವುಗಳೂ ಮೈಗ್ರೇನ್ ಅಲ್ಲ. ದೃಷ್ಟಿದೋಷ, ನೆಗಡಿಗೆ ಸಂಬಂಧಿಸಿದ ತೊಂದರೆಗಳು, ಜ್ವರ ಇತ್ಯಾದಿ ಕಾರಣಗಳಿಂದಲೂ ತಲೆನೋವು ಬರುತ್ತದೆ. ಆದರೆ ಅದು ಮೈಗ್ರೇನ್ ಅಲ್ಲ. ಆದರೆ ಮೈಗ್ರೇನ್ ತಲೆನೋವು ಅತ್ಯಂತ ಸಾಮಾನ್ಯವಾದದ್ದು.

ಮೈಗ್ರೇನ್ ಎಂದರೇನು ?

ಕೆಲವು ಕಾರಣಗಳಿಂದ ಒಂದು ವ್ಯಕ್ತಿಯ ತಲೆಯೊಳಗಿನ ರಕ್ತನಾಳಗಳ ಗಾತ್ರದಲ್ಲಿ ಅಸ್ತಿರತೆಯುಂಟಾಗಿ, ಅವು ಮೊದಲು ಸಂಕುಚಿತವಾಗಿ ನಂತರ ವಿಕಸಿತವಾಗುತ್ತದೆ.ಆಗ ರಕ್ತನಾಳಗಳಿಗೆ ಸಂಬಂಧಿಸಿದ ಸೂಕ್ಷ್ಮ ನರಗಳು ಉದ್ರೇಕಗೊಂಡು ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಅದೇ ಮೈಗ್ರೇನ್.

ಕಾರಣಗಳು, ಸಂದರ್ಭ ಮತ್ತು ಅಪಾಯಕಾರಿ ಅಂಶಗಳು:

ಸಾಮಾನ್ಯವಾಗಿ ಮೈಗ್ರೇನ್‌ ತಲೆನೋವು 10 ರಿಂದ 45 ವಯಸ್ಸಿನ ನಡುವೆ ಕಾಣಿಸಿಕೊಳ್ಳುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಜೀವನದ ಅಂತಿಮ ಹಂತಗಳಲ್ಲಿಯೂ ಸಹ ಕಾಣಿಸಿಕೊಳ್ಳಬಹುದು.ಮೈಗ್ರೇನ್‌ ಪುರುಷರಿಗಿಂತಲೂ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಮೈಗ್ರೇನ್‌ ತಲೆನೋವು ವಂಶಪರಂಪರಾಗತವಾಗಿ ಬರಬಹುದು. ಕೆಲವು ಮಹಿಳೆಯರಲ್ಲಿ , ಎಲ್ಲರಲ್ಲಿಯೂ ಅಲ್ಲ , ಅವರು ಗರ್ಭಿಣಿ ಆಗಿರುವಾಗ ಮೈಗ್ರೇನ್‌ ಕಾಣಿಸಿಕೊಳ್ಳಬಹುದು.

ಇದಕ್ಕೆ ನಿರ್ಧಿಷ್ಟ ಕಾರಣವನ್ನು ಹೇಳಲಾಗದಿದ್ದರೂ ಈ ಕೆಲವು ಸಾಮಾನ್ಯ ಕಾರಣಗಳನ್ನು ಹೇಳಬಹುದು.
1  ಹೆಚ್ಚು ಕೆಲಸದಿಂದಾಗಿ ಮಾನಸಿಕ ಒತ್ತಡ ಇರುವ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಇದು ಸಾಮಾನ್ಯ. ಅವರಿಗೆ ದಿನದ ಹೆಚ್ಚುಕಾಲ  ಒತ್ತಡದ ಕೆಲಸ ಮತ್ತು ನಿದ್ರೆ ಕಡಿಮೆ, ಅನಿಯಮಿತ ಆಹಾರದ ಸೇವನೆ ಇರುತ್ತದೆ.

2 . ಮಾನಸಿಕ ಒತ್ತಡಗಳಾದ ಕೋಪ,ಚಿಂತೆ, ಖಿನ್ನತೆ,ಗಾಬರಿಗಳಿಂದ ತಲೆನೋವು ಉದ್ರೇಕವಾಗಬಹುದು.

3 .ಆಹಾರ ಸೇವನೆಯಿಂದ ವ್ಯತ್ಯಾಸವಾದ ಹಸಿವೆ, ಮದ್ಯ ಸೇವನೆ, ಕಡಿಮೆ ನೀರು ಕುಡಿಯುವುದರಿನ್ದಲೂ ತಲೆನೋವು ಉದ್ರೇಕವಾಗುತ್ತದೆ.

4 . ನಿದ್ರೆ ಮಾತ್ರೆ ಸೇವನೆ,  ಬಿ. ಪಿ.,  ಹಲ್ಲು ನೋವು, ಕಣ್ಣಿನ ತೊಂದರೆ, ತಂಬಾಕು ಅಥವಾ ಸಿಗರೇಟು ಸೇವನೆ, ಗರ್ಭನಿರೋಧಕ ಮಾತ್ರೆ, ಮೂಗಿನ ಉಸಿರಾಟದ ತೊಂದರೆ, ಸಂಸ್ಕರಿಸದ ಆಹಾರ ಸೇವನೆ, ಅತಿ ಮುಖ್ಯವಾಗಿ ನಿದ್ರಾಹೀನತೆ ಮುಂತಾದುವುಗಳಿಂದ ಸಹ ತಲೆನೋವು ಉದ್ರೇಕಗೊಳ್ಳಬಹುದು.

5 . ಹೆಚ್ಚು ಕಾಲ ಬಿಸಿಲಿನಲ್ಲಿ ಇರುವುದು, ದೀರ್ಘಕಾಲ ಪ್ರಯಾಣ ಮಾಡುವುದು, ಮದುವೆ ಅಥವಾ ಇತರೆ ಗಲಾಟೆ ಇರುವ ಸಮಾರಂಭದಲ್ಲಿ ಹೆಚ್ಚು ಹೊತ್ತು ಭಾಗವಹಿಸುವುದು, ಕೆಲವರಿಗೆ  ಹೆಚ್ಚಾಗಿ ಓದುವುದು, ಹೆಚ್ಚು ಕಾಲ ಸಿನೆಮಾ / ಟಿ. ವಿ, ನೋಡುವುದು ಇವುಗಳಿಂದ ತಲೆನೋವು ಉದ್ರೇಕಗೊಳಬಹುದು.

6 . ಕೆಲವು ಸ್ತ್ರೀಯರಿಗೆ ಋತುಚಕ್ರದ ಏರುಪೇರುಗಳಿಂದ ತಲೆನೋವು ಉದ್ರೇಕಗೊಳ್ಳಬಹುದು.

ಮೈಗ್ರೇನ್  ರೋಗಲಕ್ಷಣಗಳು:

ದೃಷ್ಟಿ ಅಸ್ತವ್ಯಸ್ತಗೊಳ್ಳುವುದು, ಅಥವಾ ಕಣ್ಣಿನ ಬದಿಗಳಲ್ಲಿ ಬೆಳಕಿನ ಬಿಂಬಗಳು ಅಥವಾ ಪ್ರಭಾವಳಿ ಸುತ್ತುತ್ತಿರುವಂತೆ ಅನ್ನಿಸುವುದನ್ನು  ಮೈಗ್ರೇನ್‌ ಬರುತ್ತಿದೆ ಎನ್ನುವುದರ ಎಚ್ಚರಿಕೆಯ ಸೂಚನೆ ಎಂಬುದಾಗಿ ಪರಿಗಣಿಸಲಾಗುತ್ತದೆ. ಬೆಳಕಿನ ಬಿಂಬಗಳು ಒಂದು ಅಥವಾ ಎರಡೂ ಕಣ್ಣಿನ ಬದಿಗಳಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಳಗೆ ಹೇಳುವ ಒಂದು ಅಥವಾ ಎಲ್ಲ ರೋಗಲಕ್ಷಣಗಳ ಜತೆಗೆ ಕಾಣಿಸಿಕೊಳ್ಳಬಹುದು.

ಕಣ್ಣಿನಲ್ಲಿ ತಾತ್ಕಾಲಿಕವಾಗಿ ಆಂಶಿಕ ಕುರುಡುತನ ಅಥವಾ ಕಣ್ಣಿನ ಎದುರು ಕಪ್ಪು ಚುಕ್ಕೆಗಳು ಗೋಚರಿಸುವುದು,ದೃಷ್ಟಿ  ಮಬ್ಟಾಗುವುದು,ಕಣ್ಣು ನೋವು,ಕಣ್ಣಿನ ಸುತ್ತಲೂ ನಕ್ಷತ್ರಗಳು ಅಥವಾ ಅಂಕುಡೊಂಕಾದ ಗೆರೆಗಳು ಗೋಚರಿಸುವುದು

ಕೊಳವೆಯೊಳಗಿನಿಂದ ನೋಡಿದಂತೆ ದೃಶ್ಯಗಳು ಅರೆಬರೆ ಕಾಣಿಸುವುದು (ಟನೆಲ್‌ಷನ್‌-ಕಣ್ಣಿನ ಮುಂಭಾಗದ ದೃಶ್ಯಗಳು ಮಾತ್ರವೇ ಗೋಚರಿಸಿ ಬದಿಗಳಲ್ಲಿನ ದೃಶ್ಯ ಕಾಣಿಸದೆಯೇ ಇರುವುದು)

ಮೈಗ್ರೇನ್‌ ಇರುವ ಎಲ್ಲ ವ್ಯಕ್ತಿಗಳಿಗೂ ಬೆಳಕಿನ ಪುಂಜ ಕಾಣಿಸದೆ ಇರಬಹುದು. ಇಂತಹ ಬೆಳಕಿನ ಪುಂಜ ಕಾಣಿಸಿಕೊಳ್ಳುವವರಲ್ಲಿ ತಲೆನೋವು ಕಾಣಿಸಿಕೊಳ್ಳುವುದಕ್ಕೆ ಸುಮಾರು 10-15 ನಿಮಿಷ ಮೊದಲು ಇದು ಕಾಣಿಸಿಕೊಳ್ಳಬಹುದು.  ಹಾಗಿದ್ದರೂ ಸಹ ಅದು ಕೆಲವೇ ನಿಮಿಷಗಳಿಗೆ ಮೊದಲು ಅಥವಾ 24 ಗಂಟೆಗಳಿಗೂ ಮೊದಲು ಕಾಣಿಸಿಕೊಳ್ಳಬಹುದು. ಬೆಳಕಿನ ಪುಂಜ ಕಾಣಿಸಿಕೊಂಡ ಅನಂತರ ಯಾವಾಗಲೂ ತಲೆನೋವು ಬಂದೇ ಬರುತ್ತದೆ ಎಂದು ಹೇಳುವಂತಿಲ್ಲ.

ಮೈಗ್ರೇನ್‌ ತಲೆನೋವು ಬಹಳ ಸಣ್ಣದಾಗಿ ಇರಬಹುದು ಅಥವಾ ತೀವ್ರ ರೂಪದಲ್ಲಿಯೂ ಬಾಧಿಸಬಹುದು. ನೋವು ಕಣ್ಣಿನ ಹಿಂಭಾಗದಲ್ಲಿ ಅಥವಾ ಕತ್ತು ಮತ್ತು ತಲೆಯ ಹಿಂಭಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ರೋಗಿಗಳಲ್ಲಿ  ಪ್ರತಿಯೊಂದು ಬಾರಿಯೂ ತಲೆನೋವು ಒಂದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ತಲೆನೋವು ಸಾಮಾನ್ಯವಾಗಿ ಈ ರೀತಿಯಲ್ಲಿ ಇರಬಹುದು.

 

ಬಹಳ ಸಣ್ಣದಾಗಿ ಆರಂಭವಾದ ನೋವು ಕೆಲವೇ ನಿಮಿಷಗಳಲ್ಲಿ ಅಥವಾ ಗಂಟೆಗಳಲ್ಲಿ ತೀವ್ರಗೊಳ್ಳಬಹುದು. 6 ರಿಂದ 48 ಗಂಟೆಗಳ ವರೆಗೂ ಇರಬಹುದು.

ಮೈಗ್ರೇನ್ ನ ನಿವಾರಣೆ :-

1 . ಮೈಗ್ರೇನ್ ತಲೆನೋವು ಬಂದಾಗ ಕೆಲವರಿಗೆ ಯಾವುದಾದರೂ ನೋವು ನಿವಾರಕ ಮಾತ್ರೆಯನ್ನು [ Pain killer ] ತೆಗೆದುಕೊಂಡರೆ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ.

2 . ಇನ್ನು ಕೆಲವರಿಗೆ ಏನನ್ನೂ ಉಪಯೋಗಿಸದೆ ನಿಷ್ಯಬ್ದವಾದ ಕೊಠಡಿಯಲ್ಲಿ ಕೆಲವು ಕಾಲ ವಿಶ್ರಾಂತಿ ತೆಗೆದುಕೊಳ್ಳುವುದರಿಂದಲೇ ತಲೆನೋವು ಕಡಿಮೆಯಾಗುತ್ತದೆ.

3 . ಇದಲ್ಲದೆ ಜೀವನ ಶೈಲಿಯನ್ನ್ನು ಬದಲಾಯಿಸಿಕೊಳ್ಳುವುದರಿಂದ ಈ ತೆರನ ತಲೆನೋವನ್ನು ನಿಯಂತ್ರಿಸಿಕೊಳ್ಳಬಹುದು.

  • ಸರಿಯಾದ ಸಮಯಕ್ಕೆ ನಿದ್ರೆ ಮಾಡುವುದು.
  • ನಿತ್ಯ ವ್ಯಾಯಾಮ.
  • ಸರಿಯಾದ ಊಟದ ಕ್ರಮ. ಪೌಷ್ಟಿಕ ಆಹಾರದ ಸೇವನೆ.
  • ತಂಬಾಕು, ಮದ್ಯ ಸೇವನೆಯಿಂದ ದೂರ ಇರುವುದು. ಕಾಫಿ ಕುಡಿಯುವುದನ್ನು ಕಡಿಮೆ ಮಾಡುವುದು.
  • ಜೀವನದ ಬಗ್ಯೆ ಸಕಾರಾತ್ಮಕ ಮನೋಭಾವ.

ಮುನ್ಸೂಚನೆಗಳು:
ಚಿಕಿತ್ಸೆಗೆ ಪ್ರತಿಯೊಬ್ಬನೂ ಸ್ಪಂದಿಸುವ ರೀತಿ ಹಾಗೂ ಪ್ರಮಾಣ ಭಿನ್ನ-ಭಿನ್ನವಾಗಿರುತ್ತವೆ. ಕೆಲವರಿಗೆ ಸ್ವಲ್ಪಮಟ್ಟಿನ ಚಿಕಿತ್ಸೆಯಿಂದ ಅಥವಾ ಚಿಕಿತ್ಸೆಯೇ ಇಲ್ಲದೆ ತಲೆನೋವು ಕಡಿಮೆ ಆಗಬಹುದು, ಇನ್ನು ಕೆಲವರಿಗೆ ಅನೇಕ ಔಷಧಿಗಳನ್ನು ಉಪಯೋಗಿಸಬೇಕಾಗಿ ಬರಬಹುದು ಅಥವಾ ಆಸ್ಪತ್ರೆಗೂ ಸೇರಬೇಕಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

  • ವಿಸ್ಮಯ ಜಗತ್ತು

    ಮೊಟ್ಟೆಯೊಳಗೆ ಇನ್ನೊಂದು ಮೊಟ್ಟೆ..!ಇದು ಹೇಗೆ ಸಾಧ್ಯ ಅಂತೀರಾ…ಏನಿದು ವಿಸ್ಮಯ ಓದಿ ತಿಳಿಯಿರಿ…

    ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್‍ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.

  • ಸುದ್ದಿ

    ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್‍ಗಿಂತ ದುಬಾರಿಯಾದ ಡೀಸೆಲ್.

    ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್‍ಗೆ ಪೆಟ್ರೋಲ್‍ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್‍ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್‍ಗಿಂತ ಡೀಸೆಲ್ ಬೆಲೆ 12 ಪೈಸೆ…

  • ಸುದ್ದಿ

    ಅನಾಥ ಯುವತಿಯರನ್ನು ಮದುವೆಯಾದ ಅಂಕೋಲದ ಯುವಕರು ವಿಜೃಂಭಣೆಯಿಂದ, ಶಾಸ್ತ್ರೋಕ್ತವಾಗಿ ಧಾರೆಯೆರೆದು ಕೊಟ್ಟ ಮಾತೃಛಾಯಾ ಟ್ರಸ್ಟ್…!

    ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್​ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…