ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

ಹಾಗೆಂದು ಎಲ್ಲಾ ತಲೆನೋವುಗಳೂ ಮೈಗ್ರೇನ್ ಅಲ್ಲ. ದೃಷ್ಟಿದೋಷ, ನೆಗಡಿಗೆ ಸಂಬಂಧಿಸಿದ ತೊಂದರೆಗಳು, ಜ್ವರ ಇತ್ಯಾದಿ ಕಾರಣಗಳಿಂದಲೂ ತಲೆನೋವು ಬರುತ್ತದೆ. ಆದರೆ ಅದು ಮೈಗ್ರೇನ್ ಅಲ್ಲ. ಆದರೆ ಮೈಗ್ರೇನ್ ತಲೆನೋವು ಅತ್ಯಂತ ಸಾಮಾನ್ಯವಾದದ್ದು.
ಮೈಗ್ರೇನ್ ಎಂದರೇನು ?
ಕೆಲವು ಕಾರಣಗಳಿಂದ ಒಂದು ವ್ಯಕ್ತಿಯ ತಲೆಯೊಳಗಿನ ರಕ್ತನಾಳಗಳ ಗಾತ್ರದಲ್ಲಿ ಅಸ್ತಿರತೆಯುಂಟಾಗಿ, ಅವು ಮೊದಲು ಸಂಕುಚಿತವಾಗಿ ನಂತರ ವಿಕಸಿತವಾಗುತ್ತದೆ.ಆಗ ರಕ್ತನಾಳಗಳಿಗೆ ಸಂಬಂಧಿಸಿದ ಸೂಕ್ಷ್ಮ ನರಗಳು ಉದ್ರೇಕಗೊಂಡು ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಅದೇ ಮೈಗ್ರೇನ್.

ಕಾರಣಗಳು, ಸಂದರ್ಭ ಮತ್ತು ಅಪಾಯಕಾರಿ ಅಂಶಗಳು:
ಸಾಮಾನ್ಯವಾಗಿ ಮೈಗ್ರೇನ್ ತಲೆನೋವು 10 ರಿಂದ 45 ವಯಸ್ಸಿನ ನಡುವೆ ಕಾಣಿಸಿಕೊಳ್ಳುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಜೀವನದ ಅಂತಿಮ ಹಂತಗಳಲ್ಲಿಯೂ ಸಹ ಕಾಣಿಸಿಕೊಳ್ಳಬಹುದು.ಮೈಗ್ರೇನ್ ಪುರುಷರಿಗಿಂತಲೂ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಮೈಗ್ರೇನ್ ತಲೆನೋವು ವಂಶಪರಂಪರಾಗತವಾಗಿ ಬರಬಹುದು. ಕೆಲವು ಮಹಿಳೆಯರಲ್ಲಿ , ಎಲ್ಲರಲ್ಲಿಯೂ ಅಲ್ಲ , ಅವರು ಗರ್ಭಿಣಿ ಆಗಿರುವಾಗ ಮೈಗ್ರೇನ್ ಕಾಣಿಸಿಕೊಳ್ಳಬಹುದು.

ಇದಕ್ಕೆ ನಿರ್ಧಿಷ್ಟ ಕಾರಣವನ್ನು ಹೇಳಲಾಗದಿದ್ದರೂ ಈ ಕೆಲವು ಸಾಮಾನ್ಯ ಕಾರಣಗಳನ್ನು ಹೇಳಬಹುದು.
1 ಹೆಚ್ಚು ಕೆಲಸದಿಂದಾಗಿ ಮಾನಸಿಕ ಒತ್ತಡ ಇರುವ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಇದು ಸಾಮಾನ್ಯ. ಅವರಿಗೆ ದಿನದ ಹೆಚ್ಚುಕಾಲ ಒತ್ತಡದ ಕೆಲಸ ಮತ್ತು ನಿದ್ರೆ ಕಡಿಮೆ, ಅನಿಯಮಿತ ಆಹಾರದ ಸೇವನೆ ಇರುತ್ತದೆ.
2 . ಮಾನಸಿಕ ಒತ್ತಡಗಳಾದ ಕೋಪ,ಚಿಂತೆ, ಖಿನ್ನತೆ,ಗಾಬರಿಗಳಿಂದ ತಲೆನೋವು ಉದ್ರೇಕವಾಗಬಹುದು.
3 .ಆಹಾರ ಸೇವನೆಯಿಂದ ವ್ಯತ್ಯಾಸವಾದ ಹಸಿವೆ, ಮದ್ಯ ಸೇವನೆ, ಕಡಿಮೆ ನೀರು ಕುಡಿಯುವುದರಿನ್ದಲೂ ತಲೆನೋವು ಉದ್ರೇಕವಾಗುತ್ತದೆ.
4 . ನಿದ್ರೆ ಮಾತ್ರೆ ಸೇವನೆ, ಬಿ. ಪಿ., ಹಲ್ಲು ನೋವು, ಕಣ್ಣಿನ ತೊಂದರೆ, ತಂಬಾಕು ಅಥವಾ ಸಿಗರೇಟು ಸೇವನೆ, ಗರ್ಭನಿರೋಧಕ ಮಾತ್ರೆ, ಮೂಗಿನ ಉಸಿರಾಟದ ತೊಂದರೆ, ಸಂಸ್ಕರಿಸದ ಆಹಾರ ಸೇವನೆ, ಅತಿ ಮುಖ್ಯವಾಗಿ ನಿದ್ರಾಹೀನತೆ ಮುಂತಾದುವುಗಳಿಂದ ಸಹ ತಲೆನೋವು ಉದ್ರೇಕಗೊಳ್ಳಬಹುದು.
5 . ಹೆಚ್ಚು ಕಾಲ ಬಿಸಿಲಿನಲ್ಲಿ ಇರುವುದು, ದೀರ್ಘಕಾಲ ಪ್ರಯಾಣ ಮಾಡುವುದು, ಮದುವೆ ಅಥವಾ ಇತರೆ ಗಲಾಟೆ ಇರುವ ಸಮಾರಂಭದಲ್ಲಿ ಹೆಚ್ಚು ಹೊತ್ತು ಭಾಗವಹಿಸುವುದು, ಕೆಲವರಿಗೆ ಹೆಚ್ಚಾಗಿ ಓದುವುದು, ಹೆಚ್ಚು ಕಾಲ ಸಿನೆಮಾ / ಟಿ. ವಿ, ನೋಡುವುದು ಇವುಗಳಿಂದ ತಲೆನೋವು ಉದ್ರೇಕಗೊಳಬಹುದು.
6 . ಕೆಲವು ಸ್ತ್ರೀಯರಿಗೆ ಋತುಚಕ್ರದ ಏರುಪೇರುಗಳಿಂದ ತಲೆನೋವು ಉದ್ರೇಕಗೊಳ್ಳಬಹುದು.

ಮೈಗ್ರೇನ್ ರೋಗಲಕ್ಷಣಗಳು:
ದೃಷ್ಟಿ ಅಸ್ತವ್ಯಸ್ತಗೊಳ್ಳುವುದು, ಅಥವಾ ಕಣ್ಣಿನ ಬದಿಗಳಲ್ಲಿ ಬೆಳಕಿನ ಬಿಂಬಗಳು ಅಥವಾ ಪ್ರಭಾವಳಿ ಸುತ್ತುತ್ತಿರುವಂತೆ ಅನ್ನಿಸುವುದನ್ನು ಮೈಗ್ರೇನ್ ಬರುತ್ತಿದೆ ಎನ್ನುವುದರ ಎಚ್ಚರಿಕೆಯ ಸೂಚನೆ ಎಂಬುದಾಗಿ ಪರಿಗಣಿಸಲಾಗುತ್ತದೆ. ಬೆಳಕಿನ ಬಿಂಬಗಳು ಒಂದು ಅಥವಾ ಎರಡೂ ಕಣ್ಣಿನ ಬದಿಗಳಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಳಗೆ ಹೇಳುವ ಒಂದು ಅಥವಾ ಎಲ್ಲ ರೋಗಲಕ್ಷಣಗಳ ಜತೆಗೆ ಕಾಣಿಸಿಕೊಳ್ಳಬಹುದು.
ಕಣ್ಣಿನಲ್ಲಿ ತಾತ್ಕಾಲಿಕವಾಗಿ ಆಂಶಿಕ ಕುರುಡುತನ ಅಥವಾ ಕಣ್ಣಿನ ಎದುರು ಕಪ್ಪು ಚುಕ್ಕೆಗಳು ಗೋಚರಿಸುವುದು,ದೃಷ್ಟಿ ಮಬ್ಟಾಗುವುದು,ಕಣ್ಣು ನೋವು,ಕಣ್ಣಿನ ಸುತ್ತಲೂ ನಕ್ಷತ್ರಗಳು ಅಥವಾ ಅಂಕುಡೊಂಕಾದ ಗೆರೆಗಳು ಗೋಚರಿಸುವುದು
ಕೊಳವೆಯೊಳಗಿನಿಂದ ನೋಡಿದಂತೆ ದೃಶ್ಯಗಳು ಅರೆಬರೆ ಕಾಣಿಸುವುದು (ಟನೆಲ್ಷನ್-ಕಣ್ಣಿನ ಮುಂಭಾಗದ ದೃಶ್ಯಗಳು ಮಾತ್ರವೇ ಗೋಚರಿಸಿ ಬದಿಗಳಲ್ಲಿನ ದೃಶ್ಯ ಕಾಣಿಸದೆಯೇ ಇರುವುದು)
ಮೈಗ್ರೇನ್ ಇರುವ ಎಲ್ಲ ವ್ಯಕ್ತಿಗಳಿಗೂ ಬೆಳಕಿನ ಪುಂಜ ಕಾಣಿಸದೆ ಇರಬಹುದು. ಇಂತಹ ಬೆಳಕಿನ ಪುಂಜ ಕಾಣಿಸಿಕೊಳ್ಳುವವರಲ್ಲಿ ತಲೆನೋವು ಕಾಣಿಸಿಕೊಳ್ಳುವುದಕ್ಕೆ ಸುಮಾರು 10-15 ನಿಮಿಷ ಮೊದಲು ಇದು ಕಾಣಿಸಿಕೊಳ್ಳಬಹುದು. ಹಾಗಿದ್ದರೂ ಸಹ ಅದು ಕೆಲವೇ ನಿಮಿಷಗಳಿಗೆ ಮೊದಲು ಅಥವಾ 24 ಗಂಟೆಗಳಿಗೂ ಮೊದಲು ಕಾಣಿಸಿಕೊಳ್ಳಬಹುದು. ಬೆಳಕಿನ ಪುಂಜ ಕಾಣಿಸಿಕೊಂಡ ಅನಂತರ ಯಾವಾಗಲೂ ತಲೆನೋವು ಬಂದೇ ಬರುತ್ತದೆ ಎಂದು ಹೇಳುವಂತಿಲ್ಲ.
ಮೈಗ್ರೇನ್ ತಲೆನೋವು ಬಹಳ ಸಣ್ಣದಾಗಿ ಇರಬಹುದು ಅಥವಾ ತೀವ್ರ ರೂಪದಲ್ಲಿಯೂ ಬಾಧಿಸಬಹುದು. ನೋವು ಕಣ್ಣಿನ ಹಿಂಭಾಗದಲ್ಲಿ ಅಥವಾ ಕತ್ತು ಮತ್ತು ತಲೆಯ ಹಿಂಭಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ರೋಗಿಗಳಲ್ಲಿ ಪ್ರತಿಯೊಂದು ಬಾರಿಯೂ ತಲೆನೋವು ಒಂದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ತಲೆನೋವು ಸಾಮಾನ್ಯವಾಗಿ ಈ ರೀತಿಯಲ್ಲಿ ಇರಬಹುದು.
ಬಹಳ ಸಣ್ಣದಾಗಿ ಆರಂಭವಾದ ನೋವು ಕೆಲವೇ ನಿಮಿಷಗಳಲ್ಲಿ ಅಥವಾ ಗಂಟೆಗಳಲ್ಲಿ ತೀವ್ರಗೊಳ್ಳಬಹುದು. 6 ರಿಂದ 48 ಗಂಟೆಗಳ ವರೆಗೂ ಇರಬಹುದು.

ಮೈಗ್ರೇನ್ ನ ನಿವಾರಣೆ :-
1 . ಮೈಗ್ರೇನ್ ತಲೆನೋವು ಬಂದಾಗ ಕೆಲವರಿಗೆ ಯಾವುದಾದರೂ ನೋವು ನಿವಾರಕ ಮಾತ್ರೆಯನ್ನು [ Pain killer ] ತೆಗೆದುಕೊಂಡರೆ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ.
2 . ಇನ್ನು ಕೆಲವರಿಗೆ ಏನನ್ನೂ ಉಪಯೋಗಿಸದೆ ನಿಷ್ಯಬ್ದವಾದ ಕೊಠಡಿಯಲ್ಲಿ ಕೆಲವು ಕಾಲ ವಿಶ್ರಾಂತಿ ತೆಗೆದುಕೊಳ್ಳುವುದರಿಂದಲೇ ತಲೆನೋವು ಕಡಿಮೆಯಾಗುತ್ತದೆ.
3 . ಇದಲ್ಲದೆ ಜೀವನ ಶೈಲಿಯನ್ನ್ನು ಬದಲಾಯಿಸಿಕೊಳ್ಳುವುದರಿಂದ ಈ ತೆರನ ತಲೆನೋವನ್ನು ನಿಯಂತ್ರಿಸಿಕೊಳ್ಳಬಹುದು.
ಮುನ್ಸೂಚನೆಗಳು:–
ಚಿಕಿತ್ಸೆಗೆ ಪ್ರತಿಯೊಬ್ಬನೂ ಸ್ಪಂದಿಸುವ ರೀತಿ ಹಾಗೂ ಪ್ರಮಾಣ ಭಿನ್ನ-ಭಿನ್ನವಾಗಿರುತ್ತವೆ. ಕೆಲವರಿಗೆ ಸ್ವಲ್ಪಮಟ್ಟಿನ ಚಿಕಿತ್ಸೆಯಿಂದ ಅಥವಾ ಚಿಕಿತ್ಸೆಯೇ ಇಲ್ಲದೆ ತಲೆನೋವು ಕಡಿಮೆ ಆಗಬಹುದು, ಇನ್ನು ಕೆಲವರಿಗೆ ಅನೇಕ ಔಷಧಿಗಳನ್ನು ಉಪಯೋಗಿಸಬೇಕಾಗಿ ಬರಬಹುದು ಅಥವಾ ಆಸ್ಪತ್ರೆಗೂ ಸೇರಬೇಕಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…
ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…