News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಈ ಕಾರಣಗಳಿಂದ ಮೈಗ್ರೇನ್‌ ತಲೆನೋವು ಬರುತ್ತದೆ..!ಇದರ ನಿವಾರಣೆ ಹೇಗೆ?ತಿಳಿಯಲು ಈ ಲೇಖನ ಓದಿ…

2902

ಮೈಗ್ರೇನ್‌ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ  ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

ಹಾಗೆಂದು ಎಲ್ಲಾ ತಲೆನೋವುಗಳೂ ಮೈಗ್ರೇನ್ ಅಲ್ಲ. ದೃಷ್ಟಿದೋಷ, ನೆಗಡಿಗೆ ಸಂಬಂಧಿಸಿದ ತೊಂದರೆಗಳು, ಜ್ವರ ಇತ್ಯಾದಿ ಕಾರಣಗಳಿಂದಲೂ ತಲೆನೋವು ಬರುತ್ತದೆ. ಆದರೆ ಅದು ಮೈಗ್ರೇನ್ ಅಲ್ಲ. ಆದರೆ ಮೈಗ್ರೇನ್ ತಲೆನೋವು ಅತ್ಯಂತ ಸಾಮಾನ್ಯವಾದದ್ದು.

ಮೈಗ್ರೇನ್ ಎಂದರೇನು ?

ಕೆಲವು ಕಾರಣಗಳಿಂದ ಒಂದು ವ್ಯಕ್ತಿಯ ತಲೆಯೊಳಗಿನ ರಕ್ತನಾಳಗಳ ಗಾತ್ರದಲ್ಲಿ ಅಸ್ತಿರತೆಯುಂಟಾಗಿ, ಅವು ಮೊದಲು ಸಂಕುಚಿತವಾಗಿ ನಂತರ ವಿಕಸಿತವಾಗುತ್ತದೆ.ಆಗ ರಕ್ತನಾಳಗಳಿಗೆ ಸಂಬಂಧಿಸಿದ ಸೂಕ್ಷ್ಮ ನರಗಳು ಉದ್ರೇಕಗೊಂಡು ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಅದೇ ಮೈಗ್ರೇನ್.

ಕಾರಣಗಳು, ಸಂದರ್ಭ ಮತ್ತು ಅಪಾಯಕಾರಿ ಅಂಶಗಳು:

ಸಾಮಾನ್ಯವಾಗಿ ಮೈಗ್ರೇನ್‌ ತಲೆನೋವು 10 ರಿಂದ 45 ವಯಸ್ಸಿನ ನಡುವೆ ಕಾಣಿಸಿಕೊಳ್ಳುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಜೀವನದ ಅಂತಿಮ ಹಂತಗಳಲ್ಲಿಯೂ ಸಹ ಕಾಣಿಸಿಕೊಳ್ಳಬಹುದು.ಮೈಗ್ರೇನ್‌ ಪುರುಷರಿಗಿಂತಲೂ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಮೈಗ್ರೇನ್‌ ತಲೆನೋವು ವಂಶಪರಂಪರಾಗತವಾಗಿ ಬರಬಹುದು. ಕೆಲವು ಮಹಿಳೆಯರಲ್ಲಿ , ಎಲ್ಲರಲ್ಲಿಯೂ ಅಲ್ಲ , ಅವರು ಗರ್ಭಿಣಿ ಆಗಿರುವಾಗ ಮೈಗ್ರೇನ್‌ ಕಾಣಿಸಿಕೊಳ್ಳಬಹುದು.

ಇದಕ್ಕೆ ನಿರ್ಧಿಷ್ಟ ಕಾರಣವನ್ನು ಹೇಳಲಾಗದಿದ್ದರೂ ಈ ಕೆಲವು ಸಾಮಾನ್ಯ ಕಾರಣಗಳನ್ನು ಹೇಳಬಹುದು.
1  ಹೆಚ್ಚು ಕೆಲಸದಿಂದಾಗಿ ಮಾನಸಿಕ ಒತ್ತಡ ಇರುವ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಇದು ಸಾಮಾನ್ಯ. ಅವರಿಗೆ ದಿನದ ಹೆಚ್ಚುಕಾಲ  ಒತ್ತಡದ ಕೆಲಸ ಮತ್ತು ನಿದ್ರೆ ಕಡಿಮೆ, ಅನಿಯಮಿತ ಆಹಾರದ ಸೇವನೆ ಇರುತ್ತದೆ.

2 . ಮಾನಸಿಕ ಒತ್ತಡಗಳಾದ ಕೋಪ,ಚಿಂತೆ, ಖಿನ್ನತೆ,ಗಾಬರಿಗಳಿಂದ ತಲೆನೋವು ಉದ್ರೇಕವಾಗಬಹುದು.

3 .ಆಹಾರ ಸೇವನೆಯಿಂದ ವ್ಯತ್ಯಾಸವಾದ ಹಸಿವೆ, ಮದ್ಯ ಸೇವನೆ, ಕಡಿಮೆ ನೀರು ಕುಡಿಯುವುದರಿನ್ದಲೂ ತಲೆನೋವು ಉದ್ರೇಕವಾಗುತ್ತದೆ.

4 . ನಿದ್ರೆ ಮಾತ್ರೆ ಸೇವನೆ,  ಬಿ. ಪಿ.,  ಹಲ್ಲು ನೋವು, ಕಣ್ಣಿನ ತೊಂದರೆ, ತಂಬಾಕು ಅಥವಾ ಸಿಗರೇಟು ಸೇವನೆ, ಗರ್ಭನಿರೋಧಕ ಮಾತ್ರೆ, ಮೂಗಿನ ಉಸಿರಾಟದ ತೊಂದರೆ, ಸಂಸ್ಕರಿಸದ ಆಹಾರ ಸೇವನೆ, ಅತಿ ಮುಖ್ಯವಾಗಿ ನಿದ್ರಾಹೀನತೆ ಮುಂತಾದುವುಗಳಿಂದ ಸಹ ತಲೆನೋವು ಉದ್ರೇಕಗೊಳ್ಳಬಹುದು.

5 . ಹೆಚ್ಚು ಕಾಲ ಬಿಸಿಲಿನಲ್ಲಿ ಇರುವುದು, ದೀರ್ಘಕಾಲ ಪ್ರಯಾಣ ಮಾಡುವುದು, ಮದುವೆ ಅಥವಾ ಇತರೆ ಗಲಾಟೆ ಇರುವ ಸಮಾರಂಭದಲ್ಲಿ ಹೆಚ್ಚು ಹೊತ್ತು ಭಾಗವಹಿಸುವುದು, ಕೆಲವರಿಗೆ  ಹೆಚ್ಚಾಗಿ ಓದುವುದು, ಹೆಚ್ಚು ಕಾಲ ಸಿನೆಮಾ / ಟಿ. ವಿ, ನೋಡುವುದು ಇವುಗಳಿಂದ ತಲೆನೋವು ಉದ್ರೇಕಗೊಳಬಹುದು.

6 . ಕೆಲವು ಸ್ತ್ರೀಯರಿಗೆ ಋತುಚಕ್ರದ ಏರುಪೇರುಗಳಿಂದ ತಲೆನೋವು ಉದ್ರೇಕಗೊಳ್ಳಬಹುದು.

ಮೈಗ್ರೇನ್  ರೋಗಲಕ್ಷಣಗಳು:

ದೃಷ್ಟಿ ಅಸ್ತವ್ಯಸ್ತಗೊಳ್ಳುವುದು, ಅಥವಾ ಕಣ್ಣಿನ ಬದಿಗಳಲ್ಲಿ ಬೆಳಕಿನ ಬಿಂಬಗಳು ಅಥವಾ ಪ್ರಭಾವಳಿ ಸುತ್ತುತ್ತಿರುವಂತೆ ಅನ್ನಿಸುವುದನ್ನು  ಮೈಗ್ರೇನ್‌ ಬರುತ್ತಿದೆ ಎನ್ನುವುದರ ಎಚ್ಚರಿಕೆಯ ಸೂಚನೆ ಎಂಬುದಾಗಿ ಪರಿಗಣಿಸಲಾಗುತ್ತದೆ. ಬೆಳಕಿನ ಬಿಂಬಗಳು ಒಂದು ಅಥವಾ ಎರಡೂ ಕಣ್ಣಿನ ಬದಿಗಳಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಳಗೆ ಹೇಳುವ ಒಂದು ಅಥವಾ ಎಲ್ಲ ರೋಗಲಕ್ಷಣಗಳ ಜತೆಗೆ ಕಾಣಿಸಿಕೊಳ್ಳಬಹುದು.

ಕಣ್ಣಿನಲ್ಲಿ ತಾತ್ಕಾಲಿಕವಾಗಿ ಆಂಶಿಕ ಕುರುಡುತನ ಅಥವಾ ಕಣ್ಣಿನ ಎದುರು ಕಪ್ಪು ಚುಕ್ಕೆಗಳು ಗೋಚರಿಸುವುದು,ದೃಷ್ಟಿ  ಮಬ್ಟಾಗುವುದು,ಕಣ್ಣು ನೋವು,ಕಣ್ಣಿನ ಸುತ್ತಲೂ ನಕ್ಷತ್ರಗಳು ಅಥವಾ ಅಂಕುಡೊಂಕಾದ ಗೆರೆಗಳು ಗೋಚರಿಸುವುದು

ಕೊಳವೆಯೊಳಗಿನಿಂದ ನೋಡಿದಂತೆ ದೃಶ್ಯಗಳು ಅರೆಬರೆ ಕಾಣಿಸುವುದು (ಟನೆಲ್‌ಷನ್‌-ಕಣ್ಣಿನ ಮುಂಭಾಗದ ದೃಶ್ಯಗಳು ಮಾತ್ರವೇ ಗೋಚರಿಸಿ ಬದಿಗಳಲ್ಲಿನ ದೃಶ್ಯ ಕಾಣಿಸದೆಯೇ ಇರುವುದು)

ಮೈಗ್ರೇನ್‌ ಇರುವ ಎಲ್ಲ ವ್ಯಕ್ತಿಗಳಿಗೂ ಬೆಳಕಿನ ಪುಂಜ ಕಾಣಿಸದೆ ಇರಬಹುದು. ಇಂತಹ ಬೆಳಕಿನ ಪುಂಜ ಕಾಣಿಸಿಕೊಳ್ಳುವವರಲ್ಲಿ ತಲೆನೋವು ಕಾಣಿಸಿಕೊಳ್ಳುವುದಕ್ಕೆ ಸುಮಾರು 10-15 ನಿಮಿಷ ಮೊದಲು ಇದು ಕಾಣಿಸಿಕೊಳ್ಳಬಹುದು.  ಹಾಗಿದ್ದರೂ ಸಹ ಅದು ಕೆಲವೇ ನಿಮಿಷಗಳಿಗೆ ಮೊದಲು ಅಥವಾ 24 ಗಂಟೆಗಳಿಗೂ ಮೊದಲು ಕಾಣಿಸಿಕೊಳ್ಳಬಹುದು. ಬೆಳಕಿನ ಪುಂಜ ಕಾಣಿಸಿಕೊಂಡ ಅನಂತರ ಯಾವಾಗಲೂ ತಲೆನೋವು ಬಂದೇ ಬರುತ್ತದೆ ಎಂದು ಹೇಳುವಂತಿಲ್ಲ.

ಮೈಗ್ರೇನ್‌ ತಲೆನೋವು ಬಹಳ ಸಣ್ಣದಾಗಿ ಇರಬಹುದು ಅಥವಾ ತೀವ್ರ ರೂಪದಲ್ಲಿಯೂ ಬಾಧಿಸಬಹುದು. ನೋವು ಕಣ್ಣಿನ ಹಿಂಭಾಗದಲ್ಲಿ ಅಥವಾ ಕತ್ತು ಮತ್ತು ತಲೆಯ ಹಿಂಭಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ರೋಗಿಗಳಲ್ಲಿ  ಪ್ರತಿಯೊಂದು ಬಾರಿಯೂ ತಲೆನೋವು ಒಂದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ತಲೆನೋವು ಸಾಮಾನ್ಯವಾಗಿ ಈ ರೀತಿಯಲ್ಲಿ ಇರಬಹುದು.

 

ಬಹಳ ಸಣ್ಣದಾಗಿ ಆರಂಭವಾದ ನೋವು ಕೆಲವೇ ನಿಮಿಷಗಳಲ್ಲಿ ಅಥವಾ ಗಂಟೆಗಳಲ್ಲಿ ತೀವ್ರಗೊಳ್ಳಬಹುದು. 6 ರಿಂದ 48 ಗಂಟೆಗಳ ವರೆಗೂ ಇರಬಹುದು.

ಮೈಗ್ರೇನ್ ನ ನಿವಾರಣೆ :-

1 . ಮೈಗ್ರೇನ್ ತಲೆನೋವು ಬಂದಾಗ ಕೆಲವರಿಗೆ ಯಾವುದಾದರೂ ನೋವು ನಿವಾರಕ ಮಾತ್ರೆಯನ್ನು [ Pain killer ] ತೆಗೆದುಕೊಂಡರೆ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ.

2 . ಇನ್ನು ಕೆಲವರಿಗೆ ಏನನ್ನೂ ಉಪಯೋಗಿಸದೆ ನಿಷ್ಯಬ್ದವಾದ ಕೊಠಡಿಯಲ್ಲಿ ಕೆಲವು ಕಾಲ ವಿಶ್ರಾಂತಿ ತೆಗೆದುಕೊಳ್ಳುವುದರಿಂದಲೇ ತಲೆನೋವು ಕಡಿಮೆಯಾಗುತ್ತದೆ.

3 . ಇದಲ್ಲದೆ ಜೀವನ ಶೈಲಿಯನ್ನ್ನು ಬದಲಾಯಿಸಿಕೊಳ್ಳುವುದರಿಂದ ಈ ತೆರನ ತಲೆನೋವನ್ನು ನಿಯಂತ್ರಿಸಿಕೊಳ್ಳಬಹುದು.

  • ಸರಿಯಾದ ಸಮಯಕ್ಕೆ ನಿದ್ರೆ ಮಾಡುವುದು.
  • ನಿತ್ಯ ವ್ಯಾಯಾಮ.
  • ಸರಿಯಾದ ಊಟದ ಕ್ರಮ. ಪೌಷ್ಟಿಕ ಆಹಾರದ ಸೇವನೆ.
  • ತಂಬಾಕು, ಮದ್ಯ ಸೇವನೆಯಿಂದ ದೂರ ಇರುವುದು. ಕಾಫಿ ಕುಡಿಯುವುದನ್ನು ಕಡಿಮೆ ಮಾಡುವುದು.
  • ಜೀವನದ ಬಗ್ಯೆ ಸಕಾರಾತ್ಮಕ ಮನೋಭಾವ.

ಮುನ್ಸೂಚನೆಗಳು:
ಚಿಕಿತ್ಸೆಗೆ ಪ್ರತಿಯೊಬ್ಬನೂ ಸ್ಪಂದಿಸುವ ರೀತಿ ಹಾಗೂ ಪ್ರಮಾಣ ಭಿನ್ನ-ಭಿನ್ನವಾಗಿರುತ್ತವೆ. ಕೆಲವರಿಗೆ ಸ್ವಲ್ಪಮಟ್ಟಿನ ಚಿಕಿತ್ಸೆಯಿಂದ ಅಥವಾ ಚಿಕಿತ್ಸೆಯೇ ಇಲ್ಲದೆ ತಲೆನೋವು ಕಡಿಮೆ ಆಗಬಹುದು, ಇನ್ನು ಕೆಲವರಿಗೆ ಅನೇಕ ಔಷಧಿಗಳನ್ನು ಉಪಯೋಗಿಸಬೇಕಾಗಿ ಬರಬಹುದು ಅಥವಾ ಆಸ್ಪತ್ರೆಗೂ ಸೇರಬೇಕಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!

  • ವಿಚಿತ್ರ ಆದರೂ ಸತ್ಯ

    ಈ ಗಿಡ ನೆಟ್ಟರೆ ಶ್ರೀಮಂತರಾಗ್ತಾರಂತೆ !!! ಆ ಗಿಡ ಯಾವುದು ಅಂತ ಗೊತ್ತಾಗಬೇಕೆಂದ್ರೆ ಈ ಲೇಖನಿ ಓದಿ……….

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು

  • ಸುದ್ದಿ

    ದೀಪಾವಳಿ ಹಬ್ಬದಂದು ಕೆಲವು ನಿಷೇಧಿತ ಪ್ರದೇಶದಲ್ಲಿ ಪಟಾಕಿ ಬಳಸುವಂತಿಲ್ಲ…!ಯಾವ ಯಾವ ಸ್ಥಳ ಗೊತ್ತ?

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…