ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ.

ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಆದಾಯ – ಖರ್ಚುಗಳನ್ನು ಸಮತೋಲನದಲ್ಲಿ ಇರಿಸಿಕೊಳ್ಳುವಿರಿ. ಮಿತವಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಸುಧಾರಣೆ. ಸಂಸಾರದಲ್ಲಿ ನೆಮ್ಮದಿ. ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.

ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಗಳೊಂದಿಗೆ ಚರ್ಚೆ, ಮಹತ್ತರ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು. ವಸ್ತ್ರಾಭರಣ ಖರೀದಿ ಮಾಡಲು ಸುಸಮಯ. ಅನಿರೀಕ್ಷಿತ ಧನಾಗಮನ.

ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ. ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆ ಹೊಂದುವ ಅವಕಾಶ. ಬಂಧುಗಳ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಕಾರ್ಯ ಸಾಧನೆಗಾಗಿ ಗಣೇಶ ಆರಾಧನೆ ಮಾಡಿ.

ಆಡಳಿತಾತ್ಮಕ ಹುದ್ದೆಯಲ್ಲಿರುವವರಿಗೆ ಗೌರವಾದರ ಲಭಿಸಲಿದೆ. ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ. ಬರಹಗಾರರಿಗೆ ಕವಿಗಳಿಗೆ, ಕಲಾವಿದರಿಗೆ ಉತ್ತಮ ಅವಕಾಶ, ಪ್ರಶಸ್ತಿಗಳಿಗೆ ಭಾಜನರಾಗುವ ಸಾಧ್ಯತೆ. ಮಗಳಿಗೆ ಉತ್ತಮ ಸಂಬಂಧ ಕೂಡಿಬರಲಿದೆ.

ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು. ಚಿತ್ರ ಕಲಾವಿದರು, ಕವಿಗಳಿಗೆ ಮನ್ನಣೆ ದೊರಕಲಿದೆ. ರಾಜಕಾರಣಿಗಳ ಮಾತಿಗೆ ಮರುಳಾಗುವ ಸಾಧ್ಯತೆ. ಹಿತ ಶತ್ರುಗಳ ಭರವಸೆಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ

ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಸಂಶೋಧನಾ ಕಾರ್ಯಗಳಲ್ಲಿ ತೊಡಗಿದವರಿಗೆ ಹೊಸ ಸಂಶೋಧನೆಗೆ ಆರ್ಥಿಕ ಸಹಕಾರ. ಆರಕ್ಷಕ, ರಕ್ಷಣಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಬಿಡುವಿಲ್ಲದ ಕೆಲಸ ಮತ್ತು ಜವಾಬ್ದಾರಿ ಹೆಚ್ಚಲಿದೆ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಕಟ್ಟಡ, ವಸ್ತ್ರವಿನ್ಯಾಸಕಾರರಿಗೆ ಬೇಡಿಕೆಯೊಂದಿಗೆ ಉದ್ಯೋಗಾವಕಾಶ. ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು. ಉದ್ಯೋಗದಲ್ಲಿರುವವರಿಗೆ ಸ್ಥಾನ ಬದಲಾವಣೆ ಅಥವಾ ಬಡ್ತಿಯಿಂದಾಗಿ ಉತ್ತಮ ಆದಾಯ. ಉತ್ತಮ ಆರೋಗ್ಯ.

ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿಯಾಗುವುದಿಲ್ಲ. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ ದಿನ. ವಾಹನ ಖರೀದಿ ಅಥವಾ ವಿಕ್ರಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹೊಸ ಆದಾಯ ಮೂಲಕ್ಕಾಗಿ ಹುಡುಕಾಟ ನಡೆಸುವಿರಿ.

ಹೊಸ ಪುಸ್ತಕ ಅಥವಾ ಗ್ರಂಥ ಸಂಪಾದನೆಯಾಗಲಿದೆ. ವಿವಾಹದ ವಿಷಯದಲ್ಲಿ ನೇರ ಮಾತುಕತೆಯಿಂದ ಯಶಸ್ವಿಯಾಗುವಿರಿ. ಸಜ್ಜನರೊಂದಿಗಿನ ಮಾತುಕತೆಯಿಂದಾಗಿ ಮಾನಸಿಕ ಉಲ್ಲಾಸ. ವೈದ್ಯರಿಗೆ ಹೆಚ್ಚಿನ ಆದಾಯ. ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.

ಲೆಕ್ಕಪರಿಶೋಧನಾ ಅಥವಾ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರಿಗೆ ಬಿಡುವಿಲ್ಲದ ಕೆಲಸ. ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಸಂಪಾದನೆಯಲ್ಲಿ ಏರುಮುಖವನ್ನು ಕಾಣುವಿರಿ. ವಾದವಿವಾದಗಳು ಬಗೆಹರಿದು ನಿರಾಳತೆ ನೆಲೆಸುವುದು.

ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ. ಹಾಸ್ಯ ಕಲಾವಿದರಿಗೆ ವಿಶೇಷ ಗೌರವ ಮನ್ನಣೆ. ಮಾತುಗಳಿಗೆ ಮನ್ನಣೆ ಹೊಂದುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರದಿಂದಾಗಿ ಕಾರ್ಯಬಾಹುಳ್ಯದ ನಡುವೆಯೂ ನೆಮ್ಮದಿ. ಉದ್ವೇಗಗೊಳ್ಳದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
![]()
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…