ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ.

ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಆದಾಯ – ಖರ್ಚುಗಳನ್ನು ಸಮತೋಲನದಲ್ಲಿ ಇರಿಸಿಕೊಳ್ಳುವಿರಿ. ಮಿತವಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಸುಧಾರಣೆ. ಸಂಸಾರದಲ್ಲಿ ನೆಮ್ಮದಿ. ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.

ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಗಳೊಂದಿಗೆ ಚರ್ಚೆ, ಮಹತ್ತರ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು. ವಸ್ತ್ರಾಭರಣ ಖರೀದಿ ಮಾಡಲು ಸುಸಮಯ. ಅನಿರೀಕ್ಷಿತ ಧನಾಗಮನ.

ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ. ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆ ಹೊಂದುವ ಅವಕಾಶ. ಬಂಧುಗಳ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಕಾರ್ಯ ಸಾಧನೆಗಾಗಿ ಗಣೇಶ ಆರಾಧನೆ ಮಾಡಿ.

ಆಡಳಿತಾತ್ಮಕ ಹುದ್ದೆಯಲ್ಲಿರುವವರಿಗೆ ಗೌರವಾದರ ಲಭಿಸಲಿದೆ. ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ. ಬರಹಗಾರರಿಗೆ ಕವಿಗಳಿಗೆ, ಕಲಾವಿದರಿಗೆ ಉತ್ತಮ ಅವಕಾಶ, ಪ್ರಶಸ್ತಿಗಳಿಗೆ ಭಾಜನರಾಗುವ ಸಾಧ್ಯತೆ. ಮಗಳಿಗೆ ಉತ್ತಮ ಸಂಬಂಧ ಕೂಡಿಬರಲಿದೆ.

ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು. ಚಿತ್ರ ಕಲಾವಿದರು, ಕವಿಗಳಿಗೆ ಮನ್ನಣೆ ದೊರಕಲಿದೆ. ರಾಜಕಾರಣಿಗಳ ಮಾತಿಗೆ ಮರುಳಾಗುವ ಸಾಧ್ಯತೆ. ಹಿತ ಶತ್ರುಗಳ ಭರವಸೆಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ

ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಸಂಶೋಧನಾ ಕಾರ್ಯಗಳಲ್ಲಿ ತೊಡಗಿದವರಿಗೆ ಹೊಸ ಸಂಶೋಧನೆಗೆ ಆರ್ಥಿಕ ಸಹಕಾರ. ಆರಕ್ಷಕ, ರಕ್ಷಣಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಬಿಡುವಿಲ್ಲದ ಕೆಲಸ ಮತ್ತು ಜವಾಬ್ದಾರಿ ಹೆಚ್ಚಲಿದೆ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಕಟ್ಟಡ, ವಸ್ತ್ರವಿನ್ಯಾಸಕಾರರಿಗೆ ಬೇಡಿಕೆಯೊಂದಿಗೆ ಉದ್ಯೋಗಾವಕಾಶ. ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು. ಉದ್ಯೋಗದಲ್ಲಿರುವವರಿಗೆ ಸ್ಥಾನ ಬದಲಾವಣೆ ಅಥವಾ ಬಡ್ತಿಯಿಂದಾಗಿ ಉತ್ತಮ ಆದಾಯ. ಉತ್ತಮ ಆರೋಗ್ಯ.

ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿಯಾಗುವುದಿಲ್ಲ. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ ದಿನ. ವಾಹನ ಖರೀದಿ ಅಥವಾ ವಿಕ್ರಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹೊಸ ಆದಾಯ ಮೂಲಕ್ಕಾಗಿ ಹುಡುಕಾಟ ನಡೆಸುವಿರಿ.

ಹೊಸ ಪುಸ್ತಕ ಅಥವಾ ಗ್ರಂಥ ಸಂಪಾದನೆಯಾಗಲಿದೆ. ವಿವಾಹದ ವಿಷಯದಲ್ಲಿ ನೇರ ಮಾತುಕತೆಯಿಂದ ಯಶಸ್ವಿಯಾಗುವಿರಿ. ಸಜ್ಜನರೊಂದಿಗಿನ ಮಾತುಕತೆಯಿಂದಾಗಿ ಮಾನಸಿಕ ಉಲ್ಲಾಸ. ವೈದ್ಯರಿಗೆ ಹೆಚ್ಚಿನ ಆದಾಯ. ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.

ಲೆಕ್ಕಪರಿಶೋಧನಾ ಅಥವಾ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರಿಗೆ ಬಿಡುವಿಲ್ಲದ ಕೆಲಸ. ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಸಂಪಾದನೆಯಲ್ಲಿ ಏರುಮುಖವನ್ನು ಕಾಣುವಿರಿ. ವಾದವಿವಾದಗಳು ಬಗೆಹರಿದು ನಿರಾಳತೆ ನೆಲೆಸುವುದು.

ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ. ಹಾಸ್ಯ ಕಲಾವಿದರಿಗೆ ವಿಶೇಷ ಗೌರವ ಮನ್ನಣೆ. ಮಾತುಗಳಿಗೆ ಮನ್ನಣೆ ಹೊಂದುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರದಿಂದಾಗಿ ಕಾರ್ಯಬಾಹುಳ್ಯದ ನಡುವೆಯೂ ನೆಮ್ಮದಿ. ಉದ್ವೇಗಗೊಳ್ಳದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….