ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ.

ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಆದಾಯ – ಖರ್ಚುಗಳನ್ನು ಸಮತೋಲನದಲ್ಲಿ ಇರಿಸಿಕೊಳ್ಳುವಿರಿ. ಮಿತವಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಸುಧಾರಣೆ. ಸಂಸಾರದಲ್ಲಿ ನೆಮ್ಮದಿ. ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.

ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಗಳೊಂದಿಗೆ ಚರ್ಚೆ, ಮಹತ್ತರ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು. ವಸ್ತ್ರಾಭರಣ ಖರೀದಿ ಮಾಡಲು ಸುಸಮಯ. ಅನಿರೀಕ್ಷಿತ ಧನಾಗಮನ.

ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ. ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆ ಹೊಂದುವ ಅವಕಾಶ. ಬಂಧುಗಳ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಕಾರ್ಯ ಸಾಧನೆಗಾಗಿ ಗಣೇಶ ಆರಾಧನೆ ಮಾಡಿ.

ಆಡಳಿತಾತ್ಮಕ ಹುದ್ದೆಯಲ್ಲಿರುವವರಿಗೆ ಗೌರವಾದರ ಲಭಿಸಲಿದೆ. ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ. ಬರಹಗಾರರಿಗೆ ಕವಿಗಳಿಗೆ, ಕಲಾವಿದರಿಗೆ ಉತ್ತಮ ಅವಕಾಶ, ಪ್ರಶಸ್ತಿಗಳಿಗೆ ಭಾಜನರಾಗುವ ಸಾಧ್ಯತೆ. ಮಗಳಿಗೆ ಉತ್ತಮ ಸಂಬಂಧ ಕೂಡಿಬರಲಿದೆ.

ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು. ಚಿತ್ರ ಕಲಾವಿದರು, ಕವಿಗಳಿಗೆ ಮನ್ನಣೆ ದೊರಕಲಿದೆ. ರಾಜಕಾರಣಿಗಳ ಮಾತಿಗೆ ಮರುಳಾಗುವ ಸಾಧ್ಯತೆ. ಹಿತ ಶತ್ರುಗಳ ಭರವಸೆಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ

ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಸಂಶೋಧನಾ ಕಾರ್ಯಗಳಲ್ಲಿ ತೊಡಗಿದವರಿಗೆ ಹೊಸ ಸಂಶೋಧನೆಗೆ ಆರ್ಥಿಕ ಸಹಕಾರ. ಆರಕ್ಷಕ, ರಕ್ಷಣಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಬಿಡುವಿಲ್ಲದ ಕೆಲಸ ಮತ್ತು ಜವಾಬ್ದಾರಿ ಹೆಚ್ಚಲಿದೆ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಕಟ್ಟಡ, ವಸ್ತ್ರವಿನ್ಯಾಸಕಾರರಿಗೆ ಬೇಡಿಕೆಯೊಂದಿಗೆ ಉದ್ಯೋಗಾವಕಾಶ. ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು. ಉದ್ಯೋಗದಲ್ಲಿರುವವರಿಗೆ ಸ್ಥಾನ ಬದಲಾವಣೆ ಅಥವಾ ಬಡ್ತಿಯಿಂದಾಗಿ ಉತ್ತಮ ಆದಾಯ. ಉತ್ತಮ ಆರೋಗ್ಯ.

ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿಯಾಗುವುದಿಲ್ಲ. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ ದಿನ. ವಾಹನ ಖರೀದಿ ಅಥವಾ ವಿಕ್ರಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹೊಸ ಆದಾಯ ಮೂಲಕ್ಕಾಗಿ ಹುಡುಕಾಟ ನಡೆಸುವಿರಿ.

ಹೊಸ ಪುಸ್ತಕ ಅಥವಾ ಗ್ರಂಥ ಸಂಪಾದನೆಯಾಗಲಿದೆ. ವಿವಾಹದ ವಿಷಯದಲ್ಲಿ ನೇರ ಮಾತುಕತೆಯಿಂದ ಯಶಸ್ವಿಯಾಗುವಿರಿ. ಸಜ್ಜನರೊಂದಿಗಿನ ಮಾತುಕತೆಯಿಂದಾಗಿ ಮಾನಸಿಕ ಉಲ್ಲಾಸ. ವೈದ್ಯರಿಗೆ ಹೆಚ್ಚಿನ ಆದಾಯ. ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.

ಲೆಕ್ಕಪರಿಶೋಧನಾ ಅಥವಾ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರಿಗೆ ಬಿಡುವಿಲ್ಲದ ಕೆಲಸ. ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಸಂಪಾದನೆಯಲ್ಲಿ ಏರುಮುಖವನ್ನು ಕಾಣುವಿರಿ. ವಾದವಿವಾದಗಳು ಬಗೆಹರಿದು ನಿರಾಳತೆ ನೆಲೆಸುವುದು.

ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ. ಹಾಸ್ಯ ಕಲಾವಿದರಿಗೆ ವಿಶೇಷ ಗೌರವ ಮನ್ನಣೆ. ಮಾತುಗಳಿಗೆ ಮನ್ನಣೆ ಹೊಂದುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರದಿಂದಾಗಿ ಕಾರ್ಯಬಾಹುಳ್ಯದ ನಡುವೆಯೂ ನೆಮ್ಮದಿ. ಉದ್ವೇಗಗೊಳ್ಳದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…