News

ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ
“ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”
ಜ್ಯೋತಿಷ್ಯ

ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

480

ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ.

ವೃಷಭ:-

ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಆದಾಯ – ಖರ್ಚುಗಳನ್ನು ಸಮತೋಲನದಲ್ಲಿ ಇರಿಸಿಕೊಳ್ಳುವಿರಿ. ಮಿತವಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಸುಧಾರಣೆ. ಸಂಸಾರದಲ್ಲಿ ನೆಮ್ಮದಿ. ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.

ಮಿಥುನ:

ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಗಳೊಂದಿಗೆ ಚರ್ಚೆ, ಮಹತ್ತರ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು. ವಸ್ತ್ರಾಭರಣ ಖರೀದಿ ಮಾಡಲು ಸುಸಮಯ. ಅನಿರೀಕ್ಷಿತ ಧನಾಗಮನ.

 

ಕಟಕ :-

ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ. ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆ ಹೊಂದುವ ಅವಕಾಶ. ಬಂಧುಗಳ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಕಾರ್ಯ ಸಾಧನೆಗಾಗಿ ಗಣೇಶ ಆರಾಧನೆ ಮಾಡಿ.

 

 ಸಿಂಹ:

ಆಡಳಿತಾತ್ಮಕ ಹುದ್ದೆಯಲ್ಲಿರುವವರಿಗೆ ಗೌರವಾದರ ಲಭಿಸಲಿದೆ. ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ.  ಬರಹಗಾರರಿಗೆ ಕವಿಗಳಿಗೆ, ಕಲಾವಿದರಿಗೆ ಉತ್ತಮ ಅವಕಾಶ, ಪ್ರಶಸ್ತಿಗಳಿಗೆ ಭಾಜನರಾಗುವ ಸಾಧ್ಯತೆ. ಮಗಳಿಗೆ ಉತ್ತಮ ಸಂಬಂಧ ಕೂಡಿಬರಲಿದೆ.

ಕನ್ಯಾ :-

ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು. ಚಿತ್ರ ಕಲಾವಿದರು, ಕವಿಗಳಿಗೆ ಮನ್ನಣೆ ದೊರಕಲಿದೆ. ರಾಜಕಾರಣಿಗಳ ಮಾತಿಗೆ ಮರುಳಾಗುವ ಸಾಧ್ಯತೆ. ಹಿತ ಶತ್ರುಗಳ ಭರವಸೆಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ

ತುಲಾ:

ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಸಂಶೋಧನಾ ಕಾರ್ಯಗಳಲ್ಲಿ ತೊಡಗಿದವರಿಗೆ ಹೊಸ ಸಂಶೋಧನೆಗೆ ಆರ್ಥಿಕ ಸಹಕಾರ. ಆರಕ್ಷಕ, ರಕ್ಷಣಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಬಿಡುವಿಲ್ಲದ ಕೆಲಸ ಮತ್ತು ಜವಾಬ್ದಾರಿ ಹೆಚ್ಚಲಿದೆ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ವೃಶ್ಚಿಕ :-

ಕಟ್ಟಡ, ವಸ್ತ್ರವಿನ್ಯಾಸಕಾರರಿಗೆ ಬೇಡಿಕೆಯೊಂದಿಗೆ ಉದ್ಯೋಗಾವಕಾಶ. ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು.  ಉದ್ಯೋಗದಲ್ಲಿರುವವರಿಗೆ ಸ್ಥಾನ ಬದಲಾವಣೆ ಅಥವಾ ಬಡ್ತಿಯಿಂದಾಗಿ ಉತ್ತಮ ಆದಾಯ. ಉತ್ತಮ ಆರೋಗ್ಯ.

 

ಧನಸ್ಸು:

ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿಯಾಗುವುದಿಲ್ಲ. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ ದಿನ. ವಾಹನ ಖರೀದಿ ಅಥವಾ ವಿಕ್ರಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹೊಸ ಆದಾಯ ಮೂಲಕ್ಕಾಗಿ ಹುಡುಕಾಟ ನಡೆಸುವಿರಿ.

 

ಮಕರ :-

ಹೊಸ ಪುಸ್ತಕ ಅಥವಾ ಗ್ರಂಥ ಸಂಪಾದನೆಯಾಗಲಿದೆ. ವಿವಾಹದ ವಿಷಯದಲ್ಲಿ ನೇರ ಮಾತುಕತೆಯಿಂದ ಯಶಸ್ವಿಯಾಗುವಿರಿ. ಸಜ್ಜನರೊಂದಿಗಿನ ಮಾತುಕತೆಯಿಂದಾಗಿ ಮಾನಸಿಕ ಉಲ್ಲಾಸ. ವೈದ್ಯರಿಗೆ ಹೆಚ್ಚಿನ ಆದಾಯ. ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.

ಕುಂಭ:-

ಲೆಕ್ಕಪರಿಶೋಧನಾ ಅಥವಾ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರಿಗೆ ಬಿಡುವಿಲ್ಲದ ಕೆಲಸ. ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ.  ಸಂಪಾದನೆಯಲ್ಲಿ ಏರುಮುಖವನ್ನು ಕಾಣುವಿರಿ. ವಾದವಿವಾದಗಳು ಬಗೆಹರಿದು ನಿರಾಳತೆ ನೆಲೆಸುವುದು.

ಮೀನ:-

ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ. ಹಾಸ್ಯ ಕಲಾವಿದರಿಗೆ ವಿಶೇಷ ಗೌರವ ಮನ್ನಣೆ. ಮಾತುಗಳಿಗೆ ಮನ್ನಣೆ ಹೊಂದುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರದಿಂದಾಗಿ ಕಾರ್ಯಬಾಹುಳ್ಯದ ನಡುವೆಯೂ ನೆಮ್ಮದಿ. ಉದ್ವೇಗಗೊಳ್ಳದಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 29 ದಿನಗಳಲ್ಲಿ ಪೆಟ್ರೋಲ್ ಇಳಿದಿದ್ದು 7.29 ರೂಪಾಯಿಗಳು!ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…

    ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್​ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…

  • ಸುದ್ದಿ

    ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

    ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…

  • ವಿಸ್ಮಯ ಜಗತ್ತು

    21ನೇ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!ತಿಳಿಯಲು ಮುಂದೆ ನೋಡಿ…

    ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…

  • ಸಿನಿಮಾ

    ಅಣ್ಣಾವ್ರ ಬಗ್ಗೆ ರಜನಿ ಬಿಚ್ಚಿಟ್ಟರು, ನಮಗ್ಯಾರಿಗೂ ಗೊತ್ತಿಲ್ಲದ ಆ ರಹಸ್ಯ..!

    ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.