ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ.

ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಆದಾಯ – ಖರ್ಚುಗಳನ್ನು ಸಮತೋಲನದಲ್ಲಿ ಇರಿಸಿಕೊಳ್ಳುವಿರಿ. ಮಿತವಾದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ಸುಧಾರಣೆ. ಸಂಸಾರದಲ್ಲಿ ನೆಮ್ಮದಿ. ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.

ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಗಳೊಂದಿಗೆ ಚರ್ಚೆ, ಮಹತ್ತರ ನಿರ್ಣಯ ಕೈಗೊಳ್ಳುವ ಸಾಧ್ಯತೆ. ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು. ವಸ್ತ್ರಾಭರಣ ಖರೀದಿ ಮಾಡಲು ಸುಸಮಯ. ಅನಿರೀಕ್ಷಿತ ಧನಾಗಮನ.

ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ. ಸಹಕಾರ ಸಂಘ ಮುಂತಾದ ಸಾರ್ವಜನಿಕ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆ ಹೊಂದುವ ಅವಕಾಶ. ಬಂಧುಗಳ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಕಾರ್ಯ ಸಾಧನೆಗಾಗಿ ಗಣೇಶ ಆರಾಧನೆ ಮಾಡಿ.

ಆಡಳಿತಾತ್ಮಕ ಹುದ್ದೆಯಲ್ಲಿರುವವರಿಗೆ ಗೌರವಾದರ ಲಭಿಸಲಿದೆ. ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ. ಬರಹಗಾರರಿಗೆ ಕವಿಗಳಿಗೆ, ಕಲಾವಿದರಿಗೆ ಉತ್ತಮ ಅವಕಾಶ, ಪ್ರಶಸ್ತಿಗಳಿಗೆ ಭಾಜನರಾಗುವ ಸಾಧ್ಯತೆ. ಮಗಳಿಗೆ ಉತ್ತಮ ಸಂಬಂಧ ಕೂಡಿಬರಲಿದೆ.

ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು. ಚಿತ್ರ ಕಲಾವಿದರು, ಕವಿಗಳಿಗೆ ಮನ್ನಣೆ ದೊರಕಲಿದೆ. ರಾಜಕಾರಣಿಗಳ ಮಾತಿಗೆ ಮರುಳಾಗುವ ಸಾಧ್ಯತೆ. ಹಿತ ಶತ್ರುಗಳ ಭರವಸೆಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಂತಸದ ವಾತಾವರಣ ಮೂಡಲಿದೆ

ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಸಂಶೋಧನಾ ಕಾರ್ಯಗಳಲ್ಲಿ ತೊಡಗಿದವರಿಗೆ ಹೊಸ ಸಂಶೋಧನೆಗೆ ಆರ್ಥಿಕ ಸಹಕಾರ. ಆರಕ್ಷಕ, ರಕ್ಷಣಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಬಿಡುವಿಲ್ಲದ ಕೆಲಸ ಮತ್ತು ಜವಾಬ್ದಾರಿ ಹೆಚ್ಚಲಿದೆ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಕಟ್ಟಡ, ವಸ್ತ್ರವಿನ್ಯಾಸಕಾರರಿಗೆ ಬೇಡಿಕೆಯೊಂದಿಗೆ ಉದ್ಯೋಗಾವಕಾಶ. ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು. ಉದ್ಯೋಗದಲ್ಲಿರುವವರಿಗೆ ಸ್ಥಾನ ಬದಲಾವಣೆ ಅಥವಾ ಬಡ್ತಿಯಿಂದಾಗಿ ಉತ್ತಮ ಆದಾಯ. ಉತ್ತಮ ಆರೋಗ್ಯ.

ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿಯಾಗುವುದಿಲ್ಲ. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ ದಿನ. ವಾಹನ ಖರೀದಿ ಅಥವಾ ವಿಕ್ರಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹೊಸ ಆದಾಯ ಮೂಲಕ್ಕಾಗಿ ಹುಡುಕಾಟ ನಡೆಸುವಿರಿ.

ಹೊಸ ಪುಸ್ತಕ ಅಥವಾ ಗ್ರಂಥ ಸಂಪಾದನೆಯಾಗಲಿದೆ. ವಿವಾಹದ ವಿಷಯದಲ್ಲಿ ನೇರ ಮಾತುಕತೆಯಿಂದ ಯಶಸ್ವಿಯಾಗುವಿರಿ. ಸಜ್ಜನರೊಂದಿಗಿನ ಮಾತುಕತೆಯಿಂದಾಗಿ ಮಾನಸಿಕ ಉಲ್ಲಾಸ. ವೈದ್ಯರಿಗೆ ಹೆಚ್ಚಿನ ಆದಾಯ. ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.

ಲೆಕ್ಕಪರಿಶೋಧನಾ ಅಥವಾ ಲೆಕ್ಕಪತ್ರಗಳನ್ನು ನೋಡಿಕೊಳ್ಳುವವರಿಗೆ ಬಿಡುವಿಲ್ಲದ ಕೆಲಸ. ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಸಂಪಾದನೆಯಲ್ಲಿ ಏರುಮುಖವನ್ನು ಕಾಣುವಿರಿ. ವಾದವಿವಾದಗಳು ಬಗೆಹರಿದು ನಿರಾಳತೆ ನೆಲೆಸುವುದು.

ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ. ಹಾಸ್ಯ ಕಲಾವಿದರಿಗೆ ವಿಶೇಷ ಗೌರವ ಮನ್ನಣೆ. ಮಾತುಗಳಿಗೆ ಮನ್ನಣೆ ಹೊಂದುವಿರಿ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರದಿಂದಾಗಿ ಕಾರ್ಯಬಾಹುಳ್ಯದ ನಡುವೆಯೂ ನೆಮ್ಮದಿ. ಉದ್ವೇಗಗೊಳ್ಳದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.