ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ. ಹೀಗೇಕೆ ಆಗುತ್ತದೆಂದು ಕಂಡುಹಿಡಿಯಲು ವಿಜ್ಞಾನಿಗಳಿಗೂ ಸಾಧ್ಯವಾಗುತ್ತಿಲ್ಲ. ಗುಡುಗು…ಸಿಡಿಲು…ಈ ವಿಕೃತ ಶಬ್ಧಕ್ಕೆ ಸುತ್ತ ಮುತ್ತಲಿನ ಬೆಟ್ಟಗಳು ಕಂಪಿಸುತ್ತವೆ. ಜನ ಹೆದರಿ ನಡುಗುತ್ತಾರೆ. ಪಶು ಪಕ್ಷಿಗಳು ಬೆದರಿ ಓಡುತ್ತವೆ.

ಸಿಡಿಲಿನ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತದೆ. ಆದರೆ, ಮಂದಿರಕ್ಕೆ ಮಾತ್ರ ಯಾವುದೇ ಹಾನಿ ಸಂಭವಿಸುವುದಿಲ್ಲ. ಬೆಟ್ಟದ ಮೇಲಿನ ಕಲ್ಲುಗಳು ಕೆಳಗೆ ಬೀಳುವುದಿಲ್ಲ. ಮಾರನೇ ದಿನ ದೇವಾಲಯಕ್ಕೆ ಅರ್ಚಕ ಹೋಗಿ…ತುಂಡು ತುಂಡಾಗಿದ್ದ ಶಿವಲಿಂಗದ ತುಣುಕುಗಳನ್ನು ಒಂದು ಕಡೆ ಸೇರಿಸಿ ಅಭಿಷೇಕ ಮಾಡುತ್ತಾರೆ. ಒಂದು ದಿನ ಕಳೆಯುವಷ್ಟರಲ್ಲಿ ಶಿವಲಿಂಗಕ್ಕೆ ಯಥಾರೂಪ ಬಂದು ಹಿಂದಿನಂತೆಯೇ ಆಗಿರುತ್ತದೆ. ಅಲ್ಲಿ ಏನೂ ನಡೆದಿಲ್ಲವೇನೋ ಎನ್ನುವಂತೆ ಕಾಣುತ್ತದೆ. ಇದನ್ನು ವಿಚಿತ್ರವೆನ್ನಬೇಕೋ..ಶಿವನ ಲೀಲೆ ಎನ್ನಬೇಕೊ ಎಂದು ಅರ್ಥವಾಗದ ಸ್ಥಿತಿಯಲ್ಲಿ ಭಕ್ತರಿದ್ದಾರೆ.

ಈ ರೀತಿ ಆಗುತ್ತಿರುವುದು ಮೊದಲೇನಲ್ಲ. ನೂರಾರು ವರ್ಷಗಳಿಂದ ಹೀಗೇ ನಡೆಯುತ್ತಿದೆ. ಪ್ರತೀ 12 ವರ್ಷಕ್ಕೊಮ್ಮೆ ಇಂತಹ ವಿಧ್ಯಮಾನ ನಡೆಯುವ ದೇವಾಲಯದ ಹೆಸರು…’ ಬಿಜಲೀ ಮಹಾದೇವ್ ವದಿರ್ ‘. ಹಿಮಾಚಲ ಪ್ರದೇಶದ ಕುಲೂ ಕಣಿವೆಯಲ್ಲಿ ಈ ದೇವಾಲಯವಿದೆ. ಹೀಗೆ ನಡೆಯಲು ಕಾರಣವೇನೆಂಬುವುದನ್ನು ತಿಳಿಸುವ ಒಂದು ಕತೆ ಇಲ್ಲಿ ಪ್ರಚಾರದಲ್ಲಿದೆ.

ಹಿಂದೆ ಕುಲೂ ಕಣಿವೆಯಲ್ಲಿ ಬಲಿಷ್ಟನಾದ ರಾಕ್ಷಸನೊಬ್ಬನಿದ್ದನಂತೆ. ಅಲ್ಲಿರುವ ಜನರನ್ನು , ಪಶು ಪಕ್ಷಿಗಳನ್ನು ಅಂತ್ಯಮಾಡಲು ಆತ ಒಂದು ಹಾವಿನ ರೂಪ ತಳೆದನಂತೆ. ಬೀಯಾಸ್ ನದಿ ಪ್ರವಾಹಕ್ಕೆ ಅಡ್ಡಲಾಗಿ ಮಲಗಿ ಸುತ್ತ ಮುತ್ತಲ ಗ್ರಾಮಗಳನ್ನು ಮುಳುಗಿಸಲು ಪ್ರಯತ್ನಿಸುತ್ತಾನಂತೆ. ಇದನ್ನು ನೋಡಿದ ಈಶ್ವರ ತನ್ನ ತ್ರಿಶೂಲದಿಂದ ಆ ರಾಕ್ಷಸನನ್ನು ಸಂಹರಿಸುತ್ತಾನೆ. ಆ ರಾಕ್ಷಸ ಸಾಯುತ್ತಾ ದೊಡ್ಡ ಬೆಟ್ಟವಾಗಿ ರೂಪತಳೆಯುತ್ತಾನೆ.ಒಂದು ವೇಳೆ ಸಿಡಿಲು ಬಡಿದರೆ, ಅಲ್ಲಿರುವ ಜನ, ಪಶು ,ಪಕ್ಷಿಗಳು ನಾಶವಾಗುವುದನ್ನು ತಡೆಯಲು ,ಶಿವ ಆ ಸಿಡಿಲು ತನಗೇ ಬಡಿಯುವಂತೆ ಮಾಡಿದ್ದಾನೆಂದು ಪುರಾಣ ಹೇಳುತ್ತದೆ. ಮಹಾದೇವನ ಆಜ್ಞೆಯಂತೆಯೇ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತದೆಂದು…ನಂತರ ಆ ಶಿವಲಿಂಗ ಒಂದುಗೂಡುತ್ತದೆಂಬ ಪ್ರತೀತಿಯಿದೆ.

ಈ ಮಹಾದೇವನ ಆಲಯವನ್ನು ತಲುಪುವುದು ಸುಲಭಸಾಧ್ಯವಲ್ಲ ಸಮುದ್ರ ಮಟ್ಟದಿಂದ 2,450 ಮೀಟರ್ ಎತ್ತರದ ಬೆಟ್ಟದ ಮೇಲಿರುವ ಈ ದೇವಾಲಯವನ್ನು ತಲುಪಲು ಕಲ್ಲು, ಮುಳ್ಳುಗಳ ಮೇಲೆ ನಡೆದುಕೊಂಡು ಹೋಗಬೇಕು.ಬೆಟ್ಟದ ಮೇಲಿಂದ ಕಣಿವೆಯವರೆಗೂ ಮೆರವಣಿಗೆ ಮಾಡುವುದು ಇಲ್ಲಿನ ಪದ್ಧತಿಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…