ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ.

ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ಇದರ ಸೇವನೆಯಿಂದ ಹೆಚ್ಚಿನ ಶಕ್ತಿ ದೊರಕುವುದು ಮಾತ್ರವಲ್ಲ, ಅಮೂಲ್ಯ ಪೋಷಕಾಂಶಗಳೂ ಲಭ್ಯವಾಗುತ್ತವೆ. ನೂರಾರು ವರ್ಷಗಳಿಂದ ನುಗ್ಗೆ ಎಲೆಗಳನ್ನು ಆಹಾರದ ಹೊರತಾಗಿ ಕೆಲವಾರು ರೋಗಗಳಿಗೆ ಔಷಧಿಯ ರೂಪದಲ್ಲಿಯೂ ಬಳಸಲ್ಪಡುತ್ತಾ ಬರಲಾಗಿದೆ. ಇರರ ಪೋಷಕಾಂಶಗಳ ಪಟ್ಟಿಯಲ್ಲಿ ಪ್ರಮುಖವಾಗಿ ವಿಟಮಿನ್ನು ಹಾಗೂ ಪ್ರೋಟೀನುಗಳಿವೆ.
ತೂಕ ಇಳಿಯಲು :-

ಈ ಎಲೆಗಳಲ್ಲಿ ಅತಿ ಹೆಚ್ಚಿನ ಪ್ರಮಾಣದ ಕರಗದ ನಾರು ಇದೆ. ಹಾಗೂ ಕ್ಲೋರೋಜೆನಿಕ್ ಆಮ್ಲ ಎಂಬ ಆಂಟಿ ಆಕ್ಸಿಡೆಂಟು ಇದ್ದು ಇದನ್ನು ಜೀರ್ಣಿಸಿಕೊಳ್ಳಲು ಹೆಚ್ಚಿನ ಕೊಬ್ಬನ್ನು ದೇಹ ಬಳಸಿಕೊಳ್ಳಬೇಕಾಗಿ ಬರುತ್ತದೆ.
ತಕ್ಷಣವೇ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ:-

ಈ ಎಲೆಗಳಲ್ಲಿ ಉತ್ತಮ ಪ್ರಮಾಣದ ಪೋಷಕಾಂಶಗಳಿರುವ ಕಾರಣ ಸೇವನೆಯ ಅನತಿಹೊತ್ತಿನಲ್ಲಿಯೇ ದೇಹಕ್ಕೆ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ. ಇದರಲ್ಲಿರುವ ಹೆಚ್ಚಿನ ಪ್ರಮಾಣದ ಕಬ್ಬಿಣ ಹಾಗೂ ಮೆಗ್ನೀಶಿಯಂ ಇದಕ್ಕೆ ಕಾರಣ.
ನಿದ್ರಾರಾಹಿತ್ಯದಿಂದ ರಕ್ಷಿಸುತ್ತದೆ:-
ಈ ಎಲೆಗಳಲ್ಲಿ ಸುಮಾರು ಹದಿನೆಂಟು ಬಗೆಯ ಅಮೈನೋ ಆಮ್ಲಗಳಿದ್ದು ಇವು ದೇಹದ ಜೀವರಾಸಾಯನಿಕ ಕ್ರಿಯೆಯ ಮೂಲಾಧಾರವಾಗಿವೆ.

ವಿಶೇಷವಾಗಿ ಟ್ರಿಫ್ಟೋಫ್ಯಾನ್ ಎಂಬ ಅಮೈನೋ ಆಮ್ಲ ನಮ್ಮ ನಿದ್ದೆಯ ಆವರ್ತನವನ್ನು ನಿಯಂತ್ರಿಸಲು ನೆರವಾಗುತ್ತದೆ.
ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿವೆ:-
ಈ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟುಗಳು ನಮ್ಮ ದೇಹದ ಜೀವಕೋಶಗಳನ್ನು ಸುಸ್ಥಿತಿಯಲ್ಲಿರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಒಟ್ಟಾರೆಯಾಗಿ ಸುಮಾರು ಮೂವತ್ತು ಬಗೆಯ ಆಂಟಿ ಆಕ್ಸಿಡೆಂಟುಗಳಿದ್ದು ಇವುಗಳು ಕರುಳು ಕ್ಯಾನ್ಸರ್ ನ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ ಹಾಗೂ ಆರೋಗ್ಯಕರ ತ್ವಚೆಯ ಮೂಲಕ ವೃದ್ಧಾಪ್ಯ ಆವರಿಸುವುದೂ ತಡವಾಗುತ್ತದೆ.
ಉರಿಯೂತ ನಿವಾರಕ ಗುಣಗಳು:-

ಈ ಎಲೆಗಳಲ್ಲಿ ಉರಿಯೂತ ನಿವಾರಕ ಹಾಗೂ ಗುಣಪಡಿಸುವ ಗುಣಗಳಿದ್ದು ಚಿಕ್ಕ ಪುಟ್ಟ ಗಾಯ, ಸುಟ್ಟ ಗಾಯ, ಜಜ್ಜಿದ ಭಾಗಗಳನ್ನು ಶೀಘ್ರವಾಗಿ ಗುಣಪಡಿಸುವುದರೊಂದಿಗೇ ದೇಹದಲ್ಲಿ ಎದುರಾಗುವ ಸೋಂಕುಗಳಿಂದಲೂ ರಕ್ಷಣೆ ಒದಗಿಸುತ್ತದೆ.
ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ:-

ನಿಮ್ಮ ನಿತ್ಯದ ಆಹಾರದಲ್ಲಿ ನುಗ್ಗೆಸೊಪ್ಪನ್ನು ಅಳವಡಿಸಿಕೊಳ್ಳುವ ಮೂಲಕ ದೇಹದಿಂದ ಕಲ್ಮಶಗಳು ಹೊರಹಾಕಲು ನೆರವಾಗುತ್ತದೆ,ತೊಂದರೆಗಳಿಂದ ರಕ್ಷಿಸುತ್ತದೆ.
ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ:-

ಈ ಎಲೆಗಳಲ್ಲಿರುವ ಕರಗದ ನಾರಿನ ಕಾರಣದಿಂದ ಆಹಾರವನ್ನು ಜೀರ್ಣಿಸಿಕೊಳ್ಳಲು ನಮ್ಮ ಜೀರ್ಣಾಂಗಗಳಿಗೆ ಸುಲಭವಾಗುತ್ತದೆ. ಪರಿಣಾಮವಾಗಿ ಜೀರ್ಣಕ್ರಿಯೆ ಶೀಘ್ರವಾಗಿ ಪೂರ್ಣಗೊಳ್ಳುತ್ತದೆ ಹಾಗೂ ಮಲಬದ್ಧತೆಯಾಗದಂತೆ ತಡೆಯುತ್ತದೆ.
ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಮಾಡುತ್ತದೆ:-

ಈ ಎಲೆಗಳಲ್ಲಿರುವ ಕಿಣ್ವಗಳು ಹೊಟ್ಟೆಯಲ್ಲಿ ಜೀರ್ಣಗೊಳ್ಳುವ ವೇಳೆ ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್ ಹೀರಿಕೊಳ್ಳದಂತೆ ನೆರವಾಗುವ ಮೂಲಕ ರಕ್ತದಲ್ಲಿ ಅಧಿಕವಿರುವ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣಕ್ಕೆ ಬರಲು ನೆರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್…
KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…