ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ.

ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ಇದರ ಸೇವನೆಯಿಂದ ಹೆಚ್ಚಿನ ಶಕ್ತಿ ದೊರಕುವುದು ಮಾತ್ರವಲ್ಲ, ಅಮೂಲ್ಯ ಪೋಷಕಾಂಶಗಳೂ ಲಭ್ಯವಾಗುತ್ತವೆ. ನೂರಾರು ವರ್ಷಗಳಿಂದ ನುಗ್ಗೆ ಎಲೆಗಳನ್ನು ಆಹಾರದ ಹೊರತಾಗಿ ಕೆಲವಾರು ರೋಗಗಳಿಗೆ ಔಷಧಿಯ ರೂಪದಲ್ಲಿಯೂ ಬಳಸಲ್ಪಡುತ್ತಾ ಬರಲಾಗಿದೆ. ಇರರ ಪೋಷಕಾಂಶಗಳ ಪಟ್ಟಿಯಲ್ಲಿ ಪ್ರಮುಖವಾಗಿ ವಿಟಮಿನ್ನು ಹಾಗೂ ಪ್ರೋಟೀನುಗಳಿವೆ.
ತೂಕ ಇಳಿಯಲು :-

ಈ ಎಲೆಗಳಲ್ಲಿ ಅತಿ ಹೆಚ್ಚಿನ ಪ್ರಮಾಣದ ಕರಗದ ನಾರು ಇದೆ. ಹಾಗೂ ಕ್ಲೋರೋಜೆನಿಕ್ ಆಮ್ಲ ಎಂಬ ಆಂಟಿ ಆಕ್ಸಿಡೆಂಟು ಇದ್ದು ಇದನ್ನು ಜೀರ್ಣಿಸಿಕೊಳ್ಳಲು ಹೆಚ್ಚಿನ ಕೊಬ್ಬನ್ನು ದೇಹ ಬಳಸಿಕೊಳ್ಳಬೇಕಾಗಿ ಬರುತ್ತದೆ.
ತಕ್ಷಣವೇ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ:-

ಈ ಎಲೆಗಳಲ್ಲಿ ಉತ್ತಮ ಪ್ರಮಾಣದ ಪೋಷಕಾಂಶಗಳಿರುವ ಕಾರಣ ಸೇವನೆಯ ಅನತಿಹೊತ್ತಿನಲ್ಲಿಯೇ ದೇಹಕ್ಕೆ ಹೆಚ್ಚಿನ ಶಕ್ತಿಯನ್ನು ಒದಗಿಸುತ್ತದೆ. ಇದರಲ್ಲಿರುವ ಹೆಚ್ಚಿನ ಪ್ರಮಾಣದ ಕಬ್ಬಿಣ ಹಾಗೂ ಮೆಗ್ನೀಶಿಯಂ ಇದಕ್ಕೆ ಕಾರಣ.
ನಿದ್ರಾರಾಹಿತ್ಯದಿಂದ ರಕ್ಷಿಸುತ್ತದೆ:-
ಈ ಎಲೆಗಳಲ್ಲಿ ಸುಮಾರು ಹದಿನೆಂಟು ಬಗೆಯ ಅಮೈನೋ ಆಮ್ಲಗಳಿದ್ದು ಇವು ದೇಹದ ಜೀವರಾಸಾಯನಿಕ ಕ್ರಿಯೆಯ ಮೂಲಾಧಾರವಾಗಿವೆ.

ವಿಶೇಷವಾಗಿ ಟ್ರಿಫ್ಟೋಫ್ಯಾನ್ ಎಂಬ ಅಮೈನೋ ಆಮ್ಲ ನಮ್ಮ ನಿದ್ದೆಯ ಆವರ್ತನವನ್ನು ನಿಯಂತ್ರಿಸಲು ನೆರವಾಗುತ್ತದೆ.
ಉತ್ತಮ ಪ್ರಮಾಣದ ಆಂಟಿ ಆಕ್ಸಿಡೆಂಟುಗಳಿವೆ:-
ಈ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟುಗಳು ನಮ್ಮ ದೇಹದ ಜೀವಕೋಶಗಳನ್ನು ಸುಸ್ಥಿತಿಯಲ್ಲಿರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಒಟ್ಟಾರೆಯಾಗಿ ಸುಮಾರು ಮೂವತ್ತು ಬಗೆಯ ಆಂಟಿ ಆಕ್ಸಿಡೆಂಟುಗಳಿದ್ದು ಇವುಗಳು ಕರುಳು ಕ್ಯಾನ್ಸರ್ ನ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ ಹಾಗೂ ಆರೋಗ್ಯಕರ ತ್ವಚೆಯ ಮೂಲಕ ವೃದ್ಧಾಪ್ಯ ಆವರಿಸುವುದೂ ತಡವಾಗುತ್ತದೆ.
ಉರಿಯೂತ ನಿವಾರಕ ಗುಣಗಳು:-

ಈ ಎಲೆಗಳಲ್ಲಿ ಉರಿಯೂತ ನಿವಾರಕ ಹಾಗೂ ಗುಣಪಡಿಸುವ ಗುಣಗಳಿದ್ದು ಚಿಕ್ಕ ಪುಟ್ಟ ಗಾಯ, ಸುಟ್ಟ ಗಾಯ, ಜಜ್ಜಿದ ಭಾಗಗಳನ್ನು ಶೀಘ್ರವಾಗಿ ಗುಣಪಡಿಸುವುದರೊಂದಿಗೇ ದೇಹದಲ್ಲಿ ಎದುರಾಗುವ ಸೋಂಕುಗಳಿಂದಲೂ ರಕ್ಷಣೆ ಒದಗಿಸುತ್ತದೆ.
ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ:-

ನಿಮ್ಮ ನಿತ್ಯದ ಆಹಾರದಲ್ಲಿ ನುಗ್ಗೆಸೊಪ್ಪನ್ನು ಅಳವಡಿಸಿಕೊಳ್ಳುವ ಮೂಲಕ ದೇಹದಿಂದ ಕಲ್ಮಶಗಳು ಹೊರಹಾಕಲು ನೆರವಾಗುತ್ತದೆ,ತೊಂದರೆಗಳಿಂದ ರಕ್ಷಿಸುತ್ತದೆ.
ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ:-

ಈ ಎಲೆಗಳಲ್ಲಿರುವ ಕರಗದ ನಾರಿನ ಕಾರಣದಿಂದ ಆಹಾರವನ್ನು ಜೀರ್ಣಿಸಿಕೊಳ್ಳಲು ನಮ್ಮ ಜೀರ್ಣಾಂಗಗಳಿಗೆ ಸುಲಭವಾಗುತ್ತದೆ. ಪರಿಣಾಮವಾಗಿ ಜೀರ್ಣಕ್ರಿಯೆ ಶೀಘ್ರವಾಗಿ ಪೂರ್ಣಗೊಳ್ಳುತ್ತದೆ ಹಾಗೂ ಮಲಬದ್ಧತೆಯಾಗದಂತೆ ತಡೆಯುತ್ತದೆ.
ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಮಾಡುತ್ತದೆ:-

ಈ ಎಲೆಗಳಲ್ಲಿರುವ ಕಿಣ್ವಗಳು ಹೊಟ್ಟೆಯಲ್ಲಿ ಜೀರ್ಣಗೊಳ್ಳುವ ವೇಳೆ ಹೆಚ್ಚಿನ ಪ್ರಮಾಣದ ಕೊಲೆಸ್ಟ್ರಾಲ್ ಹೀರಿಕೊಳ್ಳದಂತೆ ನೆರವಾಗುವ ಮೂಲಕ ರಕ್ತದಲ್ಲಿ ಅಧಿಕವಿರುವ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣಕ್ಕೆ ಬರಲು ನೆರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….