ಉಪಯುಕ್ತ ಮಾಹಿತಿ

ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

1416

ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.ಇದು ಟರ್ಕಿ ಕೋಳಿ,ಗಿಣಿ ಕೋಳಿ,ಬಾತು ಕೋಳಿ,ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ.ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು,ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ.ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.

ಈ ರೋಗ ಹೇಗೆ ಹರಡುತ್ತದೆ…

ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ ಸೋನ್ಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಶಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು ಉಸಿರು ರೋಗಾಣುಗಳಿಂದ ತುಂಬಿರುತ್ತದೆ. ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. ಇವುಗಳ ಸಂಪರ್ಕಕ್ಕೆ ಬರುವ ಎಲ್ಲ ಪಕ್ಷಿಗಳಿಗೂ ಸೋಂಕು ತಗುಲುತ್ತದೆ. ಕೋಳಿ ಫಾರಂನಲ್ಲಿ ಒಂದು ಕೋಳಿಗೆ ಸೋಂಕು ಉಂಟಾದರೆ ಕೆಲವೇ ಗಂಟೆಗಳಲ್ಲಿ ಎಲ್ಲ ಕೋಳಿಗಳಿಗೂ ಕಾಯಿಲೆ ಅಂಟಿಕೊಳ್ಳುತ್ತದೆ. ಪಕ್ಷಿಗಳಿಗೆ ಹಂದಿಯಿಂದ, ಹಂದಿಗಳಿಗೆ ಪಕ್ಷಿಗಳಿಂದ ಸೋಂಕು ಅಂಟುವುದೂ ಉಂಟು. ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ. ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ. ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ. ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.

ಈ ರೋಗದ ಲಕ್ಷಣಗಳು:-

ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್1ಏನ್1 ಜ್ವರದ ಲಕ್ಷಣಗಳನ್ತಯೇ ಇರುತ್ತವೆ.

  • ಈ ರೋಗದ ಸೋಂಕಿಗೆ ಒಳಗಾದ ವ್ಯಕ್ತಿಗಳಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ.
  • ಜ್ವರ,ಕೆಮ್ಮು,ಶೀತ,ತಲೆನೋವು,ಗಂಟಲು ಕೆರೆತ,ನೆಗಡಿ,ಸ್ನಾಯುಗಳಲ್ಲಿ ನೋವು,ಮತ್ತು ಆಯಾಸ ಕಾಣಿಸಿಕೊಳ್ಳುತ್ತದೆ.
  • ಕೆಲವೊಮ್ಮೆ ವಾಂತಿ ಮತ್ತು ಭೇದಿ ಆಗಬಹುದು.ಉಸಿರಾಟದಲ್ಲಿ ತೊಂದರೆ ಕಾಣಿಸಬಹುದು.
  • ಹಕ್ಕಿ ಜ್ವರದಿಂದ ಉಸಿರಾಟ ಸಮಸ್ಯೆ ಎದುರಾಗಿ ಸಾವು ಸಂಭವಿಸಬಹುದು.
  • ಕಾಯಿಲೆ ಆರಂಭದ 48 ಗಂಟೆಗಳಲ್ಲಿ ಔಷಧ ತೆಗೆದುಕೊಂಡರೆ ಪರಿಣಾಮ ಹೆಚ್ಚು.

ಮುನ್ನೆಚ್ಚರಿಕೆ ಕ್ರಮಗಳು:-

ಹಕ್ಕಿ ಜ್ವರ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಕೆಲವು ಮುನ್ನೆಚ್ಚರಿಕ ಕ್ರಮಗಳನ್ನು ಕೈ ಗೊಂಡರೆ ಹಕ್ಕಿ ಜ್ವರದ ಸೋಂಕು ಹರಡದಂತೆ ತಡೆಯಬಹುದು…

  • ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿಗಳು,ಹಕ್ಕಿಗಳು ಹಾಗೂ ಬಾತು ಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರವಹಿಸಬೇಕು.
  • ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಮುಟ್ಟಬಾರದು.
  • ಕೋಳಿ ಮತ್ತು ಹಕ್ಕಿಗಳ ಮಾಂಸವನ್ನು ಹಾಗೂ ಮೊಟ್ಟೆಗಳನ್ನು ಸೂಕ್ತ ರೀತಿಯಲ್ಲಿ ಬೇಯಿಸಿ ತಿನ್ನುವುದು ಸುರಕ್ಷಿತ.
  • ಕೋಳಿ ಮತ್ತು ಹಕ್ಕಿಗಳನ್ನು ಮನೆಯಲ್ಲಿಯೇ ಕತ್ತರಿಸಬೇಡಿ. ಇವುಗಳನ್ನು ಮನೆಯಲ್ಲಿಯೇ ಕತ್ತರಿಸಿ ಕೊಲ್ಲುವುದರಿಂದ ಸೋಂಕು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.
  • ಹಕ್ಕಿಜ್ವರದ ಚಿಕಿತ್ಸೆಯಲ್ಲಿ “ಟ್ಯಾಮಿಫ್ಲೂ’ ಮಾತ್ರೆ ಬಳಸಲಾಗುತ್ತದೆ. ಮಾತ್ರೆಗಳ ಸ೦ಗ್ರಹ ಸಾಕಷ್ಟು ಇರುವುದರಿ೦ದ ಚಿಕಿತ್ಸೆಗೂ ಯಾವುದೇ ತೊ೦ದರೆಯಾಗುವುದಿಲ್ಲ ಎ೦ದು ಆರೋಗ್ಯ ಇಲಾಖೆ ಸಹ ಮಾಹಿತಿ ನೀಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…

  • ಸಿನಿಮಾ

    3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ, ನಟ ಯಶ್’ಗೆ ಕೋರ್ಟ್ ಆದೇಶ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…