ಉಪಯುಕ್ತ ಮಾಹಿತಿ

ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

1440

ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.ಇದು ಟರ್ಕಿ ಕೋಳಿ,ಗಿಣಿ ಕೋಳಿ,ಬಾತು ಕೋಳಿ,ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ.ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು,ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ.ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.

ಈ ರೋಗ ಹೇಗೆ ಹರಡುತ್ತದೆ…

ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ ಸೋನ್ಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಶಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು ಉಸಿರು ರೋಗಾಣುಗಳಿಂದ ತುಂಬಿರುತ್ತದೆ. ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. ಇವುಗಳ ಸಂಪರ್ಕಕ್ಕೆ ಬರುವ ಎಲ್ಲ ಪಕ್ಷಿಗಳಿಗೂ ಸೋಂಕು ತಗುಲುತ್ತದೆ. ಕೋಳಿ ಫಾರಂನಲ್ಲಿ ಒಂದು ಕೋಳಿಗೆ ಸೋಂಕು ಉಂಟಾದರೆ ಕೆಲವೇ ಗಂಟೆಗಳಲ್ಲಿ ಎಲ್ಲ ಕೋಳಿಗಳಿಗೂ ಕಾಯಿಲೆ ಅಂಟಿಕೊಳ್ಳುತ್ತದೆ. ಪಕ್ಷಿಗಳಿಗೆ ಹಂದಿಯಿಂದ, ಹಂದಿಗಳಿಗೆ ಪಕ್ಷಿಗಳಿಂದ ಸೋಂಕು ಅಂಟುವುದೂ ಉಂಟು. ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ. ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ. ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ. ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.

ಈ ರೋಗದ ಲಕ್ಷಣಗಳು:-

ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್1ಏನ್1 ಜ್ವರದ ಲಕ್ಷಣಗಳನ್ತಯೇ ಇರುತ್ತವೆ.

  • ಈ ರೋಗದ ಸೋಂಕಿಗೆ ಒಳಗಾದ ವ್ಯಕ್ತಿಗಳಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ.
  • ಜ್ವರ,ಕೆಮ್ಮು,ಶೀತ,ತಲೆನೋವು,ಗಂಟಲು ಕೆರೆತ,ನೆಗಡಿ,ಸ್ನಾಯುಗಳಲ್ಲಿ ನೋವು,ಮತ್ತು ಆಯಾಸ ಕಾಣಿಸಿಕೊಳ್ಳುತ್ತದೆ.
  • ಕೆಲವೊಮ್ಮೆ ವಾಂತಿ ಮತ್ತು ಭೇದಿ ಆಗಬಹುದು.ಉಸಿರಾಟದಲ್ಲಿ ತೊಂದರೆ ಕಾಣಿಸಬಹುದು.
  • ಹಕ್ಕಿ ಜ್ವರದಿಂದ ಉಸಿರಾಟ ಸಮಸ್ಯೆ ಎದುರಾಗಿ ಸಾವು ಸಂಭವಿಸಬಹುದು.
  • ಕಾಯಿಲೆ ಆರಂಭದ 48 ಗಂಟೆಗಳಲ್ಲಿ ಔಷಧ ತೆಗೆದುಕೊಂಡರೆ ಪರಿಣಾಮ ಹೆಚ್ಚು.

ಮುನ್ನೆಚ್ಚರಿಕೆ ಕ್ರಮಗಳು:-

ಹಕ್ಕಿ ಜ್ವರ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಕೆಲವು ಮುನ್ನೆಚ್ಚರಿಕ ಕ್ರಮಗಳನ್ನು ಕೈ ಗೊಂಡರೆ ಹಕ್ಕಿ ಜ್ವರದ ಸೋಂಕು ಹರಡದಂತೆ ತಡೆಯಬಹುದು…

  • ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿಗಳು,ಹಕ್ಕಿಗಳು ಹಾಗೂ ಬಾತು ಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರವಹಿಸಬೇಕು.
  • ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಮುಟ್ಟಬಾರದು.
  • ಕೋಳಿ ಮತ್ತು ಹಕ್ಕಿಗಳ ಮಾಂಸವನ್ನು ಹಾಗೂ ಮೊಟ್ಟೆಗಳನ್ನು ಸೂಕ್ತ ರೀತಿಯಲ್ಲಿ ಬೇಯಿಸಿ ತಿನ್ನುವುದು ಸುರಕ್ಷಿತ.
  • ಕೋಳಿ ಮತ್ತು ಹಕ್ಕಿಗಳನ್ನು ಮನೆಯಲ್ಲಿಯೇ ಕತ್ತರಿಸಬೇಡಿ. ಇವುಗಳನ್ನು ಮನೆಯಲ್ಲಿಯೇ ಕತ್ತರಿಸಿ ಕೊಲ್ಲುವುದರಿಂದ ಸೋಂಕು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.
  • ಹಕ್ಕಿಜ್ವರದ ಚಿಕಿತ್ಸೆಯಲ್ಲಿ “ಟ್ಯಾಮಿಫ್ಲೂ’ ಮಾತ್ರೆ ಬಳಸಲಾಗುತ್ತದೆ. ಮಾತ್ರೆಗಳ ಸ೦ಗ್ರಹ ಸಾಕಷ್ಟು ಇರುವುದರಿ೦ದ ಚಿಕಿತ್ಸೆಗೂ ಯಾವುದೇ ತೊ೦ದರೆಯಾಗುವುದಿಲ್ಲ ಎ೦ದು ಆರೋಗ್ಯ ಇಲಾಖೆ ಸಹ ಮಾಹಿತಿ ನೀಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ಕ್ರೀಡೆ

    ಇಂಗ್ಲೆಂಡ್ನಲ್ಲಿ ಮಲ್ಯಗೆ “ಕಳ್ಳ ಕಳ್ಳ” ಎಂದು ಕೂಗಿದ ಭಾರತೀಯ ಪ್ರೇಕ್ಷಕರು!ವಿಡಿಯೋ ನೋಡಿ ಬಿದ್ದು ಬಿದ್ದು ನಗ್ತೀರಾ…..

    ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್‍ ಟ್ರೋಫಿ ಕೊನೆಯ ಲೀಗ್‍ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್‍ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ

  • ವಿಶೇಷ ಲೇಖನ

    ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..!

    ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.