ಉಪಯುಕ್ತ ಮಾಹಿತಿ

ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

1437

ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.ಇದು ಟರ್ಕಿ ಕೋಳಿ,ಗಿಣಿ ಕೋಳಿ,ಬಾತು ಕೋಳಿ,ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ.ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು,ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ.ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.

ಈ ರೋಗ ಹೇಗೆ ಹರಡುತ್ತದೆ…

ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ ಸೋನ್ಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಶಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು ಉಸಿರು ರೋಗಾಣುಗಳಿಂದ ತುಂಬಿರುತ್ತದೆ. ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. ಇವುಗಳ ಸಂಪರ್ಕಕ್ಕೆ ಬರುವ ಎಲ್ಲ ಪಕ್ಷಿಗಳಿಗೂ ಸೋಂಕು ತಗುಲುತ್ತದೆ. ಕೋಳಿ ಫಾರಂನಲ್ಲಿ ಒಂದು ಕೋಳಿಗೆ ಸೋಂಕು ಉಂಟಾದರೆ ಕೆಲವೇ ಗಂಟೆಗಳಲ್ಲಿ ಎಲ್ಲ ಕೋಳಿಗಳಿಗೂ ಕಾಯಿಲೆ ಅಂಟಿಕೊಳ್ಳುತ್ತದೆ. ಪಕ್ಷಿಗಳಿಗೆ ಹಂದಿಯಿಂದ, ಹಂದಿಗಳಿಗೆ ಪಕ್ಷಿಗಳಿಂದ ಸೋಂಕು ಅಂಟುವುದೂ ಉಂಟು. ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ. ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ. ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ. ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.

ಈ ರೋಗದ ಲಕ್ಷಣಗಳು:-

ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್1ಏನ್1 ಜ್ವರದ ಲಕ್ಷಣಗಳನ್ತಯೇ ಇರುತ್ತವೆ.

  • ಈ ರೋಗದ ಸೋಂಕಿಗೆ ಒಳಗಾದ ವ್ಯಕ್ತಿಗಳಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ.
  • ಜ್ವರ,ಕೆಮ್ಮು,ಶೀತ,ತಲೆನೋವು,ಗಂಟಲು ಕೆರೆತ,ನೆಗಡಿ,ಸ್ನಾಯುಗಳಲ್ಲಿ ನೋವು,ಮತ್ತು ಆಯಾಸ ಕಾಣಿಸಿಕೊಳ್ಳುತ್ತದೆ.
  • ಕೆಲವೊಮ್ಮೆ ವಾಂತಿ ಮತ್ತು ಭೇದಿ ಆಗಬಹುದು.ಉಸಿರಾಟದಲ್ಲಿ ತೊಂದರೆ ಕಾಣಿಸಬಹುದು.
  • ಹಕ್ಕಿ ಜ್ವರದಿಂದ ಉಸಿರಾಟ ಸಮಸ್ಯೆ ಎದುರಾಗಿ ಸಾವು ಸಂಭವಿಸಬಹುದು.
  • ಕಾಯಿಲೆ ಆರಂಭದ 48 ಗಂಟೆಗಳಲ್ಲಿ ಔಷಧ ತೆಗೆದುಕೊಂಡರೆ ಪರಿಣಾಮ ಹೆಚ್ಚು.

ಮುನ್ನೆಚ್ಚರಿಕೆ ಕ್ರಮಗಳು:-

ಹಕ್ಕಿ ಜ್ವರ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಕೆಲವು ಮುನ್ನೆಚ್ಚರಿಕ ಕ್ರಮಗಳನ್ನು ಕೈ ಗೊಂಡರೆ ಹಕ್ಕಿ ಜ್ವರದ ಸೋಂಕು ಹರಡದಂತೆ ತಡೆಯಬಹುದು…

  • ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿಗಳು,ಹಕ್ಕಿಗಳು ಹಾಗೂ ಬಾತು ಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರವಹಿಸಬೇಕು.
  • ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಮುಟ್ಟಬಾರದು.
  • ಕೋಳಿ ಮತ್ತು ಹಕ್ಕಿಗಳ ಮಾಂಸವನ್ನು ಹಾಗೂ ಮೊಟ್ಟೆಗಳನ್ನು ಸೂಕ್ತ ರೀತಿಯಲ್ಲಿ ಬೇಯಿಸಿ ತಿನ್ನುವುದು ಸುರಕ್ಷಿತ.
  • ಕೋಳಿ ಮತ್ತು ಹಕ್ಕಿಗಳನ್ನು ಮನೆಯಲ್ಲಿಯೇ ಕತ್ತರಿಸಬೇಡಿ. ಇವುಗಳನ್ನು ಮನೆಯಲ್ಲಿಯೇ ಕತ್ತರಿಸಿ ಕೊಲ್ಲುವುದರಿಂದ ಸೋಂಕು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.
  • ಹಕ್ಕಿಜ್ವರದ ಚಿಕಿತ್ಸೆಯಲ್ಲಿ “ಟ್ಯಾಮಿಫ್ಲೂ’ ಮಾತ್ರೆ ಬಳಸಲಾಗುತ್ತದೆ. ಮಾತ್ರೆಗಳ ಸ೦ಗ್ರಹ ಸಾಕಷ್ಟು ಇರುವುದರಿ೦ದ ಚಿಕಿತ್ಸೆಗೂ ಯಾವುದೇ ತೊ೦ದರೆಯಾಗುವುದಿಲ್ಲ ಎ೦ದು ಆರೋಗ್ಯ ಇಲಾಖೆ ಸಹ ಮಾಹಿತಿ ನೀಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

    ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್‌ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…

  • ವಿಸ್ಮಯ ಜಗತ್ತು

    ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ..!

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ. ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ! ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ. ರಾಜೋ ಎಂಬ ಮಹಿಳೆ ಐದು ಮಂದಿ…

  • ಆರೋಗ್ಯ

    ಈರುಳ್ಳಿ ಸಿಪ್ಪೆಯ ನಂಬಲೂ ಸಾಧ್ಯವಿಲ್ಲದ ಉಪಯೋಗಗಳ ನಿಮ್ಗೆ ಗೂತ್ತಾ..?ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.

  • ಹಣ ಕಾಸು

    ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

    ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…