ಉಪಯುಕ್ತ ಮಾಹಿತಿ

ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

1422

ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.ಇದು ಟರ್ಕಿ ಕೋಳಿ,ಗಿಣಿ ಕೋಳಿ,ಬಾತು ಕೋಳಿ,ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ.ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು,ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ.ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.

ಈ ರೋಗ ಹೇಗೆ ಹರಡುತ್ತದೆ…

ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ ಸೋನ್ಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಶಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು ಉಸಿರು ರೋಗಾಣುಗಳಿಂದ ತುಂಬಿರುತ್ತದೆ. ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. ಇವುಗಳ ಸಂಪರ್ಕಕ್ಕೆ ಬರುವ ಎಲ್ಲ ಪಕ್ಷಿಗಳಿಗೂ ಸೋಂಕು ತಗುಲುತ್ತದೆ. ಕೋಳಿ ಫಾರಂನಲ್ಲಿ ಒಂದು ಕೋಳಿಗೆ ಸೋಂಕು ಉಂಟಾದರೆ ಕೆಲವೇ ಗಂಟೆಗಳಲ್ಲಿ ಎಲ್ಲ ಕೋಳಿಗಳಿಗೂ ಕಾಯಿಲೆ ಅಂಟಿಕೊಳ್ಳುತ್ತದೆ. ಪಕ್ಷಿಗಳಿಗೆ ಹಂದಿಯಿಂದ, ಹಂದಿಗಳಿಗೆ ಪಕ್ಷಿಗಳಿಂದ ಸೋಂಕು ಅಂಟುವುದೂ ಉಂಟು. ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ. ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ. ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ. ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.

ಈ ರೋಗದ ಲಕ್ಷಣಗಳು:-

ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್1ಏನ್1 ಜ್ವರದ ಲಕ್ಷಣಗಳನ್ತಯೇ ಇರುತ್ತವೆ.

  • ಈ ರೋಗದ ಸೋಂಕಿಗೆ ಒಳಗಾದ ವ್ಯಕ್ತಿಗಳಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ.
  • ಜ್ವರ,ಕೆಮ್ಮು,ಶೀತ,ತಲೆನೋವು,ಗಂಟಲು ಕೆರೆತ,ನೆಗಡಿ,ಸ್ನಾಯುಗಳಲ್ಲಿ ನೋವು,ಮತ್ತು ಆಯಾಸ ಕಾಣಿಸಿಕೊಳ್ಳುತ್ತದೆ.
  • ಕೆಲವೊಮ್ಮೆ ವಾಂತಿ ಮತ್ತು ಭೇದಿ ಆಗಬಹುದು.ಉಸಿರಾಟದಲ್ಲಿ ತೊಂದರೆ ಕಾಣಿಸಬಹುದು.
  • ಹಕ್ಕಿ ಜ್ವರದಿಂದ ಉಸಿರಾಟ ಸಮಸ್ಯೆ ಎದುರಾಗಿ ಸಾವು ಸಂಭವಿಸಬಹುದು.
  • ಕಾಯಿಲೆ ಆರಂಭದ 48 ಗಂಟೆಗಳಲ್ಲಿ ಔಷಧ ತೆಗೆದುಕೊಂಡರೆ ಪರಿಣಾಮ ಹೆಚ್ಚು.

ಮುನ್ನೆಚ್ಚರಿಕೆ ಕ್ರಮಗಳು:-

ಹಕ್ಕಿ ಜ್ವರ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಕೆಲವು ಮುನ್ನೆಚ್ಚರಿಕ ಕ್ರಮಗಳನ್ನು ಕೈ ಗೊಂಡರೆ ಹಕ್ಕಿ ಜ್ವರದ ಸೋಂಕು ಹರಡದಂತೆ ತಡೆಯಬಹುದು…

  • ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿಗಳು,ಹಕ್ಕಿಗಳು ಹಾಗೂ ಬಾತು ಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರವಹಿಸಬೇಕು.
  • ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಮುಟ್ಟಬಾರದು.
  • ಕೋಳಿ ಮತ್ತು ಹಕ್ಕಿಗಳ ಮಾಂಸವನ್ನು ಹಾಗೂ ಮೊಟ್ಟೆಗಳನ್ನು ಸೂಕ್ತ ರೀತಿಯಲ್ಲಿ ಬೇಯಿಸಿ ತಿನ್ನುವುದು ಸುರಕ್ಷಿತ.
  • ಕೋಳಿ ಮತ್ತು ಹಕ್ಕಿಗಳನ್ನು ಮನೆಯಲ್ಲಿಯೇ ಕತ್ತರಿಸಬೇಡಿ. ಇವುಗಳನ್ನು ಮನೆಯಲ್ಲಿಯೇ ಕತ್ತರಿಸಿ ಕೊಲ್ಲುವುದರಿಂದ ಸೋಂಕು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.
  • ಹಕ್ಕಿಜ್ವರದ ಚಿಕಿತ್ಸೆಯಲ್ಲಿ “ಟ್ಯಾಮಿಫ್ಲೂ’ ಮಾತ್ರೆ ಬಳಸಲಾಗುತ್ತದೆ. ಮಾತ್ರೆಗಳ ಸ೦ಗ್ರಹ ಸಾಕಷ್ಟು ಇರುವುದರಿ೦ದ ಚಿಕಿತ್ಸೆಗೂ ಯಾವುದೇ ತೊ೦ದರೆಯಾಗುವುದಿಲ್ಲ ಎ೦ದು ಆರೋಗ್ಯ ಇಲಾಖೆ ಸಹ ಮಾಹಿತಿ ನೀಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • ದೇಶ-ವಿದೇಶ

    ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

    ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.

  • ಸೌಂದರ್ಯ

    ಈಕೆಯ ವಯಸ್ಸು ನೀವ್ ಅನ್ಕೊಂಡಿರ ಹಾಗೆ ಇಲ್ಲ!ಶಾಕ್ ಆಗ್ತೀರಾ..ಈ ಲೇಖನಿ ಓದಿ…

    ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…

  • ಸುದ್ದಿ

    BPL ಕಾರ್ಡ್ ಇದ್ದವರು ರೆಷೆನ್ ಬೇಕೆಂದರೆ ಜುಲೈ 31 ಒಳಗೆ ಈ ಕೆಲಸ ಮಾಡಬೇಕು…..!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…