ಉಪಯುಕ್ತ ಮಾಹಿತಿ

ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

1377

ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.ಇದು ಟರ್ಕಿ ಕೋಳಿ,ಗಿಣಿ ಕೋಳಿ,ಬಾತು ಕೋಳಿ,ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ.ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು,ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ.ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.

ಈ ರೋಗ ಹೇಗೆ ಹರಡುತ್ತದೆ…

ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ ಸೋನ್ಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಶಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು ಉಸಿರು ರೋಗಾಣುಗಳಿಂದ ತುಂಬಿರುತ್ತದೆ. ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. ಇವುಗಳ ಸಂಪರ್ಕಕ್ಕೆ ಬರುವ ಎಲ್ಲ ಪಕ್ಷಿಗಳಿಗೂ ಸೋಂಕು ತಗುಲುತ್ತದೆ. ಕೋಳಿ ಫಾರಂನಲ್ಲಿ ಒಂದು ಕೋಳಿಗೆ ಸೋಂಕು ಉಂಟಾದರೆ ಕೆಲವೇ ಗಂಟೆಗಳಲ್ಲಿ ಎಲ್ಲ ಕೋಳಿಗಳಿಗೂ ಕಾಯಿಲೆ ಅಂಟಿಕೊಳ್ಳುತ್ತದೆ. ಪಕ್ಷಿಗಳಿಗೆ ಹಂದಿಯಿಂದ, ಹಂದಿಗಳಿಗೆ ಪಕ್ಷಿಗಳಿಂದ ಸೋಂಕು ಅಂಟುವುದೂ ಉಂಟು. ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ. ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ. ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ. ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.

ಈ ರೋಗದ ಲಕ್ಷಣಗಳು:-

ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್1ಏನ್1 ಜ್ವರದ ಲಕ್ಷಣಗಳನ್ತಯೇ ಇರುತ್ತವೆ.

  • ಈ ರೋಗದ ಸೋಂಕಿಗೆ ಒಳಗಾದ ವ್ಯಕ್ತಿಗಳಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ.
  • ಜ್ವರ,ಕೆಮ್ಮು,ಶೀತ,ತಲೆನೋವು,ಗಂಟಲು ಕೆರೆತ,ನೆಗಡಿ,ಸ್ನಾಯುಗಳಲ್ಲಿ ನೋವು,ಮತ್ತು ಆಯಾಸ ಕಾಣಿಸಿಕೊಳ್ಳುತ್ತದೆ.
  • ಕೆಲವೊಮ್ಮೆ ವಾಂತಿ ಮತ್ತು ಭೇದಿ ಆಗಬಹುದು.ಉಸಿರಾಟದಲ್ಲಿ ತೊಂದರೆ ಕಾಣಿಸಬಹುದು.
  • ಹಕ್ಕಿ ಜ್ವರದಿಂದ ಉಸಿರಾಟ ಸಮಸ್ಯೆ ಎದುರಾಗಿ ಸಾವು ಸಂಭವಿಸಬಹುದು.
  • ಕಾಯಿಲೆ ಆರಂಭದ 48 ಗಂಟೆಗಳಲ್ಲಿ ಔಷಧ ತೆಗೆದುಕೊಂಡರೆ ಪರಿಣಾಮ ಹೆಚ್ಚು.

ಮುನ್ನೆಚ್ಚರಿಕೆ ಕ್ರಮಗಳು:-

ಹಕ್ಕಿ ಜ್ವರ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಕೆಲವು ಮುನ್ನೆಚ್ಚರಿಕ ಕ್ರಮಗಳನ್ನು ಕೈ ಗೊಂಡರೆ ಹಕ್ಕಿ ಜ್ವರದ ಸೋಂಕು ಹರಡದಂತೆ ತಡೆಯಬಹುದು…

  • ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿಗಳು,ಹಕ್ಕಿಗಳು ಹಾಗೂ ಬಾತು ಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರವಹಿಸಬೇಕು.
  • ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಮುಟ್ಟಬಾರದು.
  • ಕೋಳಿ ಮತ್ತು ಹಕ್ಕಿಗಳ ಮಾಂಸವನ್ನು ಹಾಗೂ ಮೊಟ್ಟೆಗಳನ್ನು ಸೂಕ್ತ ರೀತಿಯಲ್ಲಿ ಬೇಯಿಸಿ ತಿನ್ನುವುದು ಸುರಕ್ಷಿತ.
  • ಕೋಳಿ ಮತ್ತು ಹಕ್ಕಿಗಳನ್ನು ಮನೆಯಲ್ಲಿಯೇ ಕತ್ತರಿಸಬೇಡಿ. ಇವುಗಳನ್ನು ಮನೆಯಲ್ಲಿಯೇ ಕತ್ತರಿಸಿ ಕೊಲ್ಲುವುದರಿಂದ ಸೋಂಕು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.
  • ಹಕ್ಕಿಜ್ವರದ ಚಿಕಿತ್ಸೆಯಲ್ಲಿ “ಟ್ಯಾಮಿಫ್ಲೂ’ ಮಾತ್ರೆ ಬಳಸಲಾಗುತ್ತದೆ. ಮಾತ್ರೆಗಳ ಸ೦ಗ್ರಹ ಸಾಕಷ್ಟು ಇರುವುದರಿ೦ದ ಚಿಕಿತ್ಸೆಗೂ ಯಾವುದೇ ತೊ೦ದರೆಯಾಗುವುದಿಲ್ಲ ಎ೦ದು ಆರೋಗ್ಯ ಇಲಾಖೆ ಸಹ ಮಾಹಿತಿ ನೀಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಇಂದಿನ ಅದೃಷ್ಟದ ಸಂಖ್ಯೆ ಯಾವುದು ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…

  • ಸುದ್ದಿ

    ಹೊಸ ಪ್ಲಾನ್​ ರೆಡಿ.,ಬಾಲಿವುಡ್‌ನಲ್ಲಿ ಬರಲಿದೆ ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿ ಲವ್​ ಸ್ಟೋರಿ ಕುರಿತ ಸಿನಿಮಾ…!

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್‌ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ  ಅಶ್ವಿನಿ ಅಯ್ಯರ್​ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…

  • ಸುದ್ದಿ

    ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್. ವಿಡಿಯೋ ವೈರಲ್!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್​, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್,  ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್​​​​​ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್​​​ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…