News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

1442

ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.ಇದು ಟರ್ಕಿ ಕೋಳಿ,ಗಿಣಿ ಕೋಳಿ,ಬಾತು ಕೋಳಿ,ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ.ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು,ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ.ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.

ಈ ರೋಗ ಹೇಗೆ ಹರಡುತ್ತದೆ…

ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ ಸೋನ್ಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಶಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ. ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು ಉಸಿರು ರೋಗಾಣುಗಳಿಂದ ತುಂಬಿರುತ್ತದೆ. ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. ಇವುಗಳ ಸಂಪರ್ಕಕ್ಕೆ ಬರುವ ಎಲ್ಲ ಪಕ್ಷಿಗಳಿಗೂ ಸೋಂಕು ತಗುಲುತ್ತದೆ. ಕೋಳಿ ಫಾರಂನಲ್ಲಿ ಒಂದು ಕೋಳಿಗೆ ಸೋಂಕು ಉಂಟಾದರೆ ಕೆಲವೇ ಗಂಟೆಗಳಲ್ಲಿ ಎಲ್ಲ ಕೋಳಿಗಳಿಗೂ ಕಾಯಿಲೆ ಅಂಟಿಕೊಳ್ಳುತ್ತದೆ. ಪಕ್ಷಿಗಳಿಗೆ ಹಂದಿಯಿಂದ, ಹಂದಿಗಳಿಗೆ ಪಕ್ಷಿಗಳಿಂದ ಸೋಂಕು ಅಂಟುವುದೂ ಉಂಟು. ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ. ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ. ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ. ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.

ಈ ರೋಗದ ಲಕ್ಷಣಗಳು:-

ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್1ಏನ್1 ಜ್ವರದ ಲಕ್ಷಣಗಳನ್ತಯೇ ಇರುತ್ತವೆ.

  • ಈ ರೋಗದ ಸೋಂಕಿಗೆ ಒಳಗಾದ ವ್ಯಕ್ತಿಗಳಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ.
  • ಜ್ವರ,ಕೆಮ್ಮು,ಶೀತ,ತಲೆನೋವು,ಗಂಟಲು ಕೆರೆತ,ನೆಗಡಿ,ಸ್ನಾಯುಗಳಲ್ಲಿ ನೋವು,ಮತ್ತು ಆಯಾಸ ಕಾಣಿಸಿಕೊಳ್ಳುತ್ತದೆ.
  • ಕೆಲವೊಮ್ಮೆ ವಾಂತಿ ಮತ್ತು ಭೇದಿ ಆಗಬಹುದು.ಉಸಿರಾಟದಲ್ಲಿ ತೊಂದರೆ ಕಾಣಿಸಬಹುದು.
  • ಹಕ್ಕಿ ಜ್ವರದಿಂದ ಉಸಿರಾಟ ಸಮಸ್ಯೆ ಎದುರಾಗಿ ಸಾವು ಸಂಭವಿಸಬಹುದು.
  • ಕಾಯಿಲೆ ಆರಂಭದ 48 ಗಂಟೆಗಳಲ್ಲಿ ಔಷಧ ತೆಗೆದುಕೊಂಡರೆ ಪರಿಣಾಮ ಹೆಚ್ಚು.

ಮುನ್ನೆಚ್ಚರಿಕೆ ಕ್ರಮಗಳು:-

ಹಕ್ಕಿ ಜ್ವರ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರು ಕೆಲವು ಮುನ್ನೆಚ್ಚರಿಕ ಕ್ರಮಗಳನ್ನು ಕೈ ಗೊಂಡರೆ ಹಕ್ಕಿ ಜ್ವರದ ಸೋಂಕು ಹರಡದಂತೆ ತಡೆಯಬಹುದು…

  • ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿಗಳು,ಹಕ್ಕಿಗಳು ಹಾಗೂ ಬಾತು ಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರವಹಿಸಬೇಕು.
  • ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಮುಟ್ಟಬಾರದು.
  • ಕೋಳಿ ಮತ್ತು ಹಕ್ಕಿಗಳ ಮಾಂಸವನ್ನು ಹಾಗೂ ಮೊಟ್ಟೆಗಳನ್ನು ಸೂಕ್ತ ರೀತಿಯಲ್ಲಿ ಬೇಯಿಸಿ ತಿನ್ನುವುದು ಸುರಕ್ಷಿತ.
  • ಕೋಳಿ ಮತ್ತು ಹಕ್ಕಿಗಳನ್ನು ಮನೆಯಲ್ಲಿಯೇ ಕತ್ತರಿಸಬೇಡಿ. ಇವುಗಳನ್ನು ಮನೆಯಲ್ಲಿಯೇ ಕತ್ತರಿಸಿ ಕೊಲ್ಲುವುದರಿಂದ ಸೋಂಕು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ.
  • ಹಕ್ಕಿಜ್ವರದ ಚಿಕಿತ್ಸೆಯಲ್ಲಿ “ಟ್ಯಾಮಿಫ್ಲೂ’ ಮಾತ್ರೆ ಬಳಸಲಾಗುತ್ತದೆ. ಮಾತ್ರೆಗಳ ಸ೦ಗ್ರಹ ಸಾಕಷ್ಟು ಇರುವುದರಿ೦ದ ಚಿಕಿತ್ಸೆಗೂ ಯಾವುದೇ ತೊ೦ದರೆಯಾಗುವುದಿಲ್ಲ ಎ೦ದು ಆರೋಗ್ಯ ಇಲಾಖೆ ಸಹ ಮಾಹಿತಿ ನೀಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊದಲ ವಾರವೇ ಗಳಿಕೆಯಲ್ಲಿ ದಾಖಲೆ ಮುರಿದ ಶ್ರೀಮುರಳಿ ಅಭಿನಯದ ಭರಾಟೆ..!

    ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • ಸುದ್ದಿ

    ‘ವೃಷಭಾವತಿ ಉಳಿಸಿ‌’ ಅಭಿಯಾನಕ್ಕೆ ಮತ್ತು ಮ್ಯಾರಥಾನ್ ನಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್ ಸಾಥ್…!

    ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ‌ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….

  • ಉಪಯುಕ್ತ ಮಾಹಿತಿ

    ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

    ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..

  • ವಿಶೇಷ ಲೇಖನ

    ಈ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಪುಸ್ತಕದ ಬದಲು ಏನಿತ್ತು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…