ಆಧ್ಯಾತ್ಮ

ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

5024

ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ. ‘ಮನಯೇವ ಮನುಷ್ಯಾಣಾಂ, ಕಾರಣಯೋ ಬಂಧನ, ಮೋಕ್ಷಯಃ‘ ಎಂದಿವೆ ಸ್ಮೃತಿ ವಾಕ್ಯಗಳು. ಅಂದರೆ ಬಂಧನದಿಂದ ಬಿಡಿಸಿಕೊಳ್ಳುವುದಕ್ಕೆ ಹಾಗೂ ಮೋಕ್ಷ ಪಡೆಯುವುದಕ್ಕೆ ಮನಸ್ಸೇ ಮುಖ್ಯ ಕಾರಣವಾಗುತ್ತದೆ.

ಮನಸ್ಸನ್ನು ನಿಗ್ರಹಿಸಿ ಬುದ್ಧಿವಂತಿಕೆ ಹೆಚ್ಚಿಸಿಕೊಳ್ಳುವುದಕ್ಕೆ ಬ್ರಹ್ಮರ್ಷಿ ವಿಶ್ವಾಮಿತ್ರರು ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. 24 ಅಕ್ಷರಗಳ ಒಂದು ಛಂದಸ್ಸಿನ ಗಾಯತ್ರಿ ಮಂತ್ರಕ್ಕೆ ಸಮನಾದ ಮಂತ್ರ ವೇದದಲ್ಲಿಯೇ ಮತ್ತೊಂದಿಲ್ಲ ಎನ್ನುತ್ತಾರೆ ಋಷಿಗಳು. ‘ಬ್ರಹ್ಮದೇವರು ಮೂರು ವೇದದ ಸಾರವನ್ನು ಗಾಯತ್ರಿ ಮಂತ್ರದ ಮೂರು ಚರಣಗಳಲ್ಲಿ ತುಂಬಿಸಿಕೊಟ್ಟಿರುವವರು‘ ಗಾಯತ್ರಿಯಿಂದ ಸರ್ವ ರೀತಿಯ ಸಿದ್ಧಿಪ್ರಾಪ್ತಿಯಾಗುತ್ತದೆ ಎನ್ನುತ್ತಾನೆ ಭಗವಾನ್ ಮನು.

ಎಲ್ಲಾ ಮಂತ್ರ, ಪೂಜೆ, ಪುರಸ್ಕಾರಗಳಿಗೂ ಅತೀ ಎತ್ತರದಲ್ಲಿ ರಾರಾಜಿಸುವುದು ಗಾಯತ್ರಿ ಮಹಾಮಂತ್ರ. ಅಥರ್ವವೇದದಲ್ಲಿ ಗಾಯತ್ರಿ ಮಂತ್ರವನ್ನು ಶಕ್ತಿ, ಧನ ಸಂಪತ್ತು ಮತ್ತು ಬ್ರಹ್ಮತೇಜಸ್ಸನ್ನು ನೀಡುವ ಮಹಾಮಾತೆ ಎಂದು ಉಲ್ಲೇಖಿಸಿದ್ದಾರೆ.

ಇನ್ನು ಮಹಾಭಾರತವನ್ನು ರಚಿಸಿದ ವ್ಯಾಸ ಮಹರ್ಷಿಗಳೂ ಸಹ ಗಾಯತ್ರಿ ಮಂತ್ರವನ್ನು ಕೊಂಡಾಡಿದ್ದು, ಗಾಯತ್ರಿವನ್ನು ಪಕ್ವಾನ್ನ( ಮೃಷ್ಟಾನ್ನ)ಕ್ಕೆ ಹೋಲಿಕೆ ಮಾಡಿದ್ದಾರೆ. ಗಾಯತ್ರಿಯು ಲೋಕಕ್ಕೆ ತಾಯಿ. ಪರಬ್ರಹ್ಮನ ಸ್ವರೂಪವುಳ್ಳವಳು, ಶ್ರೇಷ್ಠ ಸಂಪತ್ತನ್ನು ಕೊಡುವವಳು, ಜಪಿಸಲು ಯೋಗ್ಯಳು, ಬ್ರಹ್ಮತೇಜಸ್ಸನ್ನು ಹೆಚ್ಚಿಸುವವಳು ಆಗಿದ್ದಾಳೆ.

ಗಾಯತ್ರಿ ಮಂತ್ರ :-

“ಓಂ ಭೂರ್ಭುವಃ ಸ್ವಃ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್”           ಹೀಗೆ ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಏಕಾಗ್ರತೆ ಹೆಚ್ಚಲಿದ್ದು, ಮನಸ್ಸನ್ನು ನಿಯಂತ್ರಿಸಿ ಇಷ್ಟಾರ್ಥಗಳನ್ನು ಸಿದ್ಧಿಸುವ ಮನೋಬಲ ಸಿದ್ಧಿಸುತ್ತದೆ. ಈ ಮೂಲಕ ಸಂಪತ್ತು ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬ ನಂಬಿಕೆ ಇದೆ.

ಸಂಪತ್ತಿನ ವೃದ್ಧಿಗಾಗಿ ಜಪಿಸಬೇಕಿರುವ ಮತ್ತೊಂದು ಮಂತ್ರವೆಂದರೆ ಅದು ಭಗವಾನ್  ವಿಷ್ಣುವಿನ ಮಂತ್ರ :-

ಮಹಾ ವಿಷ್ಣು ಸಂಪತ್ತಿನ ಅಧಿದೇವತೆ ಲಕ್ಷ್ಮಿ ದೇವಿಯ ಪತಿ. ಲಕ್ಷ್ಮಿ ಪತಿಯ ಮಂತ್ರ                                             “ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್” ವನ್ನು ಜಪಿಸಿದರೆ ಸಂಪತ್ತು ವೃದ್ಧಿಸಲಿದೆ ಎಂಬ ನಂಬಿಕೆ ಇದೆ.

ಓಂ ಮಹಾಲಕ್ಷ್ಮೈಚ ವಿದ್ಮಹೇ ವಿಷ್ಣು ಪತ್ನೀಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್ ಎಂಬುದೂ ಸಹ ಲಕ್ಷ್ಮಿಯನ್ನು ಒಲಿಸಿಕೊಳ್ಳಲು ಇರುವ ಮಂತ್ರವಾಗಿದ್ದು ಈ ಮಂತ್ರವನ್ನು ಜಪಿಸಿದರೂ ಸಹ ಸಂಪತ್ತು, ಸಂವೃದ್ಧಿ ಹೆಚ್ಚಲಿದೆ ಎಂಬ ದೃಢ ನಂಬಿಕೆ ಇದೆ.

ಮಂತ್ರಗಳನ್ನು ಬರೀ ಉಚ್ಚರಿಸುವುದಲ್ಲ, ಅದರ ಮೇಲೆ ನಿಮಗೆ ನಂಬಿಕೆ ಇರಬೇಕು. ನಂಬಿಕೆ ಇಲ್ಲಂದ್ರೆ ಏನು ಮಾಡಿದರೂ ಯಶಸ್ಸು ಸಿಗುವುದಿಲ್ಲ. ಆದ್ರಿಂದ ನಂಬಿಕೆ ಇಟ್ಟು ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಇಂದು ವೈದ್ಯರ ಮುಷ್ಕರ, ರೋಗಿಗಳ ಪರದಾಟ..!ತಿಳಿಯಲು ಇದನ್ನು ಓದಿ..

    ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
    ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.

  • ಉಪಯುಕ್ತ ಮಾಹಿತಿ

    ಸಾಮಾನ್ಯವಾಗಿ ಬಾಳೆ ಬಾಳೆಹಣ್ಣಿನ ಬಗ್ಗೆ ಎಲ್ಲರಿಗೂ ಗೊತ್ತು..ಆದರೆ ಬಾಳೆ ಸಿಪ್ಪೆಯ ಉಪಯೋಗಗಳ ಬಗ್ಗೆ ಗೊತ್ತಾ..?

    ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ

  • ಆರೋಗ್ಯ

    ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮನಾ..?ತಿಳಿಯಲು ಈ ಲೇಖನ ಓದಿ…

    ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್‌, ಚಿಕ್ಕೋರ್‌ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…

  • ಸುದ್ದಿ

    ಮೋದಿ ಸರಕಾರದಿಂದ ಕೊನೆಯ ಬಜೆಟ್..ಮಧ್ಯಮ ವರ್ಗಕ್ಕೆ ಬಂಪರ್ ಆಫರ್!ಈ ಬಜೆಟ್ ನಿಂದ ನಿಮಗೆಷ್ಟು ಲಾಭ..ಇಲ್ಲಿದೆ ಸಂಪೂರ್ಣ ಮಾಹಿತಿ…

    ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…