ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ.

ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ ರಾಜ್ಯಕ್ಕೆ ಸಂಭಂದಪಡುವುದಿಲ್ಲ.

ಯಾವುದೇ ಒಂದು ರಾಜ್ಯಕ್ಕೆ ತಾತ್ಕಾಲಿಕವಾಗಿ ವಿಶೇಷ ಸ್ಥಾನಮಾನ ಕಲ್ಪಿಸಲು ಭಾರತದ ಸಂವಿಧಾನದ 21ನೇ ಪರಿಚ್ಛೇದ ಅನ್ವಯವಾಗುತ್ತದೆ. ಪ್ರಾಂತೀಯ ಸರಕಾರಕ್ಕೆ ಸಾಕಷ್ಟು ಅಧಿಕಾರವನ್ನು ದಯಪಾಲಿಸುವ ವಿಧಿಯೇ 370. ಇದರ ಪ್ರಕಾರ ಒಂದು ಪ್ರಾಂತ್ಯಕ್ಕೆ ತಾತ್ಕಾಲಿಕವಾಗಿ (ಆ ಸಂದರ್ಭಕ್ಕೆ ಅಗತ್ಯವಿದ್ದಂತೆ) ವಿಶೇಷ ಸ್ಥಾನಮಾನವನ್ನು ಕಲ್ಪಿಸಬಹುದು. ಅಂತಹ ಸ್ಥಾನ ಪಡೆದ ರಾಜ್ಯ, ದೇಶದ ಎಲ್ಲ ರಾಜ್ಯಗಳಿಗೂ ಅನ್ವಯವಾಗುವ ಕಾನೂನಿನಿಂದ ಮುಕ್ತ. ಕೆಲವು ಕ್ಷೇತ್ರಗಳ ಹೊರತಾಗಿ ಉಳಿದೆಲ್ಲ ವಿಚಾರಗಳನ್ನು ಅಲ್ಲಿನ ವಿಧಾನಸಭೆಗೇ ಬಿಡಬೇಕು.

ಈ ಸೌಲಭ್ಯ ಜಾರಿಗೆ ಬಂದಿದ್ದು, 1947ರಲ್ಲಿ. ಆಗ ಶೇಖ್ ಅಬ್ದುಲ್ಲಾ ಎಂಬುವರನ್ನು ಜಮ್ಮು ಕಾಶ್ಮೀರದ ಪ್ರಧಾನಿಯಾಗಿ ಮಹಾರಾಜಾ ಹರಿಸಿಂಗ್ ಹಾಗೂ ಜವಾಹರಲಾಲ್ ನೆಹರು ನೇಮಿಸಿದ್ದರು. ಅಂದು ರಾಜ್ಯದ ಪ್ರಧಾನಿಯಾಗಿ ಹೊಂದಿದ್ದ ಸ್ವಾಯತ್ತತೆಯನ್ನು ಎಲ್ಲ ಸಮಯಕ್ಕೂ ಉಳಿಸಿಕೊಳ್ಳುವ ಉದ್ದೇಶ ಹೊಂದಿದ್ದ ಅಬ್ದುಲ್ಲಾ 370ನೇ ವಿಧಿಯನ್ನು ಶಾಶ್ವತಗೊಳಿಸಬೇಕೆಂದು ವಾದಿಸಿದ್ದ. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಕೊಂಡಿರಲಿಲ್ಲ.
1947ರ ಆಗಸ್ಟ್ 14, 15ರಂದು ಕ್ರಮವಾಗಿ ಭಾರತ ಮತ್ತು ಪಾಕಿಸ್ತಾನ ಸ್ವತಂತ್ರಗೊಂಡವು. ಆ ವೇಳೆ ಕಾಶ್ಮೀರವನ್ನು ಒಂದು ಸ್ವತಂತ್ರ ರಾಜ್ಯವನ್ನಾಗಿ ಘೋಷಿಸಲಾಗಿತ್ತು. ಆ ರಾಜ್ಯದ ಮೇಲೆ ಎರಡೂ ದೇಶಗಳು ದಾಳಿ ಮಾಡಬಾರದೆಂಬ ನಿರ್ಣಯ ಕೈಗೊಳ್ಳಲಾಯಿತು. ಆದರೆ ಪಾಕಿಸ್ತಾನ ಕಾಶ್ಮೀರವನ್ನು ತನ್ನದಾಗಿಸಿಕೊಳ್ಳಬೇಕೆಂಬ ಪ್ರಯತ್ನವನ್ನು ಕೈಬಿಡಲಿಲ್ಲ.

1947 ಅ. 6ರಂದು ಪಾಕ್ ಬೆಂಬಲಿತ ‘ಆಜಾದ್ ಕಾಶ್ಮೀರ್’ ಎಂಬ ಪಡೆಯು ಪಾಕ್ ಮೇಲೆ ಮುಗಿಬಿತ್ತು. ಆಗ ಕಾಶ್ಮೀರವನ್ನು ಆಳುತ್ತಿದ್ದ ಮಹಾರಾಜ ಹರಿಸಿಂಗ್ ತಮ್ಮ ರಾಜ್ಯವನ್ನು ರಕ್ಷಿಸುವಂತೆ ಭಾರತವನ್ನು ಕೋರಿದರು. ಕಾಶ್ಮೀರವನ್ನು ಭಾರತಕ್ಕೆ ಸಂಪೂರ್ಣವಾಗಿ ಒಪ್ಪಿಸಿದರೆ ನೆರವು ನೀಡುವುದಾಗಿ ಆಗ ಭಾರತ ಸರಕಾರ ಹೇಳಿತ್ತು. ಇದಕ್ಕೆ ಹರಿಸಿಂಗ್ ಸುತರಾಂ ಒಪ್ಪಲಿಲ್ಲ.

ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿದ ಅಂದಿನ ಪ್ರಧಾನಿ ಪಂಡಿತ್ ಜವಹರ್ಲಾಲ್ ನೆಹರೂ ಒಂದು ಒಪ್ಪಂದಕ್ಕೆ ಬಂದರು. ”ಭಾರತದೊಂದಿಗೆ ಜಮ್ಮು ಕಾಶ್ಮೀರ ವಿಲೀನವಾಗಬೇಕು, ಭಾರತದ ಸಂವಿಧಾನದ 370ನೇ ವಿಧಿ ಪ್ರಕಾರ ರಕ್ಷಣೆ, ವಿದೇಶಾಂಗ ಮತ್ತು ಸಂವಹನ ಕ್ಷೇತ್ರಗಳ ಹೊರತಾಗಿ ಇನ್ಯಾವುದೇ ವಿಷಯದಲ್ಲಿ ಭಾರತದ ಕಾನೂನುಗಳು ಕಾಶ್ಮೀರಕ್ಕೆ ಅನ್ವಯವಾಗುವುದಿಲ್ಲ.” ಆ ಕರಾರುಗಳಿಗೆ ಸಹಿ ಬಿದ್ದಾಗಿನಿಂದ ಜಮ್ಮು ಕಾಶ್ಮೀರಕ್ಕೆ 370ನೇ ವಿಧಿ ಅನ್ವಯವಾಗಿದೆ.

ಪ್ರತಿ ವಿಷಯದಲ್ಲಿಯೂ ಪ್ರತ್ಯೇಕ ಹೆಜ್ಜೆ ತುಳಿಯಲು ಕಾನೂನುಬದ್ಧ ಅಧಿಕಾರ ಹೊಂದಿರುವ ಕಾಶ್ಮೀರ ಈಗ ಕೈಲಿದ್ದರೂ ಇಲ್ಲದ ಸ್ಥಿತಿ. ಏಕೆಂದರೆ ಸಂವಿಧಾನದ 238ನೇ ವಿಧಿ ಬೇರೆಲ್ಲಾ ರಾಜ್ಯಗಳಿಗೆ ಅನ್ವಯವಾದರೂ ಜಮ್ಮು- ಕಾಶ್ಮೀರಕ್ಕಲ್ಲ. ಆ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಸಂಸತ್ಗಿಲ್ಲ.
ಒಂದು ವೇಳೆ ಸಂಸತ್ ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸಲೇಬೇಕೆಂದಿದ್ದರೆ ಅದನ್ನು ರಾಷ್ಟ್ರಪತಿ ಮೂಲಕ ರಾಜ್ಯ ಸರಕಾರಕ್ಕೆ ಮುಟ್ಟಿಸಿ ಆ ರಾಜ್ಯದ ವಿಧಾನಸಭೆಯಲ್ಲಿ ಮಂಡನೆ ಮಾಡಬೇಕು. ಜತೆಗೆ ಕೆಲವು ಕಾನೂನುಗಳನ್ನು ಅಲ್ಲಿನ ಸರಕಾರದ ಅನುಮತಿ ಪಡೆದು ಸಂಸತ್ನಲ್ಲಿ ಮಂಡನೆ ಮಾಡಬಹುದು.
ಅಂದರೆ, ಭಾರತದ ಸಂವಿಧಾನವೇ ಒಂದಾದರೆ ಕಾಶ್ಮೀರಕ್ಕೇ ಪ್ರತ್ಯೇಕ ಸಂವಿಧಾನ. ಅದರ ತಿದ್ದುಪಡಿಯಾಗುವುದೂ ಆ ರಾಜ್ಯದ ವಿಧಾನಸಭೆಯಲ್ಲಿ. ಅಲ್ಲಿ ಕೈಗೊಳ್ಳಲಾಗವ ನಿರ್ಧಾರಗಳನ್ನು ಆ ರಾಜ್ಯ ಸರಕಾರದ ಅನುಮತಿ ಪಡೆದು ರಾಷ್ಟ್ರಪತಿ ಸಹಿ ಹಾಕಬೇಕಾಗುತ್ತದೆ. ಈ ರೀತಿ ಪ್ರತ್ಯೇಕ ಸಂವಿಧಾನ ಹೊಂದಿರುವ ಏಕೈಕ ರಾಜ್ಯ ಜಮ್ಮು ಕಾಶ್ಮೀರ. 1957ರ ಜನವರಿ 26ರಂದು ಅಲ್ಲಿನ ವಿಧಾನಸಭೆ ಪ್ರತ್ಯೇಕ ಸಂವಿಧಾನವನ್ನು ಅಂಗೀಕರಿಸಿತು.

ಸಂವಿಧಾನದ ವಿಧಿ 360ರ ಪ್ರಕಾರ ಕೇಂದ್ರ ಸರಕಾರ ದೇಶಾದ್ಯಂತ ಆರ್ಥಿಕ ತುರ್ತುಸ್ಥಿತಿ ಘೋಷಿಸುವ ವಿಶೇಷ ಅಧಿಕಾರ ಹೊಂದಿರುತ್ತದೆ. ಆದರೆ, ಆರ್ಥಿಕ ತುರ್ತುಸ್ಥಿತಿಯನ್ನು ಈ ರಾಜ್ಯದಲ್ಲಿ ಘೋಷಿಸುವಂತಿಲ್ಲ. ಹೊರ ದೇಶಗಳು ಅತಿಕ್ರಮಣ ನಡೆಸಿದಾಗ ಇಲ್ಲವೇ ಯುದ್ಧದ ಸಮಯದಲ್ಲಿ ಮಾತ್ರ ತುರ್ತುಸ್ಥಿತಿ ಘೊಷಿಸಬಹುದು.
ದೇಶದಲ್ಲಿ ಆಂತರಿಕ ಸಮಸ್ಯೆಗಳು ತಲೆದೋರಿದ ಸಮಯದಲ್ಲಿ ಜಮ್ಮು ಕಾಶ್ಮೀರ ತುರ್ತುಸ್ಥಿತಿಯಂತಹ ಸನ್ನಿವೇಶದಿಂದ ಮುಕ್ತವಾಗಿರುತ್ತದೆ. ಹಾಗೊಂದು ವೇಳೆ ಈ ರಾಜ್ಯದಲ್ಲಿ ತುರ್ತುಸ್ಥಿತಿ ಘೋಷಣೆಯಾಗಲೇಬೇಕೆಂದರೆ ಅದಕ್ಕೆ ಅಲ್ಲಿನ ರಾಜ್ಯ ಸರಕಾರದ ಅನುಮತಿ ಬೇಕು. ರಾಷ್ಟ್ರಪತಿಯಾದವರು ಆ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ಅಲ್ಲಿನ ಸರಕಾರಕ್ಕೆ ಕೋರಿಕೆ ಸಲ್ಲಿಸಬೇಕು.

ಬೇರೆ ರಾಜ್ಯದಿಂದ ಬಂದವರು ಈ ರಾಜ್ಯದಲ್ಲಿ ಆಸ್ತಿ ಖರೀದಿಸುವಂತಿಲ್ಲ. ಆದರೆ, ಈ ರಾಜ್ಯದವರು ಭಾರತದ ಬೇರೆ ರಾಜ್ಯಗಳಲ್ಲಿ ಆಸ್ತಿ ಖರೀದಿಸಬಹುದು.ಈ ನಿಯಮವೇ ಜಮ್ಮು ಕಾಶ್ಮೀರವು ಭಾರತದಿಂದ ಬೇರೆ ಎಂಬ ಭಾವನೆ ಬೆಳೆಯಲು ಕಾರಣವಾಗಿದೆ. ಅಲ್ಲಿನವರಿಗೆ ಕೂಡ ತಾವು ಸಂಪೂರ್ಣ ಭಾರತೀಯರು ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ರಾಜ್ಯದ ಹೊರತಾಗಿ ಬೇರೆಯವರು ಬಂಡವಾಳ ತೊಡಗಿಸಲು ಅವಕಾಶವಿಲ್ಲದ ಕಾರಣ ಇಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಇದಕ್ಕಾಗಿಯೇ ಸ್ಥಳೀಯರು ಶಸ್ತ್ರ ಕೈಗೆತ್ತಿಕೊಂಡು ಉಗ್ರರಾಗುತ್ತಿದ್ದಾರೆಂದು ವರದಿ ಹೇಳುತ್ತದೆ.

ಸ್ವಾತಂತ್ರ್ಯ ಬಂದಾಗಿನಿಂದ ಶಿಕ್ಷಣದ ಹಕ್ಕನ್ನು ಬಿಟ್ಟರೆ ಇನ್ಯಾವ ಹಕ್ಕೂ ಈ ರಾಜ್ಯದಲ್ಲಿ ಜಾರಿಯಾಗಿಲ್ಲ. ಮತ್ತೊಂದು ವಿಚಾರವೆಂದರೆ ಈ ರಾಜ್ಯದ ನಾಗರಿಕನಾದವನು ತೆರಿಗೆ ಕಟ್ಟಬೇಕಾಗಿಲ್ಲ. ದೇಶದ ಎಲ್ಲಾ ಹೈಕೋರ್ಟುಗಳು ಸಂವಿಧಾನದ ವಿಧಿ 226ರ ಪ್ರಕಾರ ಕಾನೂನು ತಿದ್ದುಪಡಿ ಮಾಡುವ ಅಧಿಕಾರವನ್ನು ಹೊಂದಿವೆ. ಆದರೆ, ಜಮ್ಮು ಕಾಶ್ಮೀರ ಹೈಕೋರ್ಟ್ ಮಾತ್ರ ಇದರಿಂದ ಮುಕ್ತ.

ಯಾವ ಕಾನೂನುಗಳನ್ನೂ ಅಸಾಂವಿಧಾನಿಕ ಎಂದು ಘೋಷಿಸುವ ಹಕ್ಕೇ ಇಲ್ಲಿನ ಕೋರ್ಟ್ಗೆ ಇಲ್ಲ. ಈ ರಾಜ್ಯದ ಶಾಶ್ವತ ನಾಗರಿಕರು ಮಾತ್ರ ರಾಜ್ಯ ಸರಕಾರದ ಸೇವೆಗಳಿಗೆ ಅರ್ಹರು. ಶಾಶ್ವತ ನಾಗರಿಕರಿಗೆ ಮಾತ್ರ ಆಸ್ತಿ ಖರೀದಿಸುವ ಹಕ್ಕಿದೆ. ವಿದ್ಯಾರ್ಥಿವೇತನ, ಹಿಂದುಳಿದ ವರ್ಗದವರಿಗೆ ಮೀಸಲಾತಿ ಈ ಎಲ್ಲ ವಿಚಾರದಲ್ಲಿ ಜಮ್ಮು ಕಾಶ್ಮೀರ ವಿಧಾನಸಭೆ ನಿರ್ಣಯವೇ ಅಂತಿಮ. ಒಂದು ವೇಳೆ ರಾಷ್ಟ್ರಪತಿ ಆಡಳಿತ ಹೇರಬೇಕೆಂದರೂ, ರಾಷ್ಟ್ರಪತಿ ಜಮ್ಮು ಕಾಶ್ಮೀರದ ಗವರ್ನರ್ ಅನುಮತಿ ಪಡೆಯಬೇಕು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…