ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ.

ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ.

ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು ನೀಡಿದ್ದರು. ಹಲವು ವರ್ಷಗಳಿಂದ ಸೋಹನ್ ಸಿಂಗ್ ಕುಟುಂಬದವರು ಬಾಬಾನನ್ನು ಆರಾಧ್ಯ ದೈವವೆಂದು ಪೂಜಿಸುತ್ತ ಬಂದಿದ್ದಾರಂತೆ.

ಈ ಬಾಬಾ ಹದಿಹರೆಯದ ಭಕ್ತರ ಜೊತೆಗೆ ಸೆಕ್ಸ್ ಮಾಡಿ, ಅವರಿಗೆ ನಂತರ ಕಿರುಕುಳ ಕೊಡುತ್ತಾನಂತೆ. ಈ ಮೂಲಕ ಅವರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತಾನೆ ಅನ್ನೋ ಆರೋಪವಿದೆ. ಯುವರಾಜ್ ಸಿಂಗ್ ಕೂಡ ಈತನ ಭಕ್ತನಾಗಿದ್ದ.

ಯುವತಿಯೊಬ್ಬಳ ಜೊತೆಗೆ ಆತ ನಿಶ್ಚಿತಾರ್ಥ ಮಾಡಿಕೊಳ್ಳಲು ಮುಂದಾಗಿದ್ದರಿಂದ ಬಾಬಾ ಅವನಿಗೆ ಬೆದರಿಕೆ ಹಾಕಿದ್ದ. ಹಾಗಾಗಿ ಯುವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನಂತೆ. ಲೈಂಗಿಕವಾಗಿ ಭಕ್ತರನ್ನು ಬಳಸಿಕೊಳ್ಳುವುದು ಕೂಡ ಲಿಪ್ ಸ್ಟಿಕ್ ಬಾಬಾನ ಆಚರಣೆಯ ಒಂದು ಭಾಗ ಎಂದು ಹಲವು ಅನುಯಾಯಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆದ್ರೆ ಈತ ಲೈಂಗಿಕ ದೌರ್ಜನ್ಯ ಎಸಗಿರುವುದು ಪುರುಷರ ಮೇಲೆ ಮಾತ್ರ. ಅವರಿಗೆ ಅಶ್ಲೀಲ ವಾಟ್ಸಾಪ್ ಮೆಸೇಜ್ ಕೂಡ ಕಳಿಸುತ್ತಿದ್ದ ಎಂಬ ಆರೋಪವಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.
ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…