News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

243

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ  ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ  ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

2018ನೇ ಸಾಲಿನ  ಬಜೆಟ್’ನ ಪ್ರಮುಖ ಅಂಶಗಳು:-

  • ಕೃಷಿ ಉತ್ಪನ್ನಗಳಿಗೆ ಮೀಸಲು ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚಳ ಮಾಡುವುದಾಗಿ ಘೋಷಣೆ.
  • ಕೃಷಿ ಚಟುವಟಿಕೆಗಳಿಗೆ ಸಾಲ ನೀಡುವ ಸಲುವಾಗಿ, ಅನುದಾನದ ಮೊತ್ತವನ್ನು 11 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಳ.
  • ಕೃಷಿ ಮಾರುಕಟ್ಟೆ ಅಭಿವೃದ್ದಿಗಾಗಿ 22 ಸಾವಿರ ಕೋಟಿ ಅನುದಾನ.

  • ಈಗಿರುವ ಉಜ್ವಲ ಯೋಜನೆ ಅಡಿಯಲ್ಲಿ, ದೇಶದ ಸುಮಾರು ಎಂಟು ಕೋಟಿ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ.
  • ನಾಲ್ಕು ಕೋಟಿ ಬಡ ಕುಟುಂಬಗಳಿಗೆ ಸೌಭಾಗ್ಯ ಯೋಜನೆಯಡಿ ವಿದ್ಯುತ್‌ ಸಂಪರ್ಕ.
  • ಪರಿಶಿಷ್ಟ ಜಾತಿ ಕಲ್ಯಾಣಕ್ಕೆ 56,619 ಕೋಟಿ ರೂ.
  • ಪರಿಶಿಷ್ಟ ವರ್ಗದ ಕಲ್ಯಾಣಕ್ಕೆ 39,135 ಕೋಟಿ ರೂ.
  • ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ  3 ಲಕ್ಷ ಕೋಟಿ ಸಾಲ.
  • 70 ಎಪಿಎಂಸಿಗಳನ್ನು ಇ-ನ್ಯಾಮ್‌ ಮೂಲಕ ಸಂಪರ್ಕ
  • ಕೃಷಿ ಬೆಂಬಲ ಬೆಲೆ ನೆರೆ ರೈತರಿಗೆ ಸಿಗಲು ಕ್ರಮ.
  • ಬುಡಕಟ್ಟು ಜನರ ಶಿಕ್ಷಣಕ್ಕಾಗಿ ಏಕಲವ್ಯ ಶಾಲೆಗಳ ಆರಂಭ.
  • ರೈಲುಗಳಲ್ಲಿ  ವೈ-ಫೈ ಮತ್ತು ಸಿಸಿಟಿವಿ ವ್ಯವಸ್ತೆ.
  • ಹೊಸ ಉದ್ಯೋಗಿಗಳ ಇಪಿಎಫ್‌ ಖಾತೆಗಳಿಗೆ ಶೇ 12ರ ವೇತನ ಸರಕಾರದಿಂದ.
  • 9,000 ಕಿ.ಮೀ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ
  • ಶಾಲೆಗಳ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳಿಗೆ ಒಂದು ಲಕ್ಷ ಕೋಟಿ.
  • ಬಡ್ಡಿ ಆದಾಯದ ಮೇಲಿನ ತೆರಿಗೆ ಮಿತಿ ಹೆಚ್ಚಳ.
  • ಸ್ಮಾರ್ಟ್ ಸಿಟಿಗಳಿಗೆ 2.04 ಲಕ್ಷ ಕೋಟಿ ರೂ. ಅನುದಾನ
  • ರಾಷ್ಟ್ರಪತಿಗಳ ವೇತನವನ್ನು ಪ್ರತಿ ತಿಂಗಳಿಗೆ 5 ಲಕ್ಷ ರೂಪಾಯಿ, ಉಪರಾಷ್ಟ್ರಪತಿಗಳ ವೇತನವನ್ನು 4.5 ಲಕ್ಷ ರೂಪಾಯಿ ಮತ್ತು ರಾಜ್ಯಪಾಲರುಗಳ ವೇತನವನ್ನು 3.5 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ.
  • ಬಡವರಿಗೆ ಕಡಿಮೆ ವೆಚ್ಚದಲ್ಲಿ ಮನೆ.
  • 42 ಮೆಗಾ ಫುಡ್ ಪಾರ್ಕ್ಗಳ ಗೋಷಣೆ.

ಏರಿಕೆಯಾಗಲಿರುವ ವಸ್ತುಗಳು :-

ಮೊಬೈಲ್ ಫೋನ್, ಟಿ.ವಿ ಸೆಟ್, ಡಿಜಿಟಲ್ ಕ್ಯಾಮೆರಾಗಳು, ಮೈಕ್ರೋವೇವ್ ಓವೆನ್, ಎಲ್‍ಇಡಿ ಬಲ್ಬ್ ಗಳು ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆಯಾಗಲಿದೆ.

ಈ ಸಲದ ಬಜೆಟ್’ನಲ್ಲಿ ಮೊಬೈಲ್ ಫೋನ್ ಮೇಲಿನ ಅಬಕಾರಿ ಸುಂಕವನ್ನು 15% ನಿಂದ 20% ಗೆ ಏರಿಸಲಾಗಿದೆ. ಅಲ್ಲಿಗೆ ಆ್ಯಪಲ್ ಐಫೋನ್‍ಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದ್ದು, ಭಾರತದಲ್ಲೇ ಉತ್ಪಾದಿಸುವ ಮೊಬೈಲ್ ಫೋನ್‍ಗಳ ಬೆಲೆಗೆ ಅಂತರ ಹೆಚ್ಚಲಿದೆ.

ಏರಿಕೆಯಾಗಲಿದೆ ಐಫೋನ್

ತಜ್ಞರ ಪ್ರಕಾರ ಐಫೋನ್ ದರದ ಮೇಲೆ 2ರಿಂದ 3 ಸಾವಿರ ರೂ. ಹೆಚ್ಚಾಗಲಿದೆ. ಉದಾಹರಣೆಗೆ ಐಫೋನ್ ಎಕ್ಸ್ ಮಾಡಲ್‍ನ ಫೋನ್ ಈಗ 89 ಸಾವಿರ ರೂ. ಇದ್ದು, ಕಂಪೆನಿ ತೆರಿಗೆ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಿದ್ರೆ ಫೋನ್ ಬೆಲೆ 92 ಸಾವಿರ ರೂ. ಗೆ ಏರಿಕೆಯಾಗುವ ಸಾಧ್ಯತೆಯಿದೆ.

ಟಿ.ವಿಗಳ ಬೆಲೆ ಏರಿಕೆ :-

ಟಿ.ವಿ  ಬೆಲೆಗಳೂ ಕೂಡ ಏರಿಕೆಯಾಗಲಿದ್ದು, ಸ್ಕ್ರೀನ್ ಗಾತ್ರಕ್ಕೆ ಅನುಗುಣವಾಗಿ ಈಗಿರುವ ಬೆಲೆಗಿಂತ ಹೆಚ್ಚಾಗಲಿದೆ. 10 ಸಾವಿರ ರೂ. ಬೆಲೆಯ 20 ಲೀಟರ್ ಮೈಕ್ರೋವೇವ್ ಓವೆನ್ ಬೆಲೆ ಮೇಲೆ 500 ರೂ. ಹೆಚ್ಚಾಗುವ ಸಾಧ್ಯತೆಯಿದೆ.

ಪೆಟ್ರೋಲ್,ಡೀಸೆಲ್

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮೂಲ ಅಬಕಾರಿ ಸುಂಕವನ್ನು ಲೀಟರ್‌ಗೆ 2 ರು. ಹಾಗೂ ಹೆಚ್ಚುವರಿ ಅಬಕಾರಿ ಸುಂಕವನ್ನು 6 ರುಪಾಯಿ ಇಳಿಸುವುದಾಗಿ ಜೇಟ್ಲಿ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದರು.ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಇಳಿಕೆ ಮಾಡಿದ್ದರೂ. ರಸ್ತೆ ಮತ್ತು ಮೂಲ ಸೌಕರ್ಯ ಹೆಸರಲ್ಲಿ 8 ರೂ. ಹೊಸ ಸೆಸ್ ಹಾಕುವ ಮೂಲಕ ದರವನ್ನು ಯಥಾಸ್ಥಿತಿಯಲ್ಲಿ ಇಡಲಾಗಿದೆ.

ಶಿಕ್ಷಣ ಕ್ಷೇತ್ರಕ್ಕೆ ಏನು ಕೊಡುಗೆ….

ಶಿಕ್ಷಣ ಕೇತ್ರದಲ್ಲಿ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಮೂಲಸೌಕರ್ಯ ಹಾಗೂ ತಂತ್ರಜ್ಞಾನ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.

  • ಹೊಸ 24 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆ
  • 2012ರ ವೇಳೆಗೆ ಶಿಕ್ಷಣದಲ್ಲಿ ಮೂಲಸೌಕರ್ಯ ಹಾಗೂ ವ್ಯವಸ್ಥೆ ಪುನಶ್ಚೇತನ (RISE) ಮರು ಜಾರಿ
  • ಕಪ್ಪು ಹಲಗೆಗಳ ಬದಲು ಡಿಜಿಟಲ್‌ ಬೋರ್ಡ್‌ಗಳ ಬಳಕೆ
  • ಶಿಕ್ಷಕರಿಗೆ ಕೇಂದ್ರ ಸರ್ಕಾರದಿಂದ ತರಬೇತಿ
  • ಬುಡಕಟ್ಟು ಹಾಗೂ ಆದಿವಾಸಿ ಮಕ್ಕಳಿಗಾಗಿ ಶಾಲೆಗಳ ಸಂಖ್ಯೆಯಲ್ಲಿ ಹೆಚ್ಚಳ
  • ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ನವೋದಯ ಮಾದರಿಯಲ್ಲಿ ಏಕಲವ್ಯ ಶಾಲೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

    ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…

  • ಸುದ್ದಿ

    ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

    ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ಸುದರ್ಶನ್ ಭಟ್’ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಬುಧವಾರ , 04/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….