News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

242

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ  ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ  ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

2018ನೇ ಸಾಲಿನ  ಬಜೆಟ್’ನ ಪ್ರಮುಖ ಅಂಶಗಳು:-

  • ಕೃಷಿ ಉತ್ಪನ್ನಗಳಿಗೆ ಮೀಸಲು ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚಳ ಮಾಡುವುದಾಗಿ ಘೋಷಣೆ.
  • ಕೃಷಿ ಚಟುವಟಿಕೆಗಳಿಗೆ ಸಾಲ ನೀಡುವ ಸಲುವಾಗಿ, ಅನುದಾನದ ಮೊತ್ತವನ್ನು 11 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಳ.
  • ಕೃಷಿ ಮಾರುಕಟ್ಟೆ ಅಭಿವೃದ್ದಿಗಾಗಿ 22 ಸಾವಿರ ಕೋಟಿ ಅನುದಾನ.

  • ಈಗಿರುವ ಉಜ್ವಲ ಯೋಜನೆ ಅಡಿಯಲ್ಲಿ, ದೇಶದ ಸುಮಾರು ಎಂಟು ಕೋಟಿ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ.
  • ನಾಲ್ಕು ಕೋಟಿ ಬಡ ಕುಟುಂಬಗಳಿಗೆ ಸೌಭಾಗ್ಯ ಯೋಜನೆಯಡಿ ವಿದ್ಯುತ್‌ ಸಂಪರ್ಕ.
  • ಪರಿಶಿಷ್ಟ ಜಾತಿ ಕಲ್ಯಾಣಕ್ಕೆ 56,619 ಕೋಟಿ ರೂ.
  • ಪರಿಶಿಷ್ಟ ವರ್ಗದ ಕಲ್ಯಾಣಕ್ಕೆ 39,135 ಕೋಟಿ ರೂ.
  • ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ  3 ಲಕ್ಷ ಕೋಟಿ ಸಾಲ.
  • 70 ಎಪಿಎಂಸಿಗಳನ್ನು ಇ-ನ್ಯಾಮ್‌ ಮೂಲಕ ಸಂಪರ್ಕ
  • ಕೃಷಿ ಬೆಂಬಲ ಬೆಲೆ ನೆರೆ ರೈತರಿಗೆ ಸಿಗಲು ಕ್ರಮ.
  • ಬುಡಕಟ್ಟು ಜನರ ಶಿಕ್ಷಣಕ್ಕಾಗಿ ಏಕಲವ್ಯ ಶಾಲೆಗಳ ಆರಂಭ.
  • ರೈಲುಗಳಲ್ಲಿ  ವೈ-ಫೈ ಮತ್ತು ಸಿಸಿಟಿವಿ ವ್ಯವಸ್ತೆ.
  • ಹೊಸ ಉದ್ಯೋಗಿಗಳ ಇಪಿಎಫ್‌ ಖಾತೆಗಳಿಗೆ ಶೇ 12ರ ವೇತನ ಸರಕಾರದಿಂದ.
  • 9,000 ಕಿ.ಮೀ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ
  • ಶಾಲೆಗಳ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳಿಗೆ ಒಂದು ಲಕ್ಷ ಕೋಟಿ.
  • ಬಡ್ಡಿ ಆದಾಯದ ಮೇಲಿನ ತೆರಿಗೆ ಮಿತಿ ಹೆಚ್ಚಳ.
  • ಸ್ಮಾರ್ಟ್ ಸಿಟಿಗಳಿಗೆ 2.04 ಲಕ್ಷ ಕೋಟಿ ರೂ. ಅನುದಾನ
  • ರಾಷ್ಟ್ರಪತಿಗಳ ವೇತನವನ್ನು ಪ್ರತಿ ತಿಂಗಳಿಗೆ 5 ಲಕ್ಷ ರೂಪಾಯಿ, ಉಪರಾಷ್ಟ್ರಪತಿಗಳ ವೇತನವನ್ನು 4.5 ಲಕ್ಷ ರೂಪಾಯಿ ಮತ್ತು ರಾಜ್ಯಪಾಲರುಗಳ ವೇತನವನ್ನು 3.5 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ.
  • ಬಡವರಿಗೆ ಕಡಿಮೆ ವೆಚ್ಚದಲ್ಲಿ ಮನೆ.
  • 42 ಮೆಗಾ ಫುಡ್ ಪಾರ್ಕ್ಗಳ ಗೋಷಣೆ.

ಏರಿಕೆಯಾಗಲಿರುವ ವಸ್ತುಗಳು :-

ಮೊಬೈಲ್ ಫೋನ್, ಟಿ.ವಿ ಸೆಟ್, ಡಿಜಿಟಲ್ ಕ್ಯಾಮೆರಾಗಳು, ಮೈಕ್ರೋವೇವ್ ಓವೆನ್, ಎಲ್‍ಇಡಿ ಬಲ್ಬ್ ಗಳು ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆಯಾಗಲಿದೆ.

ಈ ಸಲದ ಬಜೆಟ್’ನಲ್ಲಿ ಮೊಬೈಲ್ ಫೋನ್ ಮೇಲಿನ ಅಬಕಾರಿ ಸುಂಕವನ್ನು 15% ನಿಂದ 20% ಗೆ ಏರಿಸಲಾಗಿದೆ. ಅಲ್ಲಿಗೆ ಆ್ಯಪಲ್ ಐಫೋನ್‍ಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದ್ದು, ಭಾರತದಲ್ಲೇ ಉತ್ಪಾದಿಸುವ ಮೊಬೈಲ್ ಫೋನ್‍ಗಳ ಬೆಲೆಗೆ ಅಂತರ ಹೆಚ್ಚಲಿದೆ.

ಏರಿಕೆಯಾಗಲಿದೆ ಐಫೋನ್

ತಜ್ಞರ ಪ್ರಕಾರ ಐಫೋನ್ ದರದ ಮೇಲೆ 2ರಿಂದ 3 ಸಾವಿರ ರೂ. ಹೆಚ್ಚಾಗಲಿದೆ. ಉದಾಹರಣೆಗೆ ಐಫೋನ್ ಎಕ್ಸ್ ಮಾಡಲ್‍ನ ಫೋನ್ ಈಗ 89 ಸಾವಿರ ರೂ. ಇದ್ದು, ಕಂಪೆನಿ ತೆರಿಗೆ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಿದ್ರೆ ಫೋನ್ ಬೆಲೆ 92 ಸಾವಿರ ರೂ. ಗೆ ಏರಿಕೆಯಾಗುವ ಸಾಧ್ಯತೆಯಿದೆ.

ಟಿ.ವಿಗಳ ಬೆಲೆ ಏರಿಕೆ :-

ಟಿ.ವಿ  ಬೆಲೆಗಳೂ ಕೂಡ ಏರಿಕೆಯಾಗಲಿದ್ದು, ಸ್ಕ್ರೀನ್ ಗಾತ್ರಕ್ಕೆ ಅನುಗುಣವಾಗಿ ಈಗಿರುವ ಬೆಲೆಗಿಂತ ಹೆಚ್ಚಾಗಲಿದೆ. 10 ಸಾವಿರ ರೂ. ಬೆಲೆಯ 20 ಲೀಟರ್ ಮೈಕ್ರೋವೇವ್ ಓವೆನ್ ಬೆಲೆ ಮೇಲೆ 500 ರೂ. ಹೆಚ್ಚಾಗುವ ಸಾಧ್ಯತೆಯಿದೆ.

ಪೆಟ್ರೋಲ್,ಡೀಸೆಲ್

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮೂಲ ಅಬಕಾರಿ ಸುಂಕವನ್ನು ಲೀಟರ್‌ಗೆ 2 ರು. ಹಾಗೂ ಹೆಚ್ಚುವರಿ ಅಬಕಾರಿ ಸುಂಕವನ್ನು 6 ರುಪಾಯಿ ಇಳಿಸುವುದಾಗಿ ಜೇಟ್ಲಿ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದರು.ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಇಳಿಕೆ ಮಾಡಿದ್ದರೂ. ರಸ್ತೆ ಮತ್ತು ಮೂಲ ಸೌಕರ್ಯ ಹೆಸರಲ್ಲಿ 8 ರೂ. ಹೊಸ ಸೆಸ್ ಹಾಕುವ ಮೂಲಕ ದರವನ್ನು ಯಥಾಸ್ಥಿತಿಯಲ್ಲಿ ಇಡಲಾಗಿದೆ.

ಶಿಕ್ಷಣ ಕ್ಷೇತ್ರಕ್ಕೆ ಏನು ಕೊಡುಗೆ….

ಶಿಕ್ಷಣ ಕೇತ್ರದಲ್ಲಿ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಮೂಲಸೌಕರ್ಯ ಹಾಗೂ ತಂತ್ರಜ್ಞಾನ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.

  • ಹೊಸ 24 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆ
  • 2012ರ ವೇಳೆಗೆ ಶಿಕ್ಷಣದಲ್ಲಿ ಮೂಲಸೌಕರ್ಯ ಹಾಗೂ ವ್ಯವಸ್ಥೆ ಪುನಶ್ಚೇತನ (RISE) ಮರು ಜಾರಿ
  • ಕಪ್ಪು ಹಲಗೆಗಳ ಬದಲು ಡಿಜಿಟಲ್‌ ಬೋರ್ಡ್‌ಗಳ ಬಳಕೆ
  • ಶಿಕ್ಷಕರಿಗೆ ಕೇಂದ್ರ ಸರ್ಕಾರದಿಂದ ತರಬೇತಿ
  • ಬುಡಕಟ್ಟು ಹಾಗೂ ಆದಿವಾಸಿ ಮಕ್ಕಳಿಗಾಗಿ ಶಾಲೆಗಳ ಸಂಖ್ಯೆಯಲ್ಲಿ ಹೆಚ್ಚಳ
  • ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ನವೋದಯ ಮಾದರಿಯಲ್ಲಿ ಏಕಲವ್ಯ ಶಾಲೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಕನ್ನಡಿಗರಾಗಿ ನಮ್ಮ ಮಾತೃ ಭಾಷೆ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ?ಈ ಲೇಖನಿ ಓದಿ…

    ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • ಸುದ್ದಿ

    ಬಿಎಂಟಿಸಿ ಸಾರಿಗೆ ಇಲಾಖೆ ಇಂದ ಮಹಿಳಾ ಪ್ರಯಾಣಿಕರಿಗೊಂದು’ಸಂತಸದ ಸುದ್ದಿ’…!

    ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • ವ್ಯಕ್ತಿ ವಿಶೇಷಣ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?