ಸುದ್ದಿ

ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

240

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ  ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ  ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

2018ನೇ ಸಾಲಿನ  ಬಜೆಟ್’ನ ಪ್ರಮುಖ ಅಂಶಗಳು:-

  • ಕೃಷಿ ಉತ್ಪನ್ನಗಳಿಗೆ ಮೀಸಲು ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚಳ ಮಾಡುವುದಾಗಿ ಘೋಷಣೆ.
  • ಕೃಷಿ ಚಟುವಟಿಕೆಗಳಿಗೆ ಸಾಲ ನೀಡುವ ಸಲುವಾಗಿ, ಅನುದಾನದ ಮೊತ್ತವನ್ನು 11 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಳ.
  • ಕೃಷಿ ಮಾರುಕಟ್ಟೆ ಅಭಿವೃದ್ದಿಗಾಗಿ 22 ಸಾವಿರ ಕೋಟಿ ಅನುದಾನ.

  • ಈಗಿರುವ ಉಜ್ವಲ ಯೋಜನೆ ಅಡಿಯಲ್ಲಿ, ದೇಶದ ಸುಮಾರು ಎಂಟು ಕೋಟಿ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ.
  • ನಾಲ್ಕು ಕೋಟಿ ಬಡ ಕುಟುಂಬಗಳಿಗೆ ಸೌಭಾಗ್ಯ ಯೋಜನೆಯಡಿ ವಿದ್ಯುತ್‌ ಸಂಪರ್ಕ.
  • ಪರಿಶಿಷ್ಟ ಜಾತಿ ಕಲ್ಯಾಣಕ್ಕೆ 56,619 ಕೋಟಿ ರೂ.
  • ಪರಿಶಿಷ್ಟ ವರ್ಗದ ಕಲ್ಯಾಣಕ್ಕೆ 39,135 ಕೋಟಿ ರೂ.
  • ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ  3 ಲಕ್ಷ ಕೋಟಿ ಸಾಲ.
  • 70 ಎಪಿಎಂಸಿಗಳನ್ನು ಇ-ನ್ಯಾಮ್‌ ಮೂಲಕ ಸಂಪರ್ಕ
  • ಕೃಷಿ ಬೆಂಬಲ ಬೆಲೆ ನೆರೆ ರೈತರಿಗೆ ಸಿಗಲು ಕ್ರಮ.
  • ಬುಡಕಟ್ಟು ಜನರ ಶಿಕ್ಷಣಕ್ಕಾಗಿ ಏಕಲವ್ಯ ಶಾಲೆಗಳ ಆರಂಭ.
  • ರೈಲುಗಳಲ್ಲಿ  ವೈ-ಫೈ ಮತ್ತು ಸಿಸಿಟಿವಿ ವ್ಯವಸ್ತೆ.
  • ಹೊಸ ಉದ್ಯೋಗಿಗಳ ಇಪಿಎಫ್‌ ಖಾತೆಗಳಿಗೆ ಶೇ 12ರ ವೇತನ ಸರಕಾರದಿಂದ.
  • 9,000 ಕಿ.ಮೀ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ
  • ಶಾಲೆಗಳ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳಿಗೆ ಒಂದು ಲಕ್ಷ ಕೋಟಿ.
  • ಬಡ್ಡಿ ಆದಾಯದ ಮೇಲಿನ ತೆರಿಗೆ ಮಿತಿ ಹೆಚ್ಚಳ.
  • ಸ್ಮಾರ್ಟ್ ಸಿಟಿಗಳಿಗೆ 2.04 ಲಕ್ಷ ಕೋಟಿ ರೂ. ಅನುದಾನ
  • ರಾಷ್ಟ್ರಪತಿಗಳ ವೇತನವನ್ನು ಪ್ರತಿ ತಿಂಗಳಿಗೆ 5 ಲಕ್ಷ ರೂಪಾಯಿ, ಉಪರಾಷ್ಟ್ರಪತಿಗಳ ವೇತನವನ್ನು 4.5 ಲಕ್ಷ ರೂಪಾಯಿ ಮತ್ತು ರಾಜ್ಯಪಾಲರುಗಳ ವೇತನವನ್ನು 3.5 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ.
  • ಬಡವರಿಗೆ ಕಡಿಮೆ ವೆಚ್ಚದಲ್ಲಿ ಮನೆ.
  • 42 ಮೆಗಾ ಫುಡ್ ಪಾರ್ಕ್ಗಳ ಗೋಷಣೆ.

ಏರಿಕೆಯಾಗಲಿರುವ ವಸ್ತುಗಳು :-

ಮೊಬೈಲ್ ಫೋನ್, ಟಿ.ವಿ ಸೆಟ್, ಡಿಜಿಟಲ್ ಕ್ಯಾಮೆರಾಗಳು, ಮೈಕ್ರೋವೇವ್ ಓವೆನ್, ಎಲ್‍ಇಡಿ ಬಲ್ಬ್ ಗಳು ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆಯಾಗಲಿದೆ.

ಈ ಸಲದ ಬಜೆಟ್’ನಲ್ಲಿ ಮೊಬೈಲ್ ಫೋನ್ ಮೇಲಿನ ಅಬಕಾರಿ ಸುಂಕವನ್ನು 15% ನಿಂದ 20% ಗೆ ಏರಿಸಲಾಗಿದೆ. ಅಲ್ಲಿಗೆ ಆ್ಯಪಲ್ ಐಫೋನ್‍ಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದ್ದು, ಭಾರತದಲ್ಲೇ ಉತ್ಪಾದಿಸುವ ಮೊಬೈಲ್ ಫೋನ್‍ಗಳ ಬೆಲೆಗೆ ಅಂತರ ಹೆಚ್ಚಲಿದೆ.

ಏರಿಕೆಯಾಗಲಿದೆ ಐಫೋನ್

ತಜ್ಞರ ಪ್ರಕಾರ ಐಫೋನ್ ದರದ ಮೇಲೆ 2ರಿಂದ 3 ಸಾವಿರ ರೂ. ಹೆಚ್ಚಾಗಲಿದೆ. ಉದಾಹರಣೆಗೆ ಐಫೋನ್ ಎಕ್ಸ್ ಮಾಡಲ್‍ನ ಫೋನ್ ಈಗ 89 ಸಾವಿರ ರೂ. ಇದ್ದು, ಕಂಪೆನಿ ತೆರಿಗೆ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಿದ್ರೆ ಫೋನ್ ಬೆಲೆ 92 ಸಾವಿರ ರೂ. ಗೆ ಏರಿಕೆಯಾಗುವ ಸಾಧ್ಯತೆಯಿದೆ.

ಟಿ.ವಿಗಳ ಬೆಲೆ ಏರಿಕೆ :-

ಟಿ.ವಿ  ಬೆಲೆಗಳೂ ಕೂಡ ಏರಿಕೆಯಾಗಲಿದ್ದು, ಸ್ಕ್ರೀನ್ ಗಾತ್ರಕ್ಕೆ ಅನುಗುಣವಾಗಿ ಈಗಿರುವ ಬೆಲೆಗಿಂತ ಹೆಚ್ಚಾಗಲಿದೆ. 10 ಸಾವಿರ ರೂ. ಬೆಲೆಯ 20 ಲೀಟರ್ ಮೈಕ್ರೋವೇವ್ ಓವೆನ್ ಬೆಲೆ ಮೇಲೆ 500 ರೂ. ಹೆಚ್ಚಾಗುವ ಸಾಧ್ಯತೆಯಿದೆ.

ಪೆಟ್ರೋಲ್,ಡೀಸೆಲ್

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮೂಲ ಅಬಕಾರಿ ಸುಂಕವನ್ನು ಲೀಟರ್‌ಗೆ 2 ರು. ಹಾಗೂ ಹೆಚ್ಚುವರಿ ಅಬಕಾರಿ ಸುಂಕವನ್ನು 6 ರುಪಾಯಿ ಇಳಿಸುವುದಾಗಿ ಜೇಟ್ಲಿ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದರು.ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಇಳಿಕೆ ಮಾಡಿದ್ದರೂ. ರಸ್ತೆ ಮತ್ತು ಮೂಲ ಸೌಕರ್ಯ ಹೆಸರಲ್ಲಿ 8 ರೂ. ಹೊಸ ಸೆಸ್ ಹಾಕುವ ಮೂಲಕ ದರವನ್ನು ಯಥಾಸ್ಥಿತಿಯಲ್ಲಿ ಇಡಲಾಗಿದೆ.

ಶಿಕ್ಷಣ ಕ್ಷೇತ್ರಕ್ಕೆ ಏನು ಕೊಡುಗೆ….

ಶಿಕ್ಷಣ ಕೇತ್ರದಲ್ಲಿ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಮೂಲಸೌಕರ್ಯ ಹಾಗೂ ತಂತ್ರಜ್ಞಾನ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.

  • ಹೊಸ 24 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆ
  • 2012ರ ವೇಳೆಗೆ ಶಿಕ್ಷಣದಲ್ಲಿ ಮೂಲಸೌಕರ್ಯ ಹಾಗೂ ವ್ಯವಸ್ಥೆ ಪುನಶ್ಚೇತನ (RISE) ಮರು ಜಾರಿ
  • ಕಪ್ಪು ಹಲಗೆಗಳ ಬದಲು ಡಿಜಿಟಲ್‌ ಬೋರ್ಡ್‌ಗಳ ಬಳಕೆ
  • ಶಿಕ್ಷಕರಿಗೆ ಕೇಂದ್ರ ಸರ್ಕಾರದಿಂದ ತರಬೇತಿ
  • ಬುಡಕಟ್ಟು ಹಾಗೂ ಆದಿವಾಸಿ ಮಕ್ಕಳಿಗಾಗಿ ಶಾಲೆಗಳ ಸಂಖ್ಯೆಯಲ್ಲಿ ಹೆಚ್ಚಳ
  • ಬುಡಕಟ್ಟು ವಿದ್ಯಾರ್ಥಿಗಳಿಗಾಗಿ ನವೋದಯ ಮಾದರಿಯಲ್ಲಿ ಏಕಲವ್ಯ ಶಾಲೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

    ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
    ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…

  • ಸುದ್ದಿ

    ಎದೆಯುರಿ ಸಮಸ್ಯೆಯಿಂದ ಬಳಲಿತ್ತಿದ್ದೀರಾ ….ಅಗಾದರೆ ಇದನ್ನು ಒಮ್ಮೆ ಓದಿ ……!

    ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್‌ಇಎಸ್)…

  • ಸುದ್ದಿ

    ರಜನಿಕಾಂತ್‌ ಬಳಿ ಇರುವ ಆಸ್ಥಿಯ ಮೌಲ್ಯವೆಷ್ಟು ಗೊತ್ತಾ?

    ಟಾಲಿವುಡ್‌ ಸ್ಟಾರ್‌ ರಜಿನಿಕಾಂತ್‌ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್‌ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • ಗ್ಯಾಜೆಟ್

    ನಿಮ್ಮ ಸ್ಮಾರ್ಟ್‌ಫೋನ್‌ ಹ್ಯಾಂಗ್‌ ಆಗದಿರಲು ಇಲ್ಲಿದೆ ಉಪಾಯ ..!ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್‌ ಹಳೆಯದಾದಷ್ಟು ಅದು ಹ್ಯಾಂಗ್‌ ಹಾಗೂ ಸ್ಲೋ ಆಗುವ ಚಾನ್ಸ್‌ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್‌ ಆಗಿ ರೆಸ್ಪಾನ್ಸ್‌ ಮಾಡುತ್ತದೆ. ನಂತರ ಹ್ಯಾಂಗ್‌ ಆಗುತ್ತದೆ. ಹೀಗೆ ಆದರೆ ಫೋನ್‌ನ್ನು ಮತ್ತೆ ಮತ್ತೆ ರಿಸ್ಟಾರ್ಟ್‌ ಮಾಡಬೇಕಾಗುತ್ತದೆ.