ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಗೃಹ ಉಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

1.ಏರ್ ಫ್ರೆಶ್ನೆರ್:-
ಈ ಏರ್ ಫ್ರೆಶ್ನೆರ್ ಸ್ಪ್ರೇ, ಜೆಲ್ ಹೀಗೆ ಬೇರೆ ಬೇರೆ ರೂಪದಲ್ಲಿ ಸಿಗುತ್ತೆ. ಮನೆ ಒಳಗೆ, ಕಾರ್ ಒಳಗೆ ಘಮ ಘಮ ಅನ್ಲಿ ಅಂತ ಸಾಮಾನ್ಯವಾಗಿ ಇದನ್ನ ಬಳಸ್ತಾರೆ. ಇದ್ರಲ್ಲಿ ನಮ್ಮ ದೇಹಕ್ಕೆ ಹಾನಿ ಮಾಡೋ ವಿಷಾದ ಅಂಶ ಇರುತ್ತೆ.

ಅದ್ರಲ್ಲಿರೋ ಪಾಥಲಾಟ್ಸ್ ಅನ್ನೋ ಪದಾರ್ಥದಿಂದ ನಮ್ಮ ಸಂತಾನೋತ್ಪತ್ತಿ ಶಕ್ತಿಯನ್ನ ಹಾಳುಮಾಡೊದಲ್ದೆ ಅಸ್ತಮಾದಂತಹ ಕಾಯಿಲೆ ಗಂಭೀರ ರೂಪ ಪಡೆಯೋಹಾಗೆ ಮಾಡುತ್ತೆ.
2.ಸುವಾಸನೆಭರಿತ ಮೇಣದ ಬತ್ತಿ:-
ಈ ಸುವಾಸನೆಭರಿತ ಮೇಣದ ಬತ್ತಿ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ, ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ, ಹಬ್ಬದಲ್ಲಿ ಹೀಗೆ ಹಲವಾರು ಸಲ ಇದನ್ನ ಉಪಯೋಗಿಸ್ತೀವಿ. ಕೆಲವೊಬ್ರು ಬೇರೆ ಫ್ರೆಶ್ನೆರ್ಗೆ ನೋಡಿದ್ರೆ ಇದು ಸ್ವಲ್ಪ ಕಡಿಮೆ ಬೆಲೆಗೆ ಸಿಗೋದ್ರಿಂದ ಇದನ್ನ ಬಚ್ಚಲಮನೇಲೇ ಇತ್ತು ಅಲ್ಲಿನ ವಾಸನೆ ಹೋಗಿಸೋದಕ್ಕೆ ಉಪಯೋಗಿಸ್ತಾರೆ.

ಇದ್ರಲ್ಲೂ ಕೂಡ ವಿಷಪದಾರ್ಥ ಇರಬಹುದು, ಯಾಕೆ ಅಂದ್ರೆ ಬಹಳಷ್ಟು ಜನ ಇದರ ಬತ್ತಿಯನ್ನ ಸೀಸದಿಂದ ಮಾಡಿರ್ತಾರೆ., ಒಂದುಸಲ ನೋಡ್ಕೊಳೋದು ಒಳ್ಳೇದು. ಹೇಗೆ ಪರೀಕ್ಷೆ ಮಾಡೋದು ಅಂದ್ರ ? ಒಂದು ಬಿಳಿ ಪೇಪರ್ ತೊಗೊಂಡು ಆ ಕ್ಯಾಂಡೆಲ್ನ ಬತ್ತಿ ತುದಿಯಿಂದ ಒಂದು ಲೈನ್ ಬರೆದಹಾಗೆ ಮಾಡಿ, ನಿಮಗೆ ಯಾವುದೇ ಲೈನ್ ಕಾಣಿಸಲಿಲ್ಲ ಅಂದ್ರೆ ಸೀಸ ಇಲ್ಲ ಅಂತ. ಅಕಸ್ಮಾತ್ ಲೈನ್ ಕಾಣಿಸಿದ್ರೇ ಇದ್ರಲ್ಲಿ ವಿಷಪದಾರ್ಥಗಳು ಇರೋದು ಗ್ಯಾರಂಟಿ.
3.ಬಚ್ಚಲುಮನೆಯ ಕರ್ಟನ್:-
ಇತ್ತೀಚಿನ ದಿನಗಳಲ್ಲಿ ಬಚ್ಚುಲು ಮನೇಲಿ ಶವರ್ ಇದ್ದೆ ಇರುತ್ತೆ. ತುಂಬಾ ಮನೆಗಳಲ್ಲಿ ಈ ಶವರ್ನಲ್ಲಿ ಸ್ನಾನ ಮಾಡೋವಾಗ ನೀರು ಹಾರದೆ ಇರೋ ಹಾಗೆ ಕರ್ಟನ್ ಹಾಕ್ತಾರೆ. ಈ ಕರ್ಟನ್ ನಲ್ಲಿ ಪ್ಲಾಸ್ಟಿಕ್ ಹಾಗೂ PVC ಇರುತ್ತೆ. ಈ ಕಾರ್ಸಿನೋಜೆನಿಕ್ ಅನ್ನೋ ವಿಷಕಾರಿ ಪದಾರ್ಥನ ಹೊರ ಹಾಕುತ್ತೆ.

ಇದು ಪರಿಸರಕ್ಕೂ ತುಂಬಾ ಹಾನಿಮಾಡುತ್ತೆ. ಬಿಸಿ ನೀರಿನ ಶಾಖಕ್ಕೆ ಈ ವಿಷಾದ ಪದಾರ್ಥ ಹೊರಬರುತ್ತಲ್ಲ ಅದು ನಮ್ಮ ಉಸಿರಾಟ ಹಾಗೆ ಸಂತಾನೋತ್ಪತ್ತಿ ಕ್ರಿಯೆಗೆ ಹಾನಿ ಮಾಡುತ್ತೆ. ಇದರ ಬದಲು ಕಾಟನ್ ಕರ್ಟನ್ ಬಳಸೋದು ಒಳ್ಳೇದು.
4.ಕಾರ್ಪೆಟ್ ಕ್ಲೀನರ್:-
ಕಾರ್ಪೆಟ್ ಗೆ ಅಂಟಿಕೊಂಡಿರು ಕಲೆ ಹೋಗ್ಬೇಕು ಅಂತ ಈ ವಸ್ತು ತಾಯಾರಿಸೋದಕ್ಕೆ ಅತ್ಯಂತ ಹೆಚ್ಚು ಹಾನಿಕಾರಿಕ ಕೆಮಿಕಲ್ ಉಪಯೋಗಿಸಿರ್ತಾರೆ. ಪರ್ಕ್ಲೋರೆಥೈಲಿನ್ ಮತ್ತು ನಾಫ್ಥಲೀನ್ ಅನ್ನೋ ಕೆಮಿಕಲ್ ಇದ್ರಲ್ಲಿ ಇರೋದ್ರಿಂದ ಇದನ್ನ ಉಸಿರಾಡಿದಾಗ ಶ್ವಾಸಕೋಶದ ಕ್ಯಾನ್ಸರ್ ಬಾರೋ ಸಾಧ್ಯತೆ ಹೆಚ್ಚು. ಈ ನುಸಿ ಗುಳಿಗೇಲೂ ಈ ಪದಾರ್ಥ ಇರುತ್ತೆ.

ಈ ಕಾರ್ಪೆಟ್ ಕ್ಲೀನ್ ಮಾಡಕ್ಕೆ ಅಡುಗೆ ಸೋಡಾ ಹಾಗೂ ವಿನೆಗರ್ ಮಿಶ್ರಣ ಉಪಯೋಗಿಸಿ ನೋಡಿ. ಇದ್ರಿಂದ ಯಾವುದೇ ತೊಂದರೆ ಇರಲ್ಲ.
5.ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳು:-
ಡ್ರೈ ಕ್ಲೀನ್ ಮಾಡಕ್ಕೆ ಉಪಯೋಗಿಸೋ ವಸ್ತುಗಳಲ್ಲಿ ಎಟ್ರಾಕ್ಲೋರೆಥೈಲಿನ್ ಅಥವಾ ಪರ್ಚ್ಲೋರೆಥೈಲಿನ್ ಅನ್ನೋ ಕೆಮಿಕಲ್ ಇರುತ್ತೆ. ಇದನ್ನ ಬಳಸಿ ಕ್ಲೀನ್ ಮಾಡಿರೋ ಬಟ್ಟೆ ಹಾಕ್ಕೊಂಡ್ರೆ ಹಾನಿಕಾರಕ ಕಾರ್ಸಿನೋಜೆನ್ಸ್ ನಮ್ಮ ದೇಹಕ್ಕೆ ಸುಲಭವಾಗಿ ಹೋಗುತ್ತೆ.

ಇದ್ರಿಂದ ಹಲವಾರು ರೀತಿಯ ಕ್ಯಾನ್ಸರ್ ಆಗೋ ಸಾಧ್ಯತೆ ಇರೋದ್ರಿಂದ ಡ್ರೈ ಕ್ಲೀನ್ ಮಾಡಕ್ಕೆ ಕೊಡೋದಕ್ಕೆ ಮುಂಚೆ ಈ ವಿಷಕಾರಿ ಅಂಶ ಇರೋ ವಸ್ತು ಬಳಸಬೇಡಿ ಅಂತ ಹೇಳೋದು ಒಳ್ಳೇದು.
6.ಕೀಟನಾಶಕಗಳು.
ಎಲ್ಲರೂ ಒಂದಲ್ಲ ಒಂದುಸಲ ರೈತರು ಕ್ರಿಮಿ, ಕೀಟನಾಶಕ ಸಿಂಪಡಿಸೋವಾಗ ತೊಂದರೆ ಆಗಿ ಸತ್ರು, ಯಾವುದೊ ಸಮಸ್ಯೆಗೆ ಸಿಲುಕಿ ಇದನ್ನ ಕುಡಿದು ಆತ್ಮ ಹತ್ಯೆ ಮಾಡ್ಕೊಂಡ್ರು ಅಂತ ಓದಿರ್ತೀವಿ, ಕೇಳಿರ್ತೀವಿ. ಇದು ಬರಿ ಕ್ರಿಮಿ, ಕೀಟಗಳಿಗೆ ಅಷ್ಟೆ ಅಲ್ಲ ನಮಗೂ ಹಾಗೆ ನಮ್ಮ ಮುದ್ದಿನ ಸಾಕು ಪ್ರಾಣಿಗಳಿಗೂ ಹಾನಿ ಮಾಡುತ್ವೆ.

ಇದ್ರಲ್ಲಿ ಆರ್ಗನೋಫಾಸ್ಫೇಟ್ ಕೀಟನಾಶಕಗಳು, ಪೆರೆಥೆರಿನ್ ಮತ್ತು ಕಾರ್ಬಮೆಟ್ಗಳು ಇರುತ್ತೆ , ಇವುಗಳು ತುಂಬಾನೇ ಅಪಾಯಕಾರಿ ಮತ್ತು ಮನುಷ್ಯರಿಗೆ ಕ್ಯಾನ್ಸರ್ ತರೋ ಸಾಧ್ಯತೆ ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…