ವಿಸ್ಮಯ ಜಗತ್ತು

ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

4168

ಸಾಮಾಜಿಕ ಜಾಲತಾಣಗಳಲ್ಲಿ ನಾವು ಹಂಚಿಕೊಳ್ಳುವ ಕೆಲವೊಂದು ಫೋಟೋಗಳು ಅಥವಾ ವಿಡಿಯೋಗಳು ತುಂಬಾ ಸಂಚಲನವನ್ನೇ ಸೃಷ್ಟಿ ಮಾಡಿಬಿಡುತ್ತವೆ.

ಹೌದು, ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

ಆ್ಯಂಡಿ ಎಂಬ ಟ್ವಿಟರ್ ಖಾತೆದಾರ ಈ ಫೋಟೋವನ್ನು ಆಪ್ಲೋಡ್ ಮಾಡಿದ್ದು, ಐ ಲವ್ ಮೈ ಗರ್ಲ್ ಫ್ರೆಂಡ್ ಈವನ್ ಶೀ ಇಸ್ ಜೆಮಿನಿ  ಎಂದು ಟ್ವೀಟ್ ಮಾಡಿದ್ದ.  ಆದರೆ ಮೇಲ್ನೋಟಕ್ಕೆ ಈ ಫೋಟೋ ಜೋಡಿಯ ಪ್ರೀತಿಯನ್ನು ತೋರಿಸುತ್ತದೆಯಾದರೂ, ಇದೇ ಫೋಟವನ್ನು ಸ್ವಲ್ಪ ಗಮನವಿಟ್ಟು ನೋಡಿದರೆ ಫೋಟೋ ಹಿಂದಿನ ಭಯಾನಕತೆ ಬಯಲಾಗುತ್ತದೆ.

ಈ ಫೋಟೋ ನೋಡಿದ ಲಕ್ಷಾಂತರ ಟ್ವೀಟಿಗರು ಇದಕ್ಕೆ ರೀ-ಟ್ವೀಟ್ ಮಾಡಿದ್ದು, ಇದು ಹೇಗೆ ಸಾಧ್ಯ…ಇನ್ನು ಕೆಲವರು ‘ಈಕೆ ಅತ್ಯಂತ ಭಯಾನಕವಾಗಿದ್ದಾಳೆ’ ಎಂದಿದ್ದಾರೆ. ಮತ್ತೆ ಕೆಲವರು ಆಕೆ ಮನುಷ್ಯಳೋ ಅಥವಾ ಭೂತವೋ ಎಂಬ  ಉದ್ಗಾರಗಳೊಂದಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಮತ್ತೆ ಕೆಲವರು ಇದನ್ನು ವ್ಯಂಗ್ಯ ಮಾಡಿದ್ದು, ಇದು ಫೋಟೋಶಾಪ್ ಪವಾಡ ಎಂದು ಟೀಕಿಸಿದ್ದಾರೆ.

ಇಷ್ಟಕ್ಕೂ ಈ ಫೋಟೋ ಹಿಂದಿರುವ ಅಸಲಿಯತ್ತೇನು?

ಇಷ್ಟಕ್ಕೆಲ್ಲಾ ಕಾರಣವಾಗಿದ್ದು, ನೋಡುಗರು ಆ ಫೋಟೋದಲ್ಲಿ ಕಂಡ ನಂಬಲಸಾಧ್ಯವಾದ ಸತ್ಯ!. ಈ ಸೆಲ್ಫೀಯನ್ನು ಮೇಲ್ನೋಟಕ್ಕೆ ನೋಡಿದರೆ ಇಬ್ಬರ ನಡುವಿನ ಪ್ರೀತಿ ಎದ್ದು ಕಾಣುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗಲೇ ಈ  ಸುಂದರ ಜೋಡಿಯ ಹಿಂದಿನ ಭಯಾನಕ ರೂಪ ಕಾಣುತ್ತದೆ. ಯಾಕೆಂದರೆ ಫೋಟೋಗೆ ಫೋಸ್ ಕೊಡುವ ಯುವತಿ ಏಕಕಾಲದಲ್ಲಿ ಎರಡೆರಡು ದಿಕ್ಕಿಗೆ ಮುಖ ತೋರಿಸಿದ್ದಾಳೆ. ಸೆಲ್ಫಿ ವೇಳೆ ಯುವತಿ ಯಾವುದಾದರೂ ಒಂದೇ ದಿಕ್ಕಿಗೆ  ನೋಡಬೇಕಿತ್ತು. ಆದರೆ ಇವರ ಹಿಂದಿದ್ದ ಕನ್ನಡಿಯಲ್ಲಿ ಯುವತಿ ಅದೇ ಕ್ಷಣದಲ್ಲಿ ಹಿಂಬದಿಗೆ ನೋಡುವುದೂ ಕಾಣುತ್ತದೆ. ಓರ್ವ ವ್ಯಕ್ತಿಗೆ ಎರಡು ಮುಖಗಳಿರಲು ಸಾಧ್ಯವಿಲ್ಲ. ಇನ್ನು ಫೋಟೋ ನೋಡಿದರೆ ಆಕೆ ಸೆಲ್ಫೀಗೆ ಫೋಸ್  ನೀಡಿರುವುದು ಸ್ಪಷ್ಟವಾಗುತ್ತದೆ. ಆದರೆ ಆದೇ ಸಂದರ್ಭದಲ್ಲಿ ಆ ಕನ್ನಡಿಯಲ್ಲಿ ಕಾಣುತ್ತಿರುವುದೇನು ಎಂಬ ಪ್ರಶ್ನೆಯೂ ಮೂಡುತ್ತದೆ.

ಈ ಫೋಟೋ ನಿಜಕ್ಕೂ ವೈರಲ್ ಆಗಿದೆಯಾದರೂ ಇದನ್ನು ಅಪ್ಲೋಡ್ ಮಾಡಿರುವ ಆ್ಯಂಡಿ ಎಂಬ ಟ್ವಿಟರ್ ಖಾತೆದಾರನದ್ದೇ ಅಲ್ಲ… ಈ ಫೋಟೋ ಬ್ರೆಜಿಲ್ ಮೂಲದ ಜೆಫರ್ಸನ್ ನೆಗ್ರಾವ್ ಎಂಬಾತನದ್ದು ಎಂಬುದು ಟ್ವಿಟರ್  ಮೂಲಕ ಬಯಲಾಗಿದೆ. ಈತನ ಗರ್ಲ್ ಫ್ರೆಂಡ್ ಆಡ್ರಿಯಾನೆ ಅಲ್ಫೈಯಾಳೊಂದಿಗೆ ಸೆಲ್ಫಿತೆಗೆದು ಅದನ್ನು ಟ್ವೀಟ್ ಮಾಡಿದ್ದ. ಇದೇ ಫೋಟೋವನ್ನು ಆ್ಯಂಡಿ ಎಂಬ ಖಾತೆದಾರ ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದ ಎಂಬ ವಿಚಾರ  ಬೆಳಕಿಗೆ ಬಂದಿದೆ. ಇನ್ನು ಈ ಫೋಟೋದ ಮೂಲಕ ಆ್ಯಂಡಿ ಖಾತೆದಾರ ಫೇಮಸ್ ಆದನಾದರೂ ಈ ಟ್ವೀಟ್ ನಿಂದಾಗಿ ವ್ಯಾಪಕ ಟೀಕೆಗಳನ್ನು ಕೂಡ ಏದುರಿಸಿದ್ದಾನೆ.                                                                                                                                                                        ಮೂಲ:

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…

  • ಸುದ್ದಿ

    ಸ್ನಾಕ್ಸ್ ಗೆ ಮನೆಯಲ್ಲೇ ಸ್ಪೈಸಿ ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ,.!

    ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…

  • ವಿಚಿತ್ರ ಆದರೂ ಸತ್ಯ

    ಪ್ರಸಿದ್ದ ರಾಜಕಾರಣಿಗಳಂತೆಯೇ ಕಾಣುವ ಈ ವ್ಯಕ್ತಿಗಳ ಪೋಟೋಗಳನ್ನು ನೋಡಿದ್ರೆ ನೀವ್ ಶಾಕ್ ಆಗ್ತೀರಾ..!

    ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.

  • ಸುದ್ದಿ

    ದಂಡ ಪಾವತಿಸಿದವರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಪ್ರೋತ್ಸಾಹಿಸಿದ ಪೊಲೀಸ್…!

    ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…

  • ಉಪಯುಕ್ತ ಮಾಹಿತಿ

    ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಇದು..?ಅದಕ್ಕೆ ಇಲ್ಲಿದೆ ಪರಿಹಾರ…

    ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.

  • ಆರೋಗ್ಯ

    ಹೆಚ್ಚಾಗಿ ಲಟಿಕೆ ತೆಗೆಯುವ ಅಭ್ಯಾಸ ಇದೆಯಾ, ಹಾಗಾದರೆ ಅಪಾಯ ತಪ್ಪಿದಲ್ಲ.

    ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…