ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

ಮುಡಿಯುವುದಕ್ಕಿಂತ ಪೂಜೆ ಮಾಡುತ್ತಾರೆ!
ರಾತ್ರಿಯ ರಾಣಿ ಈ ಹೂವನ್ನು ಮುಡಿಯುವುದಕ್ಕಿಂತ ಧಾರ್ಮಿಕ ಪೂಜನಿಯವಾಗಿ ಉಪಯೋಗಿಸುತ್ತಾರೆ ಈ ಹೂ ಅರಳುವುದನ್ನು ನೋಡುವವರೆ ಅದೃಷ್ಟವಂತರು. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ.

ಈ ಹೂವಿನ ಹೆಸರಿನ, ಹಿಂದೆ ಇದೆ ಒಂದು ಪುರಾಣ ಕಥೆ…
ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.
ಈ ಹೂವು ಹೇಗೆ ಅರಳುತ್ತದೆ ಗೊತ್ತಾ?
ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ.
ಬ್ರಹ್ಮ ಕಮಲ ಹೂವು ಬಿಡುವುದು ಜೂನ್- ಜುಲೈ ತಿಂಗಳಿನಲ್ಲಿ. ಕೇವಲ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ.

ಬೆಳೆಯುವುದೆಲ್ಲಿ…
ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ.
ಔಷಧಗಳಲ್ಲಿ ಬಳಕೆ :-
ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ.

ಈ ಹೂವಿಗೆ ರಾತ್ರಿ ರಾಣಿ ಎಂದು ಕರೆಯುತ್ತಾರೆ…
ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವುಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು. ರಾತ್ರಿ ಅರಳುವುದರಿಂದ ಇದನ್ನು ರಾತ್ರಿ ರಾಣಿ ಎಂತಲೂ ಕರೆಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.