ವಿಸ್ಮಯ ಜಗತ್ತು

ಈ ಹೂ ಇಡೀ ಭೂಮಂಡಲದಲ್ಲಿಯೇ, ಅತೀ ಹೆಚ್ಚು ಬೆಲೆಬಾಳುತ್ತದೆ..!ನಿಮಗೆ ಗೊತ್ತಿರಲಿಕ್ಕಿಲ್ಲ?ತಿಳಿಯಲು ಈ ಲೇಖನಿ ಓದಿ…

2668

ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು  11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

ಮುಡಿಯುವುದಕ್ಕಿಂತ ಪೂಜೆ ಮಾಡುತ್ತಾರೆ!

ರಾತ್ರಿಯ ರಾಣಿ ಈ ಹೂವನ್ನು ಮುಡಿಯುವುದಕ್ಕಿಂತ ಧಾರ್ಮಿಕ ಪೂಜನಿಯವಾಗಿ ಉಪಯೋಗಿಸುತ್ತಾರೆ ಈ ಹೂ ಅರಳುವುದನ್ನು ನೋಡುವವರೆ ಅದೃಷ್ಟವಂತರು. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ.

ಈ ಹೂವಿನ ಹೆಸರಿನ, ಹಿಂದೆ ಇದೆ ಒಂದು ಪುರಾಣ ಕಥೆ…

ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್‌ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.

ಈ ಹೂವು ಹೇಗೆ ಅರಳುತ್ತದೆ ಗೊತ್ತಾ?

ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ.
ಬ್ರಹ್ಮ ಕಮಲ ಹೂವು ಬಿಡುವುದು ಜೂನ್- ಜುಲೈ ತಿಂಗಳಿನಲ್ಲಿ. ಕೇವಲ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ.

ಬೆಳೆಯುವುದೆಲ್ಲಿ…

ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ.

ಔಷಧಗಳಲ್ಲಿ ಬಳಕೆ :-

ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ.

ಈ ಹೂವಿಗೆ ರಾತ್ರಿ ರಾಣಿ ಎಂದು ಕರೆಯುತ್ತಾರೆ…

ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವುಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು. ರಾತ್ರಿ ಅರಳುವುದರಿಂದ ಇದನ್ನು ರಾತ್ರಿ ರಾಣಿ ಎಂತಲೂ ಕರೆಯುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಆ ದಿನ ಈ ಯಾಗ ಪೂರ್ಣವಾಗಿ ನಡೆದಿದ್ದರೆ,ಈ ದಿನ ನಾವು ನೋಡಲಿಕ್ಕೆ ಹಾವಿನ ಸಂತತಿಯೇ ಇರುತ್ತಿರಲಿಲ್ಲ!ಯಾಕೆ ಗೊತ್ತಾ..?ಈ ಲೇಖನಿ ಓದಿ…

    ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು

  • ರೆಸಿಪಿ

    ಆನೇಕ ರೀತಿಯ ಬಗೆ ಬಗೆಯ ಇಡ್ಲಿಗಳು ಮಾಡುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದಕ್ಷಿಣ ಭಾರತದ ಪ್ರಮುಖ ಬ್ರೇಕ್‌ಫಾಸ್ಟ್‌ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್‌ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್‌ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…