ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಮುಡಿಯುವುದಕ್ಕಿಂತ ಪೂಜೆ ಮಾಡುತ್ತಾರೆ!
ರಾತ್ರಿಯ ರಾಣಿ ಈ ಹೂವನ್ನು ಮುಡಿಯುವುದಕ್ಕಿಂತ ಧಾರ್ಮಿಕ ಪೂಜನಿಯವಾಗಿ ಉಪಯೋಗಿಸುತ್ತಾರೆ ಈ ಹೂ ಅರಳುವುದನ್ನು ನೋಡುವವರೆ ಅದೃಷ್ಟವಂತರು. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ.
ಈ ಹೂವಿನ ಹೆಸರಿನ, ಹಿಂದೆ ಇದೆ ಒಂದು ಪುರಾಣ ಕಥೆ…
ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.
ಈ ಹೂವು ಹೇಗೆ ಅರಳುತ್ತದೆ ಗೊತ್ತಾ?
ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ.
ಬ್ರಹ್ಮ ಕಮಲ ಹೂವು ಬಿಡುವುದು ಜೂನ್- ಜುಲೈ ತಿಂಗಳಿನಲ್ಲಿ. ಕೇವಲ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ.
ಬೆಳೆಯುವುದೆಲ್ಲಿ…
ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ.
ಔಷಧಗಳಲ್ಲಿ ಬಳಕೆ :-
ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ.
ಈ ಹೂವಿಗೆ ರಾತ್ರಿ ರಾಣಿ ಎಂದು ಕರೆಯುತ್ತಾರೆ…
ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವುಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು. ರಾತ್ರಿ ಅರಳುವುದರಿಂದ ಇದನ್ನು ರಾತ್ರಿ ರಾಣಿ ಎಂತಲೂ ಕರೆಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…