ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

ಮುಡಿಯುವುದಕ್ಕಿಂತ ಪೂಜೆ ಮಾಡುತ್ತಾರೆ!
ರಾತ್ರಿಯ ರಾಣಿ ಈ ಹೂವನ್ನು ಮುಡಿಯುವುದಕ್ಕಿಂತ ಧಾರ್ಮಿಕ ಪೂಜನಿಯವಾಗಿ ಉಪಯೋಗಿಸುತ್ತಾರೆ ಈ ಹೂ ಅರಳುವುದನ್ನು ನೋಡುವವರೆ ಅದೃಷ್ಟವಂತರು. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ.

ಈ ಹೂವಿನ ಹೆಸರಿನ, ಹಿಂದೆ ಇದೆ ಒಂದು ಪುರಾಣ ಕಥೆ…
ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.
ಈ ಹೂವು ಹೇಗೆ ಅರಳುತ್ತದೆ ಗೊತ್ತಾ?
ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ.
ಬ್ರಹ್ಮ ಕಮಲ ಹೂವು ಬಿಡುವುದು ಜೂನ್- ಜುಲೈ ತಿಂಗಳಿನಲ್ಲಿ. ಕೇವಲ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ.

ಬೆಳೆಯುವುದೆಲ್ಲಿ…
ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ.
ಔಷಧಗಳಲ್ಲಿ ಬಳಕೆ :-
ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ.

ಈ ಹೂವಿಗೆ ರಾತ್ರಿ ರಾಣಿ ಎಂದು ಕರೆಯುತ್ತಾರೆ…
ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವುಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು. ರಾತ್ರಿ ಅರಳುವುದರಿಂದ ಇದನ್ನು ರಾತ್ರಿ ರಾಣಿ ಎಂತಲೂ ಕರೆಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…