ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

ಮುಡಿಯುವುದಕ್ಕಿಂತ ಪೂಜೆ ಮಾಡುತ್ತಾರೆ!
ರಾತ್ರಿಯ ರಾಣಿ ಈ ಹೂವನ್ನು ಮುಡಿಯುವುದಕ್ಕಿಂತ ಧಾರ್ಮಿಕ ಪೂಜನಿಯವಾಗಿ ಉಪಯೋಗಿಸುತ್ತಾರೆ ಈ ಹೂ ಅರಳುವುದನ್ನು ನೋಡುವವರೆ ಅದೃಷ್ಟವಂತರು. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ.

ಈ ಹೂವಿನ ಹೆಸರಿನ, ಹಿಂದೆ ಇದೆ ಒಂದು ಪುರಾಣ ಕಥೆ…
ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.
ಈ ಹೂವು ಹೇಗೆ ಅರಳುತ್ತದೆ ಗೊತ್ತಾ?
ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ.
ಬ್ರಹ್ಮ ಕಮಲ ಹೂವು ಬಿಡುವುದು ಜೂನ್- ಜುಲೈ ತಿಂಗಳಿನಲ್ಲಿ. ಕೇವಲ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ.

ಬೆಳೆಯುವುದೆಲ್ಲಿ…
ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ.
ಔಷಧಗಳಲ್ಲಿ ಬಳಕೆ :-
ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ.

ಈ ಹೂವಿಗೆ ರಾತ್ರಿ ರಾಣಿ ಎಂದು ಕರೆಯುತ್ತಾರೆ…
ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವುಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು. ರಾತ್ರಿ ಅರಳುವುದರಿಂದ ಇದನ್ನು ರಾತ್ರಿ ರಾಣಿ ಎಂತಲೂ ಕರೆಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…