ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

ಮುಡಿಯುವುದಕ್ಕಿಂತ ಪೂಜೆ ಮಾಡುತ್ತಾರೆ!
ರಾತ್ರಿಯ ರಾಣಿ ಈ ಹೂವನ್ನು ಮುಡಿಯುವುದಕ್ಕಿಂತ ಧಾರ್ಮಿಕ ಪೂಜನಿಯವಾಗಿ ಉಪಯೋಗಿಸುತ್ತಾರೆ ಈ ಹೂ ಅರಳುವುದನ್ನು ನೋಡುವವರೆ ಅದೃಷ್ಟವಂತರು. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ.

ಈ ಹೂವಿನ ಹೆಸರಿನ, ಹಿಂದೆ ಇದೆ ಒಂದು ಪುರಾಣ ಕಥೆ…
ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.
ಈ ಹೂವು ಹೇಗೆ ಅರಳುತ್ತದೆ ಗೊತ್ತಾ?
ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ.
ಬ್ರಹ್ಮ ಕಮಲ ಹೂವು ಬಿಡುವುದು ಜೂನ್- ಜುಲೈ ತಿಂಗಳಿನಲ್ಲಿ. ಕೇವಲ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ.

ಬೆಳೆಯುವುದೆಲ್ಲಿ…
ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ.
ಔಷಧಗಳಲ್ಲಿ ಬಳಕೆ :-
ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ.

ಈ ಹೂವಿಗೆ ರಾತ್ರಿ ರಾಣಿ ಎಂದು ಕರೆಯುತ್ತಾರೆ…
ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವುಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು. ರಾತ್ರಿ ಅರಳುವುದರಿಂದ ಇದನ್ನು ರಾತ್ರಿ ರಾಣಿ ಎಂತಲೂ ಕರೆಯುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…