ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.ಉದ್ಯೋಗಿಗಳಾದರೆ ತಾವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಿ ಮುಂದೆ ಸಾಗುತ್ತಾರೆ. ಆ ಸೂಚನೆಗಳು ಏನೂ ಅಂತ ಈಗ ತಿಳಿದುಕೊಳ್ಳೋಣ,
ಮನೆಯಿಂದ ಹೊರಗೆ ಹೋಗುವಾಗ ಯಾರೇ ಆಗಿರಲಿ ನಮಗಿಂತ ದೊಡ್ಡವರ ಆಶೀರ್ವಾದ ಪಡೆಯಬೇಕು. ಆಶೀರ್ವಾದ ಪಡೆಯಬೇಕಾದ ಸಮಯದಲ್ಲಿ ಬಾಗುತ್ತಾರಾದ್ದರಿಂದ, ಆ ಸ್ಥಿತಿಯಲ್ಲಿ ರಕ್ತ ಸಂಚಲನೆ ಮಿದುಳಿಗೆ ಹೆಚ್ಚಾಗಿ ಆಗಿ ಆ ಭಾಗ ಶಾರ್ಪ್ ಆಗುತ್ತದೆ. ಇದರಿಂದ ಆಲೋಚನಾ ಶಕ್ತಿ ಹೆಚ್ಚುತ್ತದೆ. ಅಷ್ಟೇ ಅಲ್ಲ ಈ ರೀತಿ ಮಾಡುವುದರಿಂದ ಪಿತೃದೋಷ ನಿವಾರಣೆಯಾಗುತ್ತದೆ. ಇದರಿಂದ ಅದೃಷ್ಟ ಕೂಡಿಬರುತ್ತದೆ. ಹಿರಿಯರ ಆಶೀರ್ವಾದ ಪಡೆದು ಮನೆಯಿಂದ ಹೊರಟರೆ ಎಲ್ಲವೂ ಒಳಿತಾಗುತ್ತದೆ. ನೆಗಟೀವ್ ಎನರ್ಜಿಯಿಂದ ಹೊರಬಂದು ಪಾಸಿಟೀವ್ ಎನರ್ಜಿ ಹೆಚ್ಚಾಗುತ್ತದೆ.
ಬೆಳಗ್ಗೆ ನಿದ್ದೆಯಿಂದ ಎದ್ದ ಕೂಡಲೆ ಅಂಗೈಯನ್ನು ನೋಡಿಕೊಳ್ಳಬೇಕು. ಎರಡೂ ಅಂಗೈಗಳನ್ನು ಹತ್ತಿರಹತ್ತಿರ ಹಿಡಿದು ಆ ಕೆಲಸ ಮಾಡಬೇಕು. ಹಾಗೂ ಅಂಗೈಗಳನ್ನು ನೋಡಿಕೊಳ್ಳುತ್ತಾ ಈ ಶ್ಲೋಕವನ್ನು ಒಮ್ಮೆ ಪಠಿಸಿ:-
ಈ ರೀತಿ ಮಾಡುವುದರಿಂದ ಕೈ ಬೆರಳುಗಳ ಕೊನೆಯಲ್ಲಿರುವ ಲಕ್ಷ್ಮಿದೇವಿ, ಮಧ್ಯದಲ್ಲಿರುವ ಸರಸ್ವತಿ, ಮಣಿಕಟ್ಟು ಬಳಿ ಇರುವ ಗೌರಿ, ಈ ಮೂವರ ಆಶೀರ್ವಾದ ನಮಗೆ ಸಿಗುತ್ತದೆ. ಇದರಿಂದ ವಿದ್ಯೆ, ಜ್ಞಾನ, ಧನ ಎಲ್ಲವೂ ಕೈಗೂಡತ್ತದೆ.
ದಂಪತಿಗಳು ತಮ್ಮತಮ್ಮ ಬೆಡ್ ರೂಮಿನಲ್ಲಿ ಯಾವುದೇ ಕಾರಣಕ್ಕೂ ಕನ್ನಡಿ ಇಟ್ಟುಕೊಳ್ಳಬಾರದು. ಆ ರೀತಿ ಮಾಡುವುದರಿಂದ ಅವರ ವೈವಾಹಿಕ ಜೀವನ ಸುಖಕರವಾಗಿರಲ್ಲ. ಎಲ್ಲವೂ ಸಮಸ್ಯೆಗಳೇ ಬರುತ್ತವಂತೆ. ಆ ರೀತಿ ಕನ್ನಡಿ ಇಟ್ಟುಕೊಂಡು ಬೆಳಗ್ಗೆಯೇ ನೋಡಿದರೆ ಎಲ್ಲವೂ ಅಶುಭ ನಡೆಯುತ್ತದೆ. ಇದು ಕೂಡಿಬರುವುದಿಲ್ಲವಂತೆ.
ಬೆಳಗ್ಗೆ ಮನೆಯಿಂದ ಹೊರಗೆ ಹೋಗಬೇಕಾದರೆ ಸ್ವಲ್ಪ ಬೆಲ್ಲ ತಿಂದು ನೀರು ಕುಡಿಯಬೇಕು. ಆ ಬಳಿಕ ಹೊರಗೆ ಹೋಗಬೇಕು. ಈ ರೀತಿಮಾಡುವುದರಿಂದ ದೇಹಕ್ಕೆ ಶಕ್ತಿ ದೊರೆಯುವುದಷ್ಟೇ ಅಲ್ಲದೆ, ನಿತ್ಯ ಉತ್ಸಾಹದಿಂದ ಇರುತ್ತೀರ. ಅದರ ಜತೆಗೆ ಪಾಸಿಟೀವ್ ಎನರ್ಜಿ ಜೊತೆಗೆ ಇರುತ್ತದೆ. ಆಗ ಯಾವುದೇ ಕೆಲಸ ಮಾಡಿದರೂ ಯಶಸ್ಸು ಸಿಗುತ್ತದೆ. ಎಲ್ಲವೂ ಒಳ್ಳೆಯದಾಗುತ್ತದೆ.
ಒತ್ತಡ, ಮಾನಸಿಕ ಸಮಸ್ಯೆಗಳೊಂದಿಗೆ ಒದ್ದಾಡುತ್ತಿರುವವರು ಒಮ್ಮೆ ತಾವು ಮಲಗುತ್ತಿರುವ ಪ್ರದೇಶಕ್ಕೆ ವಿರುದ್ಧವಾಗಿ ಕನ್ನಡಿ ಇದೆಯಾ ಎಂದು ಚೆಕ್ ಮಾಡಿಕೊಳ್ಳಬೇಕು. ಒಂದು ವೇಳೆ ಕನ್ನಡಿ ಇದ್ದರೆ ಕೂಡಲೆ ಅದನ್ನು ತೆಗೆಯಬೇಕು. ಆ ರೀತಿ ಸಾಧ್ಯವಾಗದಿದ್ದರೆ ಆ ಕನ್ನಡಿಯನ್ನು ವಸ್ತ್ರದಿಂದ ಮುಚ್ಚಬೇಕು. ಇದರಿಂದ ಆಯಾ ಸಮಸ್ಯೆಗಳಿಂದ ಉಪಶಮನ ಸಿಗುತ್ತದೆ. ಈ ರೀತಿ ಇರುವವರು ಕನ್ನಡಿಯನ್ನು ಬೆಳಗ್ಗೆ ಯಾವುದೇ ಕಾರಣಕ್ಕೂ ನೋಡಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.