ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಭಗವಾನ್ ಶಿವನಿಗೆ ದೇವತಗಳಾಗಲಿ, ಮನುಷ್ಯರಾಗಲಿ, ರಾಕ್ಷಸರಾಗಲಿ ಎಲ್ಲರೂ ಒಂದೇ ಎಂಬ ಭಾವವಿದ್ದು,ಯಾರಿಗೂ ಭೇದ ಭಾವ ಮಾಡುವುದಿಲ್ಲ. ಆದ್ದರಿಂದ ಶಿವನು ಅತ್ಯಂತ ಕರುಣಾಮುರ್ತಿಯಾಗಿದ್ದು, ನಿಜವಾದ ಭಕ್ತಿಗೆ ಬೇಗ ಒಲಿಯುತ್ತಾನೆ. ನಾವು ಶಿವನನ್ನು ಶಿವಲಿಂಗದ ರೂಪದಲ್ಲಿ ಪೂಜಿಸುತ್ತೇವೆ.ಮತ್ತು ಶಿವನನ್ನು ಪೂಜಿಸಲು ಅನೇಕ ವಿಧಾನಗಳಿವೆ. ಆದ್ರೆ ಶಿವನನ್ನು ಪೋಜಿಸುವಾಗ ಜನರು ತಮ್ಮ ಭಕ್ತಿಯ ಪರಾಕಾಷ್ಟೆಯಲ್ಲಿ ಕೆಲವು ತಪ್ಪುಗಳನ್ನು ಮಾಡುತ್ತಾರೆ.
ಹಿಂದೂ ಪುರಾಣಗಳ ಪ್ರಕಾರ ದಂಭ ಎಂಬ ರಕ್ಕಸನಿದ್ದು, ಅವನಿಗೆ ಮಕ್ಕಳಿಲ್ಲದ ಕಾರಣ, ಭಗವಾನ್ ನಾರಾಯಣನನ್ನು ಪ್ರಾರ್ಥಿಸಲಾಗಿ, ಅವನಿಗೆ ಜಲಂಧರ್ ಎಂಬ ಪುತ್ರನು ಜನಿಸಿದನು. ಈ ಜಲಂಧರ್’ನು ತ್ರಿಲೋಕಾದಿಪತಿಯಾಗಬೇಕೆಂಬ ಆಸೆಯಿಂದ, ಬ್ರಹ್ಮದೇವರನ್ನು ಕುರಿತು ತಪಸ್ಸು ಮಾಡಿದನು. ತಪಸ್ಸಿಗೆ ಒಲಿದ ಬ್ರಹ್ಮದೇವರು ಪ್ರತ್ಯಕ್ಷನಾಗಲು, ಯಾವ ದೇವತೆಗಳು ನನ್ನನ್ನು ಸೋಲಿಸಬಾರದೆಂಬ ವರವನ್ನು ಬೇಡಿದನು. ವರವನ್ನು ಕೊಟ್ಟ ಬ್ರಹ್ಮದೇವರು, ಈ ವರವು ಕೃಷ್ಣ ಕವಚವನ್ನು ಭೋದಿಸಿ, ಧರ್ಮಧ್ವಜನ ಮಗಳಾದ ತುಳಸಿಯನ್ನು ಮದುವೆಯಾಗಲು ತಿಳಿಸಿದನು. ನಿನ್ನ ಅಮರತ್ವವು ಶ್ರೀ ಕೃಷ್ಣ ಕವಚ ಮತ್ತು ತುಳಸಿ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿದನು.
ಜಲಂಧರ್ ಯಾವುದೇ ದೇವತೆಗಳಿಂದ ಸೋಲಿಸಬಾರದು ಎಂಬ ವರವನ್ನು ಹೊಂದಿದ್ದರಿಂದ, ವಿಷ್ಣು ಜಲಂಧರ್ ಅವರ ಹೆಂಡತಿ ತುಳಸಿಯ ಪವಿತ್ರತೆಯನ್ನು ಉಲ್ಲಂಘಿಸಬೇಕಾಯಿತು. ಆಕೆಯ ಪತಿಯ ಮರಣದ ನಂತರ,ಈ ದ್ರೋಹದಿಂದ ಕೋಪಗೊಂಡ ತುಳಸಿಯು, ತನ್ನ ದೈವಿಕ ಎಲೆಗಳಿಂದ ಶಿವನನ್ನು ಆರಾಧಿಸದಂತೆ ಬಹಿಷ್ಕರಿಸಿದಳು.
ಒಮ್ಮೆ ಬ್ರಹ್ಮ ಮತ್ತು ವಿಷ್ಣು ದೇವತೆಗಳ ನಡುವೆ ಯಾರೂ ಸವ್ರೋತ್ತಮರೆಂದು ವಾದ ಏರ್ಪಡುತ್ತದೆ. ಇಬ್ಬರ ನಡುವೆ ಅತಿ ಘೋರವಾದ ವಾದ ಉಂಟಾಗಲು, ಆಗ ಇವರ ಮಧ್ಯ ಆದಿ ಅನ್ತ್ಯಗಳಲ್ಲಿದ ಬೃಹದಾಕಾರವಾದ ಅಗ್ನಿ ಸ್ಥಂಭ ಲಿಂಗವು ಏರ್ಪಡುತ್ತದೆ. ಭಗವಾನ್ ಶಿವನು ಲಿಂಗದ ರೂಪದಲ್ಲಿ ಕಾಣಿಸಿಕೊಂಡು, ಈ ಲಿಂಗದ ಆದಿ, ಅಂತ್ಯ ಕಂಡುಹಿಡಿದವರು ಸವ್ರೋತ್ತಮರೆಂದು ಘೋಷಿಸುತ್ತಾರೆ. ಆಗ ಬ್ರಹ್ಮ ಮತ್ತು ನಾರಾಯಣರು ಲಿಂಗದ ಆದಿ ಮತ್ತು ಅಂತ್ಯ ಹುಡುಕಲು ಹೊರಡುತ್ತಾರೆ. ನಾರಾಯಣನು ಲಿಂಗದ ತುದಿಯ ಕಡೆ, ಮತ್ತು ಬ್ರಹ್ಮನು ಲಿಂಗದ ಶಿರದ ಕಡೆ ಹುಡುಕಲು ಹೊರದುತ್ತಾರೆ. ಆದ್ರೆ ಭಗವಾನ್ ನಾರಾಯಣನಿಗೆ ಅಂತ್ಯ ಸಿಗದೇ, ಈ ಶಿವ ಲಿಂಗಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ ಎಂದು ನಿರ್ಧರಿಸಿ, ವಾಪಸ್ ಆಗುತ್ತಾರೆ.
ಸುಲಭವಾಗಿ ತನ್ನ ಸೋಲನ್ನು ಒಪ್ಪದ ಬ್ರಹ್ಮದೇವರು, ಆದಿಯನ್ನು ಕಂಡುಹಿಡಿಯಲು ಹೋಗುತ್ತಿರುವಾಗ ಲಿಂಗದಿಂದ ಜಾರುತ್ತಿದ್ದ ಕೇದಗೆ ಪುಷ್ಪವನ್ನು ಕಂಡ ಬ್ರಹ್ಮದೇವರು, ಕೆದಗೆಯೊಡನೆ ಸಂಧಾನ ಮಾಡಿಕೊಂಡು, ನಾನು ಲಿಂಗದ ಆಡಿಯನ್ನು ಕಂಡೆ ಎಂಬ ಸುಳ್ಳನ್ನು ಹೇಳಬೇಕೆಂದು, ಕೇದಗೆ ಪುಷ್ಪವನ್ನು ಸಾಕ್ಷಿಯಾಗಿ ಕರೆತಂದನು. ಶಿವನಿಗೆ ನಾನು ಈ ಲಿಂಗದ ಆದಿಯನ್ನು ಕಂಡೆ ಎಂದು, ಸಾಕ್ಷಿಯಾಗಿ ಕೇದಗೆ ಪುಷ್ಪವನ್ನು ಕೇಳಲಾಗಿ, ಕೇದಗೆ ಪುಷ್ಪವು ಕೂಡ ಬ್ರಹ್ಮನ ಮಾತಿಗೆ ಸಹಕರಿಸಿತು. ಆಗ ಬ್ರಹ್ಮದೇವರ ಸುಳ್ಳಿನಿಂದ ಕ್ರುದ್ದನಾದ ಶಿವನು, ಇನ್ನುಮುಂದೆ ಮೂರು ಜಗತ್ತುಗಳಲ್ಲಿ ಯಾರೊಬ್ಬರೂ ನಿನ್ನನ್ನು ಪೂಜಿಸದಂತೆ ಇರಲಿ ಎಂಬ ಶಾಪವನ್ನು ಕೊಟ್ಟನು. ಹೀಗಾಗಿ ಕೇದಗೆಯ ಸುಳ್ಳು ಸಾಕ್ಷಿಯನ್ನು ಹೇಳಿದ್ದರಿಂದ ಕೇದಗೆಯ ಭಗವಾನ್ ಶಿವನ ಪೂಜೆಗೆ ಅರ್ಹವಲ್ಲದ ಹೂವಾಗಿದೆ.
ಎಲ್ಲಾ ಪೂಜೆಗಳಲ್ಲೂ ಹರಿಶಿಣವನ್ನು ಹೆಚ್ಚಾಗಿ ಬಳಸಲಾಗುತ್ತದೆ.ಶಿವಲಿಂಗಕ್ಕೆ ಎರಡು ಭಾಗಗಳಿವೆ, ಒಂದು ಶಿವನೊಂದಿಗೆ ಸಂಬಂಧ ಹೊಂದಿದ್ದರೆ ಮತ್ತೊಂದು ದೇವಿ ಪಾರ್ವತಿಯೊಂದಿಗೆ ಸಂಭಂದ ಹೊಂದಿದೆ.ಹಾಗೂ ಸ್ತ್ರೀತ್ವವನ್ನು ಪ್ರತಿನಿಧಿಸುತ್ತದೆ. ಹರಿಶಿಣವನ್ನು ಸೌಂದರ್ಯವರ್ಧಕವಾಗಿ, ಮಹಿಳೆಯರು ಬಳಸುವುದರಿಂದ, ಇದನ್ನು ಶಿವಲಿಂಗದಲ್ಲಿ ಬಳಸಲಾಗುವುದಿಲ್ಲ ಆದರೆ ನೀವು ಜಲಧಾರಿಯ ಮೇಲೆ ಬಳಸಬಹುದು.
ವಿವಾಹಿತ ಮಹಿಳೆಯರಿಗೆ ಕುಂಕುಮ್ ಪವಿತ್ರವೆಂದು ಪರಿಗಣಿಸಲಾಗಿದೆ ಮತ್ತು ಮಹಿಳೆಯರು ತಮ್ಮ ಪತಿಯ ದೀರ್ಘಾವಧಿಯ ಆಶೀರ್ವಾದವನ್ನು ಪಡೆಯುತ್ತಾರೆ.
ಆದರೆ ಭಗವಾನ್ ಶಿವನು ಲಯಕರ್ತನಾಗಿರುವುದರಿಂದ, ಕುಂಕುಮದೊಂದಿಗೆ ಪೂಜಿಸುವುದು ಮಂಗಳಕರವಲ್ಲ.
ತೆಂಗಿನಕಾಯಿ ಕೂಡ ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಪ್ರತಿ ಹಿಂದೂ ಪೂಜಾದಲ್ಲಿ ತೆಂಗಿನಕಾಯಿಯನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ನಾವು ಅನೇಕ ಮಂಗಳಕರ ಕಾರ್ಯಕ್ರಮಗಳಲ್ಲಿ ದೇವರಿಗೆ ತೆಂಗಿನಕಾಯಿಯನ್ನು ಹೊಡೆಯುತ್ತೇವೆ. ಒಬ್ಬನು ಶಿವನಿಗೆ ತೆಂಗಿನಕಾಯಿ ನೀಡಬಹುದು, ಆದರೆ ಶಿವಲಿಂಗವನ್ನು ತೆಂಗಿನ ನೀರಿನೊಂದಿಗೆ ಪೂಜಿಸಬಾರದು.
ಶಿವಲಿಂಗಕ್ಕೆ ನೀಡುವ ಎಲ್ಲವನ್ನೂ ನಿರ್ಮಲಯಾ ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ ನದಿಗಳು, ಸರೋವರಗಳು ಮತ್ತು ಸಮುದ್ರದಲ್ಲಿ ಹೊರತುಪಡಿಸಿ ಎಲ್ಲಿ ಬೇಕಾದರೂ ಸೇವಿಸದಂತೆ ನಿಷೇಧಿಸಲಾಗಿದೆ. ಮತ್ತು ದೇವತೆಗಳ ಮೇಲೆ ಅರ್ಪಿಸಿದ ನಂತರ ತೆಂಗಿನ ನೀರು ಸೇವಿಸುವುದರಿಂದ ಅದನ್ನು ಕುಡಿಯಲು ಕಡ್ಡಾಯವಾಗಿ ಪರಿಗಣಿಸಲಾಗುತ್ತದೆ, ಹಾಗಾಗಿ ಅದನ್ನು ಶಿವಲಿಂಗ ಪೂಜೆಯಲ್ಲಿ ಬಳಸಲಾಗುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…