ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಭಗವಾನ್ ಶಿವನಿಗೆ ದೇವತಗಳಾಗಲಿ, ಮನುಷ್ಯರಾಗಲಿ, ರಾಕ್ಷಸರಾಗಲಿ ಎಲ್ಲರೂ ಒಂದೇ ಎಂಬ ಭಾವವಿದ್ದು,ಯಾರಿಗೂ ಭೇದ ಭಾವ ಮಾಡುವುದಿಲ್ಲ. ಆದ್ದರಿಂದ ಶಿವನು ಅತ್ಯಂತ ಕರುಣಾಮುರ್ತಿಯಾಗಿದ್ದು, ನಿಜವಾದ ಭಕ್ತಿಗೆ ಬೇಗ ಒಲಿಯುತ್ತಾನೆ. ನಾವು ಶಿವನನ್ನು ಶಿವಲಿಂಗದ ರೂಪದಲ್ಲಿ ಪೂಜಿಸುತ್ತೇವೆ.ಮತ್ತು ಶಿವನನ್ನು ಪೂಜಿಸಲು ಅನೇಕ ವಿಧಾನಗಳಿವೆ. ಆದ್ರೆ ಶಿವನನ್ನು ಪೋಜಿಸುವಾಗ ಜನರು ತಮ್ಮ ಭಕ್ತಿಯ ಪರಾಕಾಷ್ಟೆಯಲ್ಲಿ ಕೆಲವು ತಪ್ಪುಗಳನ್ನು ಮಾಡುತ್ತಾರೆ.
ಹಿಂದೂ ಪುರಾಣಗಳ ಪ್ರಕಾರ ದಂಭ ಎಂಬ ರಕ್ಕಸನಿದ್ದು, ಅವನಿಗೆ ಮಕ್ಕಳಿಲ್ಲದ ಕಾರಣ, ಭಗವಾನ್ ನಾರಾಯಣನನ್ನು ಪ್ರಾರ್ಥಿಸಲಾಗಿ, ಅವನಿಗೆ ಜಲಂಧರ್ ಎಂಬ ಪುತ್ರನು ಜನಿಸಿದನು. ಈ ಜಲಂಧರ್’ನು ತ್ರಿಲೋಕಾದಿಪತಿಯಾಗಬೇಕೆಂಬ ಆಸೆಯಿಂದ, ಬ್ರಹ್ಮದೇವರನ್ನು ಕುರಿತು ತಪಸ್ಸು ಮಾಡಿದನು. ತಪಸ್ಸಿಗೆ ಒಲಿದ ಬ್ರಹ್ಮದೇವರು ಪ್ರತ್ಯಕ್ಷನಾಗಲು, ಯಾವ ದೇವತೆಗಳು ನನ್ನನ್ನು ಸೋಲಿಸಬಾರದೆಂಬ ವರವನ್ನು ಬೇಡಿದನು. ವರವನ್ನು ಕೊಟ್ಟ ಬ್ರಹ್ಮದೇವರು, ಈ ವರವು ಕೃಷ್ಣ ಕವಚವನ್ನು ಭೋದಿಸಿ, ಧರ್ಮಧ್ವಜನ ಮಗಳಾದ ತುಳಸಿಯನ್ನು ಮದುವೆಯಾಗಲು ತಿಳಿಸಿದನು. ನಿನ್ನ ಅಮರತ್ವವು ಶ್ರೀ ಕೃಷ್ಣ ಕವಚ ಮತ್ತು ತುಳಸಿ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿದನು.
ಜಲಂಧರ್ ಯಾವುದೇ ದೇವತೆಗಳಿಂದ ಸೋಲಿಸಬಾರದು ಎಂಬ ವರವನ್ನು ಹೊಂದಿದ್ದರಿಂದ, ವಿಷ್ಣು ಜಲಂಧರ್ ಅವರ ಹೆಂಡತಿ ತುಳಸಿಯ ಪವಿತ್ರತೆಯನ್ನು ಉಲ್ಲಂಘಿಸಬೇಕಾಯಿತು. ಆಕೆಯ ಪತಿಯ ಮರಣದ ನಂತರ,ಈ ದ್ರೋಹದಿಂದ ಕೋಪಗೊಂಡ ತುಳಸಿಯು, ತನ್ನ ದೈವಿಕ ಎಲೆಗಳಿಂದ ಶಿವನನ್ನು ಆರಾಧಿಸದಂತೆ ಬಹಿಷ್ಕರಿಸಿದಳು.
ಒಮ್ಮೆ ಬ್ರಹ್ಮ ಮತ್ತು ವಿಷ್ಣು ದೇವತೆಗಳ ನಡುವೆ ಯಾರೂ ಸವ್ರೋತ್ತಮರೆಂದು ವಾದ ಏರ್ಪಡುತ್ತದೆ. ಇಬ್ಬರ ನಡುವೆ ಅತಿ ಘೋರವಾದ ವಾದ ಉಂಟಾಗಲು, ಆಗ ಇವರ ಮಧ್ಯ ಆದಿ ಅನ್ತ್ಯಗಳಲ್ಲಿದ ಬೃಹದಾಕಾರವಾದ ಅಗ್ನಿ ಸ್ಥಂಭ ಲಿಂಗವು ಏರ್ಪಡುತ್ತದೆ. ಭಗವಾನ್ ಶಿವನು ಲಿಂಗದ ರೂಪದಲ್ಲಿ ಕಾಣಿಸಿಕೊಂಡು, ಈ ಲಿಂಗದ ಆದಿ, ಅಂತ್ಯ ಕಂಡುಹಿಡಿದವರು ಸವ್ರೋತ್ತಮರೆಂದು ಘೋಷಿಸುತ್ತಾರೆ. ಆಗ ಬ್ರಹ್ಮ ಮತ್ತು ನಾರಾಯಣರು ಲಿಂಗದ ಆದಿ ಮತ್ತು ಅಂತ್ಯ ಹುಡುಕಲು ಹೊರಡುತ್ತಾರೆ. ನಾರಾಯಣನು ಲಿಂಗದ ತುದಿಯ ಕಡೆ, ಮತ್ತು ಬ್ರಹ್ಮನು ಲಿಂಗದ ಶಿರದ ಕಡೆ ಹುಡುಕಲು ಹೊರದುತ್ತಾರೆ. ಆದ್ರೆ ಭಗವಾನ್ ನಾರಾಯಣನಿಗೆ ಅಂತ್ಯ ಸಿಗದೇ, ಈ ಶಿವ ಲಿಂಗಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ ಎಂದು ನಿರ್ಧರಿಸಿ, ವಾಪಸ್ ಆಗುತ್ತಾರೆ.
ಸುಲಭವಾಗಿ ತನ್ನ ಸೋಲನ್ನು ಒಪ್ಪದ ಬ್ರಹ್ಮದೇವರು, ಆದಿಯನ್ನು ಕಂಡುಹಿಡಿಯಲು ಹೋಗುತ್ತಿರುವಾಗ ಲಿಂಗದಿಂದ ಜಾರುತ್ತಿದ್ದ ಕೇದಗೆ ಪುಷ್ಪವನ್ನು ಕಂಡ ಬ್ರಹ್ಮದೇವರು, ಕೆದಗೆಯೊಡನೆ ಸಂಧಾನ ಮಾಡಿಕೊಂಡು, ನಾನು ಲಿಂಗದ ಆಡಿಯನ್ನು ಕಂಡೆ ಎಂಬ ಸುಳ್ಳನ್ನು ಹೇಳಬೇಕೆಂದು, ಕೇದಗೆ ಪುಷ್ಪವನ್ನು ಸಾಕ್ಷಿಯಾಗಿ ಕರೆತಂದನು. ಶಿವನಿಗೆ ನಾನು ಈ ಲಿಂಗದ ಆದಿಯನ್ನು ಕಂಡೆ ಎಂದು, ಸಾಕ್ಷಿಯಾಗಿ ಕೇದಗೆ ಪುಷ್ಪವನ್ನು ಕೇಳಲಾಗಿ, ಕೇದಗೆ ಪುಷ್ಪವು ಕೂಡ ಬ್ರಹ್ಮನ ಮಾತಿಗೆ ಸಹಕರಿಸಿತು. ಆಗ ಬ್ರಹ್ಮದೇವರ ಸುಳ್ಳಿನಿಂದ ಕ್ರುದ್ದನಾದ ಶಿವನು, ಇನ್ನುಮುಂದೆ ಮೂರು ಜಗತ್ತುಗಳಲ್ಲಿ ಯಾರೊಬ್ಬರೂ ನಿನ್ನನ್ನು ಪೂಜಿಸದಂತೆ ಇರಲಿ ಎಂಬ ಶಾಪವನ್ನು ಕೊಟ್ಟನು. ಹೀಗಾಗಿ ಕೇದಗೆಯ ಸುಳ್ಳು ಸಾಕ್ಷಿಯನ್ನು ಹೇಳಿದ್ದರಿಂದ ಕೇದಗೆಯ ಭಗವಾನ್ ಶಿವನ ಪೂಜೆಗೆ ಅರ್ಹವಲ್ಲದ ಹೂವಾಗಿದೆ.
ಎಲ್ಲಾ ಪೂಜೆಗಳಲ್ಲೂ ಹರಿಶಿಣವನ್ನು ಹೆಚ್ಚಾಗಿ ಬಳಸಲಾಗುತ್ತದೆ.ಶಿವಲಿಂಗಕ್ಕೆ ಎರಡು ಭಾಗಗಳಿವೆ, ಒಂದು ಶಿವನೊಂದಿಗೆ ಸಂಬಂಧ ಹೊಂದಿದ್ದರೆ ಮತ್ತೊಂದು ದೇವಿ ಪಾರ್ವತಿಯೊಂದಿಗೆ ಸಂಭಂದ ಹೊಂದಿದೆ.ಹಾಗೂ ಸ್ತ್ರೀತ್ವವನ್ನು ಪ್ರತಿನಿಧಿಸುತ್ತದೆ. ಹರಿಶಿಣವನ್ನು ಸೌಂದರ್ಯವರ್ಧಕವಾಗಿ, ಮಹಿಳೆಯರು ಬಳಸುವುದರಿಂದ, ಇದನ್ನು ಶಿವಲಿಂಗದಲ್ಲಿ ಬಳಸಲಾಗುವುದಿಲ್ಲ ಆದರೆ ನೀವು ಜಲಧಾರಿಯ ಮೇಲೆ ಬಳಸಬಹುದು.
ವಿವಾಹಿತ ಮಹಿಳೆಯರಿಗೆ ಕುಂಕುಮ್ ಪವಿತ್ರವೆಂದು ಪರಿಗಣಿಸಲಾಗಿದೆ ಮತ್ತು ಮಹಿಳೆಯರು ತಮ್ಮ ಪತಿಯ ದೀರ್ಘಾವಧಿಯ ಆಶೀರ್ವಾದವನ್ನು ಪಡೆಯುತ್ತಾರೆ.
ಆದರೆ ಭಗವಾನ್ ಶಿವನು ಲಯಕರ್ತನಾಗಿರುವುದರಿಂದ, ಕುಂಕುಮದೊಂದಿಗೆ ಪೂಜಿಸುವುದು ಮಂಗಳಕರವಲ್ಲ.
ತೆಂಗಿನಕಾಯಿ ಕೂಡ ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಪ್ರತಿ ಹಿಂದೂ ಪೂಜಾದಲ್ಲಿ ತೆಂಗಿನಕಾಯಿಯನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ನಾವು ಅನೇಕ ಮಂಗಳಕರ ಕಾರ್ಯಕ್ರಮಗಳಲ್ಲಿ ದೇವರಿಗೆ ತೆಂಗಿನಕಾಯಿಯನ್ನು ಹೊಡೆಯುತ್ತೇವೆ. ಒಬ್ಬನು ಶಿವನಿಗೆ ತೆಂಗಿನಕಾಯಿ ನೀಡಬಹುದು, ಆದರೆ ಶಿವಲಿಂಗವನ್ನು ತೆಂಗಿನ ನೀರಿನೊಂದಿಗೆ ಪೂಜಿಸಬಾರದು.
ಶಿವಲಿಂಗಕ್ಕೆ ನೀಡುವ ಎಲ್ಲವನ್ನೂ ನಿರ್ಮಲಯಾ ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ ನದಿಗಳು, ಸರೋವರಗಳು ಮತ್ತು ಸಮುದ್ರದಲ್ಲಿ ಹೊರತುಪಡಿಸಿ ಎಲ್ಲಿ ಬೇಕಾದರೂ ಸೇವಿಸದಂತೆ ನಿಷೇಧಿಸಲಾಗಿದೆ. ಮತ್ತು ದೇವತೆಗಳ ಮೇಲೆ ಅರ್ಪಿಸಿದ ನಂತರ ತೆಂಗಿನ ನೀರು ಸೇವಿಸುವುದರಿಂದ ಅದನ್ನು ಕುಡಿಯಲು ಕಡ್ಡಾಯವಾಗಿ ಪರಿಗಣಿಸಲಾಗುತ್ತದೆ, ಹಾಗಾಗಿ ಅದನ್ನು ಶಿವಲಿಂಗ ಪೂಜೆಯಲ್ಲಿ ಬಳಸಲಾಗುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.