ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಯಾರೂ ಈ ಚಿತ್ರದ ಸೃಷ್ಟಿಕರ್ತ?
ಕರಣ್ ಆಚಾರ್ಯ ಮೂಲತಃ ಕಾಸರಗೋಡು ಜಿಲ್ಲೆಯವರು. ಸದ್ಯ ಮಂಗಳೂರಿನ ಕಂಪೆನಿಯೊಂದರಲ್ಲಿ ಆ್ಯನಿಮೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಯಾರು ಕರಣ್ ಆಚಾರ್ಯ..?
ಕಾಸರಗೋಡು ಮೂಲದ ಕರಣ್ ಆಚಾರ್ಯ ಚಿಕ್ಕವಯಸ್ಸಿನಿಂದಲೇ ಡ್ರಾಯಿಂಗ್ ಸೇರಿದಂತೆ ಇನ್ನಿತರ ಕಲೆಯಲ್ಲಿ ಆಸಕ್ತಿ ಇದ್ದವರು. ಇದಕ್ಕಾಗಿ ಅವರು ಕಾಸರಗೋಡಿನ ” ರಿದಂ ಸ್ಕೂಲ್ ಆಫ್ ಆರ್ಟ್” ಶಾಲೆಯಲ್ಲಿ ಪದವಿಯನ್ನು ಸಹ ಪಡೆದರು. ನಂತರ ತ್ರಿಶೂರ್ನಲ್ಲಿ ಅನಿಮೇಶನ್ ಅಭ್ಯಾಸ ಮಾಡಿದ್ದಾರೆ.
ಕಳೆದ ವರ್ಷ ಕಾಸರಗೋಡಿನ ಕುಂಬ್ಳೆಯಲ್ಲಿ ಹಿಂದೂ ಸಂಘಟನೆಯ ಯುವಕರು ತಮ್ಮ ಸಂಘಟನೆಗಾಗಿ ವಿಭಿನ್ನ ರೀತಿಯ ಲಾಂಛನ ಮಾಡಿಕೊಡಿ ಎಂದು ಹೇಳಿದ್ದರು. ನಾನು ಭಜರಂಗಿಯ ಚಿತ್ರ ಬಿಡಿಸಿಕೊಟ್ಟಿದ್ದೆ. ಅದು ಅವರಿಗೆ ತುಂಬಾ ಇಷ್ಟವಾಗಿತ್ತು. ಈ ಲಾಂಛನವನ್ನು ಕೆಲವರು ವಾಟ್ಸಾಪ್ ಡಿಪಿ ಮಾಡಿಕೊಂಡರು.
![]()
ವಾಟ್ಸಾಪ್ ಡಿಪಿ ಮಾಡುವಾಗ ಭಜರಂಗಿಯ ಮುಖ ಮಾತ್ರ ಕಾಣಿಸಿಕೊಳ್ಳುತ್ತದೆ. ಫುಲ್ ಫೋಟೋ ಬರಲ್ಲ ನೋಡಿ. ಹಾಗೆ ಒಬ್ಬರಿಂದ ಒಬ್ಬರಿಗೆ ಅದು ಶೇರ್ ಆಗುತ್ತಾ ಬಂತು. ಆಮೇಲೆ ನಮ್ಮೂರಿನ ಹುಡುಗರು ಆ ಚಿತ್ರವನ್ನು ಬೈಕ್ ನಲ್ಲಿ ಹಾಕಿಸಿಕೊಂಡ್ರು.
ನಮ್ಮ ಹುಡುಗರೇ ಅಲ್ವಾ… ಹಾಕಿಸಿಕೊಳ್ಳಲಿ ಅದಕ್ಕೇನಂತೆ ಎಂದು ನಾನೂ ಸುಮ್ಮನಿದ್ದೆ. ಆಮೇಲೆ ಗೊತ್ತಾಯ್ತು, ಇದು ನಮ್ಮೂರು ಬಿಟ್ಟು ಬೇರೆ ಊರಿನಲ್ಲಿಯೂ ಕ್ರೇಜ್ ಹುಟ್ಟಿಸಿದೆ ಅಂತ. ಕಳೆದ ವರ್ಷ ಬಿಡಿಸಿದ ಚಿತ್ರ ಈಗ ವೈರಲ್ ಆಗುತ್ತಿದೆ. ಈ ಬಗ್ಗೆ ತುಂಬಾ ಖುಷಿಯೆನಿಸುತ್ತಿದೆ.
‘ಹನುಮಂತ ಸಾಮಾನ್ಯವಾಗಿ ವಿನೀತನಾಗಿ ಕಾಣಿಸಿಕೊಳ್ಳುತ್ತಾನೆ. ನೀವೇಕೆ ಹೀಗೆ ಚಿತ್ರಿಸಿದಿರಿ…’ ಎಂದು ಅನೇಕರು ಕೇಳುತ್ತಾರೆ.
ಒಬ್ಬ ಕಲಾವಿದನಾಗಿ ಹನುಮಾನ್ಗೆ ಯಾವ ರೂಪ ಬೇಕಾದರೂ ಕೊಡಬಹುದು. ರಾಮ– ರಾವಣ ಯುದ್ಧದಲ್ಲಿ ಅವ ಉಗ್ರರೂಪಿಯಾಗಿರುತ್ತಾನೆ. ಲಂಕಾದಹನದ ವೇಳೆಯೂ ಅವನು ಉಗ್ರರೂಪದಲ್ಲಿರುತ್ತಾನೆ. ಆದರೆ ರಾಮನ ಜತೆ ಇರುವಾಗ ಮಾತ್ರ ಅವನು ಶಾಂತರೂಪಿ. ಬಿಡುವು ಸಿಕ್ಕಾಗಲೆಲ್ಲಾ ಶಾಂತರೂಪದ ಹನುಮಂತನ ಚಿತ್ರ ರಚಿಸಬಹುದು. ಈ ಹಿಂದೆ ಶಾಂತರೂಪದ ಹನುಮಂತನ ಚಿತ್ರ ಬಿಡಿಸಿ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದೆ. ಅದು ಸುದ್ದಿಯಾಗಲಿಲ್ಲ. ಆದರೆ ಉಗ್ರರೂಪಿ ಹನುಮ ಎಲ್ಲರನ್ನೂ ಆಕರ್ಷಿಸಿಬಿಟ್ಟ.
ಮೀಸೆಯಿರುವ ಶಿವನ ಚಿತ್ರ ಬಿಡಿಸಿದಾಗ ಶಿವನಿಗೆ ಮೀಸೆಯಿದೆಯಾ? ಎಂದು ಕೆಲವರು ಕೇಳಿದ್ರು. ಯಾಕೆ ಇರಬಾರದು? ಇಲ್ಲಿಯವರೆಗೆ ಶಿವನ ಕಲಾಕೃತಿಯಲ್ಲಿ ಮೀಸೆ ಇರಲಿಲ್ಲ. ಹಾಗಾಗಿಯೇ ಮೀಸೆ ಇರುವ ಶಿವನನ್ನು ಸೃಷ್ಟಿಸಿದೆ. ಒಬ್ಬ ಕಲಾವಿದನ ಮನಸ್ಸಿನಲ್ಲಿ ಯಾವ ಭಾವನೆ ಮೂಡುತ್ತದೋ ಅದನ್ನೇ ಅವನು ಕುಂಚದ ಮೂಲಕ ಹೇಳುತ್ತಾನೆ ಅಲ್ಲವೇ? ಹನುಮ ಹಿಟ್ ಆಯ್ತು.
ನಮ್ಮೂರಲ್ಲಿ ನಮ್ಮ ಹುಡುಗರಿಗಾಗಿ ಆ ಚಿತ್ರ ಬಿಡಿಸಿದ್ದು. ಇದು ಇಷ್ಟೊಂದು ಸದ್ದು ಮಾಡುತ್ತದೆ ಎಂದು ಊಹಿಸಿರಲಿಲ್ಲ. ಚಿತ್ರ ವೈರಲ್ ಆದ ಮೇಲೆ ಕಾಪಿರೈಟ್ ಮಾಡುವುದಕ್ಕಾಗುವುದಿಲ್ಲವಲ್ಲಾ . ಆದ್ರೆ ಜನ ಅದು ನನ್ನ ಕಲಾಕೃತಿ ಎಂದು ಜನ ಗುರುತಿಸಿದ್ದಾರಲ್ಲಾ, ನನಗೆ ಆ ಖುಷಿಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…