ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಯಾರೂ ಈ ಚಿತ್ರದ ಸೃಷ್ಟಿಕರ್ತ?
ಕರಣ್ ಆಚಾರ್ಯ ಮೂಲತಃ ಕಾಸರಗೋಡು ಜಿಲ್ಲೆಯವರು. ಸದ್ಯ ಮಂಗಳೂರಿನ ಕಂಪೆನಿಯೊಂದರಲ್ಲಿ ಆ್ಯನಿಮೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಯಾರು ಕರಣ್ ಆಚಾರ್ಯ..?
ಕಾಸರಗೋಡು ಮೂಲದ ಕರಣ್ ಆಚಾರ್ಯ ಚಿಕ್ಕವಯಸ್ಸಿನಿಂದಲೇ ಡ್ರಾಯಿಂಗ್ ಸೇರಿದಂತೆ ಇನ್ನಿತರ ಕಲೆಯಲ್ಲಿ ಆಸಕ್ತಿ ಇದ್ದವರು. ಇದಕ್ಕಾಗಿ ಅವರು ಕಾಸರಗೋಡಿನ ” ರಿದಂ ಸ್ಕೂಲ್ ಆಫ್ ಆರ್ಟ್” ಶಾಲೆಯಲ್ಲಿ ಪದವಿಯನ್ನು ಸಹ ಪಡೆದರು. ನಂತರ ತ್ರಿಶೂರ್ನಲ್ಲಿ ಅನಿಮೇಶನ್ ಅಭ್ಯಾಸ ಮಾಡಿದ್ದಾರೆ.
ಕಳೆದ ವರ್ಷ ಕಾಸರಗೋಡಿನ ಕುಂಬ್ಳೆಯಲ್ಲಿ ಹಿಂದೂ ಸಂಘಟನೆಯ ಯುವಕರು ತಮ್ಮ ಸಂಘಟನೆಗಾಗಿ ವಿಭಿನ್ನ ರೀತಿಯ ಲಾಂಛನ ಮಾಡಿಕೊಡಿ ಎಂದು ಹೇಳಿದ್ದರು. ನಾನು ಭಜರಂಗಿಯ ಚಿತ್ರ ಬಿಡಿಸಿಕೊಟ್ಟಿದ್ದೆ. ಅದು ಅವರಿಗೆ ತುಂಬಾ ಇಷ್ಟವಾಗಿತ್ತು. ಈ ಲಾಂಛನವನ್ನು ಕೆಲವರು ವಾಟ್ಸಾಪ್ ಡಿಪಿ ಮಾಡಿಕೊಂಡರು.
![]()
ವಾಟ್ಸಾಪ್ ಡಿಪಿ ಮಾಡುವಾಗ ಭಜರಂಗಿಯ ಮುಖ ಮಾತ್ರ ಕಾಣಿಸಿಕೊಳ್ಳುತ್ತದೆ. ಫುಲ್ ಫೋಟೋ ಬರಲ್ಲ ನೋಡಿ. ಹಾಗೆ ಒಬ್ಬರಿಂದ ಒಬ್ಬರಿಗೆ ಅದು ಶೇರ್ ಆಗುತ್ತಾ ಬಂತು. ಆಮೇಲೆ ನಮ್ಮೂರಿನ ಹುಡುಗರು ಆ ಚಿತ್ರವನ್ನು ಬೈಕ್ ನಲ್ಲಿ ಹಾಕಿಸಿಕೊಂಡ್ರು.
ನಮ್ಮ ಹುಡುಗರೇ ಅಲ್ವಾ… ಹಾಕಿಸಿಕೊಳ್ಳಲಿ ಅದಕ್ಕೇನಂತೆ ಎಂದು ನಾನೂ ಸುಮ್ಮನಿದ್ದೆ. ಆಮೇಲೆ ಗೊತ್ತಾಯ್ತು, ಇದು ನಮ್ಮೂರು ಬಿಟ್ಟು ಬೇರೆ ಊರಿನಲ್ಲಿಯೂ ಕ್ರೇಜ್ ಹುಟ್ಟಿಸಿದೆ ಅಂತ. ಕಳೆದ ವರ್ಷ ಬಿಡಿಸಿದ ಚಿತ್ರ ಈಗ ವೈರಲ್ ಆಗುತ್ತಿದೆ. ಈ ಬಗ್ಗೆ ತುಂಬಾ ಖುಷಿಯೆನಿಸುತ್ತಿದೆ.
‘ಹನುಮಂತ ಸಾಮಾನ್ಯವಾಗಿ ವಿನೀತನಾಗಿ ಕಾಣಿಸಿಕೊಳ್ಳುತ್ತಾನೆ. ನೀವೇಕೆ ಹೀಗೆ ಚಿತ್ರಿಸಿದಿರಿ…’ ಎಂದು ಅನೇಕರು ಕೇಳುತ್ತಾರೆ.
ಒಬ್ಬ ಕಲಾವಿದನಾಗಿ ಹನುಮಾನ್ಗೆ ಯಾವ ರೂಪ ಬೇಕಾದರೂ ಕೊಡಬಹುದು. ರಾಮ– ರಾವಣ ಯುದ್ಧದಲ್ಲಿ ಅವ ಉಗ್ರರೂಪಿಯಾಗಿರುತ್ತಾನೆ. ಲಂಕಾದಹನದ ವೇಳೆಯೂ ಅವನು ಉಗ್ರರೂಪದಲ್ಲಿರುತ್ತಾನೆ. ಆದರೆ ರಾಮನ ಜತೆ ಇರುವಾಗ ಮಾತ್ರ ಅವನು ಶಾಂತರೂಪಿ. ಬಿಡುವು ಸಿಕ್ಕಾಗಲೆಲ್ಲಾ ಶಾಂತರೂಪದ ಹನುಮಂತನ ಚಿತ್ರ ರಚಿಸಬಹುದು. ಈ ಹಿಂದೆ ಶಾಂತರೂಪದ ಹನುಮಂತನ ಚಿತ್ರ ಬಿಡಿಸಿ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದೆ. ಅದು ಸುದ್ದಿಯಾಗಲಿಲ್ಲ. ಆದರೆ ಉಗ್ರರೂಪಿ ಹನುಮ ಎಲ್ಲರನ್ನೂ ಆಕರ್ಷಿಸಿಬಿಟ್ಟ.
ಮೀಸೆಯಿರುವ ಶಿವನ ಚಿತ್ರ ಬಿಡಿಸಿದಾಗ ಶಿವನಿಗೆ ಮೀಸೆಯಿದೆಯಾ? ಎಂದು ಕೆಲವರು ಕೇಳಿದ್ರು. ಯಾಕೆ ಇರಬಾರದು? ಇಲ್ಲಿಯವರೆಗೆ ಶಿವನ ಕಲಾಕೃತಿಯಲ್ಲಿ ಮೀಸೆ ಇರಲಿಲ್ಲ. ಹಾಗಾಗಿಯೇ ಮೀಸೆ ಇರುವ ಶಿವನನ್ನು ಸೃಷ್ಟಿಸಿದೆ. ಒಬ್ಬ ಕಲಾವಿದನ ಮನಸ್ಸಿನಲ್ಲಿ ಯಾವ ಭಾವನೆ ಮೂಡುತ್ತದೋ ಅದನ್ನೇ ಅವನು ಕುಂಚದ ಮೂಲಕ ಹೇಳುತ್ತಾನೆ ಅಲ್ಲವೇ? ಹನುಮ ಹಿಟ್ ಆಯ್ತು.
ನಮ್ಮೂರಲ್ಲಿ ನಮ್ಮ ಹುಡುಗರಿಗಾಗಿ ಆ ಚಿತ್ರ ಬಿಡಿಸಿದ್ದು. ಇದು ಇಷ್ಟೊಂದು ಸದ್ದು ಮಾಡುತ್ತದೆ ಎಂದು ಊಹಿಸಿರಲಿಲ್ಲ. ಚಿತ್ರ ವೈರಲ್ ಆದ ಮೇಲೆ ಕಾಪಿರೈಟ್ ಮಾಡುವುದಕ್ಕಾಗುವುದಿಲ್ಲವಲ್ಲಾ . ಆದ್ರೆ ಜನ ಅದು ನನ್ನ ಕಲಾಕೃತಿ ಎಂದು ಜನ ಗುರುತಿಸಿದ್ದಾರಲ್ಲಾ, ನನಗೆ ಆ ಖುಷಿಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…