ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಯಾರೂ ಈ ಚಿತ್ರದ ಸೃಷ್ಟಿಕರ್ತ?
ಕರಣ್ ಆಚಾರ್ಯ ಮೂಲತಃ ಕಾಸರಗೋಡು ಜಿಲ್ಲೆಯವರು. ಸದ್ಯ ಮಂಗಳೂರಿನ ಕಂಪೆನಿಯೊಂದರಲ್ಲಿ ಆ್ಯನಿಮೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಯಾರು ಕರಣ್ ಆಚಾರ್ಯ..?
ಕಾಸರಗೋಡು ಮೂಲದ ಕರಣ್ ಆಚಾರ್ಯ ಚಿಕ್ಕವಯಸ್ಸಿನಿಂದಲೇ ಡ್ರಾಯಿಂಗ್ ಸೇರಿದಂತೆ ಇನ್ನಿತರ ಕಲೆಯಲ್ಲಿ ಆಸಕ್ತಿ ಇದ್ದವರು. ಇದಕ್ಕಾಗಿ ಅವರು ಕಾಸರಗೋಡಿನ ” ರಿದಂ ಸ್ಕೂಲ್ ಆಫ್ ಆರ್ಟ್” ಶಾಲೆಯಲ್ಲಿ ಪದವಿಯನ್ನು ಸಹ ಪಡೆದರು. ನಂತರ ತ್ರಿಶೂರ್ನಲ್ಲಿ ಅನಿಮೇಶನ್ ಅಭ್ಯಾಸ ಮಾಡಿದ್ದಾರೆ.
ಕಳೆದ ವರ್ಷ ಕಾಸರಗೋಡಿನ ಕುಂಬ್ಳೆಯಲ್ಲಿ ಹಿಂದೂ ಸಂಘಟನೆಯ ಯುವಕರು ತಮ್ಮ ಸಂಘಟನೆಗಾಗಿ ವಿಭಿನ್ನ ರೀತಿಯ ಲಾಂಛನ ಮಾಡಿಕೊಡಿ ಎಂದು ಹೇಳಿದ್ದರು. ನಾನು ಭಜರಂಗಿಯ ಚಿತ್ರ ಬಿಡಿಸಿಕೊಟ್ಟಿದ್ದೆ. ಅದು ಅವರಿಗೆ ತುಂಬಾ ಇಷ್ಟವಾಗಿತ್ತು. ಈ ಲಾಂಛನವನ್ನು ಕೆಲವರು ವಾಟ್ಸಾಪ್ ಡಿಪಿ ಮಾಡಿಕೊಂಡರು.
![]()
ವಾಟ್ಸಾಪ್ ಡಿಪಿ ಮಾಡುವಾಗ ಭಜರಂಗಿಯ ಮುಖ ಮಾತ್ರ ಕಾಣಿಸಿಕೊಳ್ಳುತ್ತದೆ. ಫುಲ್ ಫೋಟೋ ಬರಲ್ಲ ನೋಡಿ. ಹಾಗೆ ಒಬ್ಬರಿಂದ ಒಬ್ಬರಿಗೆ ಅದು ಶೇರ್ ಆಗುತ್ತಾ ಬಂತು. ಆಮೇಲೆ ನಮ್ಮೂರಿನ ಹುಡುಗರು ಆ ಚಿತ್ರವನ್ನು ಬೈಕ್ ನಲ್ಲಿ ಹಾಕಿಸಿಕೊಂಡ್ರು.
ನಮ್ಮ ಹುಡುಗರೇ ಅಲ್ವಾ… ಹಾಕಿಸಿಕೊಳ್ಳಲಿ ಅದಕ್ಕೇನಂತೆ ಎಂದು ನಾನೂ ಸುಮ್ಮನಿದ್ದೆ. ಆಮೇಲೆ ಗೊತ್ತಾಯ್ತು, ಇದು ನಮ್ಮೂರು ಬಿಟ್ಟು ಬೇರೆ ಊರಿನಲ್ಲಿಯೂ ಕ್ರೇಜ್ ಹುಟ್ಟಿಸಿದೆ ಅಂತ. ಕಳೆದ ವರ್ಷ ಬಿಡಿಸಿದ ಚಿತ್ರ ಈಗ ವೈರಲ್ ಆಗುತ್ತಿದೆ. ಈ ಬಗ್ಗೆ ತುಂಬಾ ಖುಷಿಯೆನಿಸುತ್ತಿದೆ.
‘ಹನುಮಂತ ಸಾಮಾನ್ಯವಾಗಿ ವಿನೀತನಾಗಿ ಕಾಣಿಸಿಕೊಳ್ಳುತ್ತಾನೆ. ನೀವೇಕೆ ಹೀಗೆ ಚಿತ್ರಿಸಿದಿರಿ…’ ಎಂದು ಅನೇಕರು ಕೇಳುತ್ತಾರೆ.
ಒಬ್ಬ ಕಲಾವಿದನಾಗಿ ಹನುಮಾನ್ಗೆ ಯಾವ ರೂಪ ಬೇಕಾದರೂ ಕೊಡಬಹುದು. ರಾಮ– ರಾವಣ ಯುದ್ಧದಲ್ಲಿ ಅವ ಉಗ್ರರೂಪಿಯಾಗಿರುತ್ತಾನೆ. ಲಂಕಾದಹನದ ವೇಳೆಯೂ ಅವನು ಉಗ್ರರೂಪದಲ್ಲಿರುತ್ತಾನೆ. ಆದರೆ ರಾಮನ ಜತೆ ಇರುವಾಗ ಮಾತ್ರ ಅವನು ಶಾಂತರೂಪಿ. ಬಿಡುವು ಸಿಕ್ಕಾಗಲೆಲ್ಲಾ ಶಾಂತರೂಪದ ಹನುಮಂತನ ಚಿತ್ರ ರಚಿಸಬಹುದು. ಈ ಹಿಂದೆ ಶಾಂತರೂಪದ ಹನುಮಂತನ ಚಿತ್ರ ಬಿಡಿಸಿ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದೆ. ಅದು ಸುದ್ದಿಯಾಗಲಿಲ್ಲ. ಆದರೆ ಉಗ್ರರೂಪಿ ಹನುಮ ಎಲ್ಲರನ್ನೂ ಆಕರ್ಷಿಸಿಬಿಟ್ಟ.
ಮೀಸೆಯಿರುವ ಶಿವನ ಚಿತ್ರ ಬಿಡಿಸಿದಾಗ ಶಿವನಿಗೆ ಮೀಸೆಯಿದೆಯಾ? ಎಂದು ಕೆಲವರು ಕೇಳಿದ್ರು. ಯಾಕೆ ಇರಬಾರದು? ಇಲ್ಲಿಯವರೆಗೆ ಶಿವನ ಕಲಾಕೃತಿಯಲ್ಲಿ ಮೀಸೆ ಇರಲಿಲ್ಲ. ಹಾಗಾಗಿಯೇ ಮೀಸೆ ಇರುವ ಶಿವನನ್ನು ಸೃಷ್ಟಿಸಿದೆ. ಒಬ್ಬ ಕಲಾವಿದನ ಮನಸ್ಸಿನಲ್ಲಿ ಯಾವ ಭಾವನೆ ಮೂಡುತ್ತದೋ ಅದನ್ನೇ ಅವನು ಕುಂಚದ ಮೂಲಕ ಹೇಳುತ್ತಾನೆ ಅಲ್ಲವೇ? ಹನುಮ ಹಿಟ್ ಆಯ್ತು.
ನಮ್ಮೂರಲ್ಲಿ ನಮ್ಮ ಹುಡುಗರಿಗಾಗಿ ಆ ಚಿತ್ರ ಬಿಡಿಸಿದ್ದು. ಇದು ಇಷ್ಟೊಂದು ಸದ್ದು ಮಾಡುತ್ತದೆ ಎಂದು ಊಹಿಸಿರಲಿಲ್ಲ. ಚಿತ್ರ ವೈರಲ್ ಆದ ಮೇಲೆ ಕಾಪಿರೈಟ್ ಮಾಡುವುದಕ್ಕಾಗುವುದಿಲ್ಲವಲ್ಲಾ . ಆದ್ರೆ ಜನ ಅದು ನನ್ನ ಕಲಾಕೃತಿ ಎಂದು ಜನ ಗುರುತಿಸಿದ್ದಾರಲ್ಲಾ, ನನಗೆ ಆ ಖುಷಿಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.