ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಯಾರೂ ಈ ಚಿತ್ರದ ಸೃಷ್ಟಿಕರ್ತ?
ಕರಣ್ ಆಚಾರ್ಯ ಮೂಲತಃ ಕಾಸರಗೋಡು ಜಿಲ್ಲೆಯವರು. ಸದ್ಯ ಮಂಗಳೂರಿನ ಕಂಪೆನಿಯೊಂದರಲ್ಲಿ ಆ್ಯನಿಮೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಯಾರು ಕರಣ್ ಆಚಾರ್ಯ..?
ಕಾಸರಗೋಡು ಮೂಲದ ಕರಣ್ ಆಚಾರ್ಯ ಚಿಕ್ಕವಯಸ್ಸಿನಿಂದಲೇ ಡ್ರಾಯಿಂಗ್ ಸೇರಿದಂತೆ ಇನ್ನಿತರ ಕಲೆಯಲ್ಲಿ ಆಸಕ್ತಿ ಇದ್ದವರು. ಇದಕ್ಕಾಗಿ ಅವರು ಕಾಸರಗೋಡಿನ ” ರಿದಂ ಸ್ಕೂಲ್ ಆಫ್ ಆರ್ಟ್” ಶಾಲೆಯಲ್ಲಿ ಪದವಿಯನ್ನು ಸಹ ಪಡೆದರು. ನಂತರ ತ್ರಿಶೂರ್ನಲ್ಲಿ ಅನಿಮೇಶನ್ ಅಭ್ಯಾಸ ಮಾಡಿದ್ದಾರೆ.
ಕಳೆದ ವರ್ಷ ಕಾಸರಗೋಡಿನ ಕುಂಬ್ಳೆಯಲ್ಲಿ ಹಿಂದೂ ಸಂಘಟನೆಯ ಯುವಕರು ತಮ್ಮ ಸಂಘಟನೆಗಾಗಿ ವಿಭಿನ್ನ ರೀತಿಯ ಲಾಂಛನ ಮಾಡಿಕೊಡಿ ಎಂದು ಹೇಳಿದ್ದರು. ನಾನು ಭಜರಂಗಿಯ ಚಿತ್ರ ಬಿಡಿಸಿಕೊಟ್ಟಿದ್ದೆ. ಅದು ಅವರಿಗೆ ತುಂಬಾ ಇಷ್ಟವಾಗಿತ್ತು. ಈ ಲಾಂಛನವನ್ನು ಕೆಲವರು ವಾಟ್ಸಾಪ್ ಡಿಪಿ ಮಾಡಿಕೊಂಡರು.
![]()
ವಾಟ್ಸಾಪ್ ಡಿಪಿ ಮಾಡುವಾಗ ಭಜರಂಗಿಯ ಮುಖ ಮಾತ್ರ ಕಾಣಿಸಿಕೊಳ್ಳುತ್ತದೆ. ಫುಲ್ ಫೋಟೋ ಬರಲ್ಲ ನೋಡಿ. ಹಾಗೆ ಒಬ್ಬರಿಂದ ಒಬ್ಬರಿಗೆ ಅದು ಶೇರ್ ಆಗುತ್ತಾ ಬಂತು. ಆಮೇಲೆ ನಮ್ಮೂರಿನ ಹುಡುಗರು ಆ ಚಿತ್ರವನ್ನು ಬೈಕ್ ನಲ್ಲಿ ಹಾಕಿಸಿಕೊಂಡ್ರು.
ನಮ್ಮ ಹುಡುಗರೇ ಅಲ್ವಾ… ಹಾಕಿಸಿಕೊಳ್ಳಲಿ ಅದಕ್ಕೇನಂತೆ ಎಂದು ನಾನೂ ಸುಮ್ಮನಿದ್ದೆ. ಆಮೇಲೆ ಗೊತ್ತಾಯ್ತು, ಇದು ನಮ್ಮೂರು ಬಿಟ್ಟು ಬೇರೆ ಊರಿನಲ್ಲಿಯೂ ಕ್ರೇಜ್ ಹುಟ್ಟಿಸಿದೆ ಅಂತ. ಕಳೆದ ವರ್ಷ ಬಿಡಿಸಿದ ಚಿತ್ರ ಈಗ ವೈರಲ್ ಆಗುತ್ತಿದೆ. ಈ ಬಗ್ಗೆ ತುಂಬಾ ಖುಷಿಯೆನಿಸುತ್ತಿದೆ.
‘ಹನುಮಂತ ಸಾಮಾನ್ಯವಾಗಿ ವಿನೀತನಾಗಿ ಕಾಣಿಸಿಕೊಳ್ಳುತ್ತಾನೆ. ನೀವೇಕೆ ಹೀಗೆ ಚಿತ್ರಿಸಿದಿರಿ…’ ಎಂದು ಅನೇಕರು ಕೇಳುತ್ತಾರೆ.
ಒಬ್ಬ ಕಲಾವಿದನಾಗಿ ಹನುಮಾನ್ಗೆ ಯಾವ ರೂಪ ಬೇಕಾದರೂ ಕೊಡಬಹುದು. ರಾಮ– ರಾವಣ ಯುದ್ಧದಲ್ಲಿ ಅವ ಉಗ್ರರೂಪಿಯಾಗಿರುತ್ತಾನೆ. ಲಂಕಾದಹನದ ವೇಳೆಯೂ ಅವನು ಉಗ್ರರೂಪದಲ್ಲಿರುತ್ತಾನೆ. ಆದರೆ ರಾಮನ ಜತೆ ಇರುವಾಗ ಮಾತ್ರ ಅವನು ಶಾಂತರೂಪಿ. ಬಿಡುವು ಸಿಕ್ಕಾಗಲೆಲ್ಲಾ ಶಾಂತರೂಪದ ಹನುಮಂತನ ಚಿತ್ರ ರಚಿಸಬಹುದು. ಈ ಹಿಂದೆ ಶಾಂತರೂಪದ ಹನುಮಂತನ ಚಿತ್ರ ಬಿಡಿಸಿ ಸಾಮಾಜಿಕ ತಾಣದಲ್ಲಿ ಅಪ್ಲೋಡ್ ಮಾಡಿದ್ದೆ. ಅದು ಸುದ್ದಿಯಾಗಲಿಲ್ಲ. ಆದರೆ ಉಗ್ರರೂಪಿ ಹನುಮ ಎಲ್ಲರನ್ನೂ ಆಕರ್ಷಿಸಿಬಿಟ್ಟ.
ಮೀಸೆಯಿರುವ ಶಿವನ ಚಿತ್ರ ಬಿಡಿಸಿದಾಗ ಶಿವನಿಗೆ ಮೀಸೆಯಿದೆಯಾ? ಎಂದು ಕೆಲವರು ಕೇಳಿದ್ರು. ಯಾಕೆ ಇರಬಾರದು? ಇಲ್ಲಿಯವರೆಗೆ ಶಿವನ ಕಲಾಕೃತಿಯಲ್ಲಿ ಮೀಸೆ ಇರಲಿಲ್ಲ. ಹಾಗಾಗಿಯೇ ಮೀಸೆ ಇರುವ ಶಿವನನ್ನು ಸೃಷ್ಟಿಸಿದೆ. ಒಬ್ಬ ಕಲಾವಿದನ ಮನಸ್ಸಿನಲ್ಲಿ ಯಾವ ಭಾವನೆ ಮೂಡುತ್ತದೋ ಅದನ್ನೇ ಅವನು ಕುಂಚದ ಮೂಲಕ ಹೇಳುತ್ತಾನೆ ಅಲ್ಲವೇ? ಹನುಮ ಹಿಟ್ ಆಯ್ತು.
ನಮ್ಮೂರಲ್ಲಿ ನಮ್ಮ ಹುಡುಗರಿಗಾಗಿ ಆ ಚಿತ್ರ ಬಿಡಿಸಿದ್ದು. ಇದು ಇಷ್ಟೊಂದು ಸದ್ದು ಮಾಡುತ್ತದೆ ಎಂದು ಊಹಿಸಿರಲಿಲ್ಲ. ಚಿತ್ರ ವೈರಲ್ ಆದ ಮೇಲೆ ಕಾಪಿರೈಟ್ ಮಾಡುವುದಕ್ಕಾಗುವುದಿಲ್ಲವಲ್ಲಾ . ಆದ್ರೆ ಜನ ಅದು ನನ್ನ ಕಲಾಕೃತಿ ಎಂದು ಜನ ಗುರುತಿಸಿದ್ದಾರಲ್ಲಾ, ನನಗೆ ಆ ಖುಷಿಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…