ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

1.ನಿಮ್ಮ ಕರ್ಟನ್ ಮೇಲೆ ಯಾವತ್ತೂ ಫಂಗಸ್ ಕೂರ್ದೆ ಇರಕ್ಕೆ ಕರ್ಟನ್ ತಂದ ತಕ್ಷಣ ಉಪ್ಪು ನೀರಲ್ಲಿ ಒಗೆದು ನಂತರ ಉಪ್ಯೋಗ್ಸಿ.

2.ಸೊಳ್ಳೆ ಕಚ್ಚಿದ ಜಾಗದಲ್ಲಿ ತುರಿಕೆ ಆಗ್ಬಾರ್ದು ಅಂದ್ರೆ, ಒದ್ದೆ ಬೆರಳನ್ನ ಉಪ್ಪಿಗೆ ಹಚ್ಕೊಂಡು, ತುರಿಕೆ ಆಗ್ತಿರೋ ಜಾಗದಲ್ಲಿ ಹಚ್ಚಿ.
3.ತಾಮ್ರದ ಪಾತ್ರೆ ಫಳಫಳ ಹೊಳೆಯೋಹಾಗೆ ಮಾಡೋಕೆ ಸ್ವಲ್ಪ ವಿನೆಗರ್, ಮೈದಾ ಹಿಟ್ಟು ಹಾಗು ನಿಂಬೆರಸದ ಜೊತೆ ಉಪ್ಪು ಮಿಕ್ಸ್ ಮಾಡಿ ಪಾತ್ರೆ ಉಜ್ಜಿ.

4.ಬಾಣಲೀಲಿ ನೀವು ಹುರಿಯೋ ಪದಾರ್ಥದಿಂದ ಎಣ್ಣೆ ಸಿಡಿಯದ ಹಾಗೆ ನೋಡಿಕೊಳ್ಳೋಕೆ ಮೊದಲು ಒಂದೆರಡು ಚಿಟಿಕೆ ಉಪ್ಪು ಹಾಕಿಡಿ.
5.ಕ್ಯಾಂಡಲ್ಲಿಂದ ಮೇಣ ಸೋರ್ಬಾರ್ದು ಅಂದ್ರೆ, ಕ್ಯಾಂಡಲ್ ಹಚ್ಚೋಕೆ ಮುಂಚೆ ಸಾಕಷ್ಟು ಹೊತ್ತು ಉಪ್ಪು ನೀರಲ್ಲಿ ಅದನ್ನ ನೆನೆಸಿಟ್ಟು ಒಣಗಿಸಿ ನಂತರ ಬಳಸಿ.

6.ನಿಮ್ಮ ಶೂ ವಾಸನೆ ಬರ್ತಿದ್ರೆ, ಒಂದು ಸಣ್ಣ ಬಟ್ಟೇಲಿ ಉಪ್ಪು ತುಂಬಿ ವಾಸನೆ ಇರೋ ಶೂನಲ್ಲಿಟ್ಟು ಸ್ವಲ್ಪ ಹೊತ್ತಿನ ನಂತರ ತೆಗೀರಿ, ವಾಸನೆ ಹೋಗಿರುತ್ತೆ!
7.ನಿಮ್ಮ ಮನೆಯಲ್ಲಿ ಇರುವೆ ಕಾಟ ಜಾಸ್ತೀನ? ಹಾಗಿದ್ದರೆ ಒಂದು ಭಾಗ ಉಪ್ಪಿಗೆ ನಾಲ್ಕು ಭಾಗ ನೀರನ್ನ ಹಾಕಿ ಮಿಕ್ಸ್ ಮಾಡಿ ಅದನ್ನ ಇರುವೆ ಇರೋ ಜಾಗದಲ್ಲಿ ಚಿಮುಕಿಸಿ.

8.ನಿಮ್ಮ ಮಕ್ಕಳಿಗೆ ಪೈಂಟಿಂಗ್ ಮಾಡೋವಾಗ ಅದು ಬಾಯಿಗೆ ಹೋಗಿ ಏನಾದ್ರೂ ಆಗ್ಬೋದು ಅನ್ನೋ ಭಯ ಇದ್ರೆ, ಒಂದು ಬಟ್ಟಲಲ್ಲಿ ಮೈದಾ ಮತ್ತು ಉಪ್ಪು ನೀರು ಹಾಕಿ ಅದಕ್ಕೆ ಫುಡ್ ಕಲರ್ ಬೆರೆಸಿ ಕೊಡಿ. ಮನೇಲೇ ಪೈಂಟ್ ರೆಡಿ!
9.ಅಪಲ್ ತರದ ಹಣ್ಣು ಮತ್ತು ತರಕಾರಿ ಕತ್ತರಿಸಿದಾಗ ಕಪ್ಪಾಗದ ಹಾಗೆ ನೋಡಿಕೊಳ್ಳೋಕೆ ಅದನ್ನ ಕತ್ತರಿಸಿದ ನಂತರ ಉಪ್ಪು ನೀರಲ್ಲಿ ನೆನೆಸಿಡಿ.

10.ನಿಮ್ಮ ಕೈಯಲ್ಲಿ ಈರುಳ್ಳಿ ಅಥವಾ ಬೆಳ್ಳುಳ್ಳಿ ವಾಸನೆ ಇದ್ರೆ, ಉಪ್ಪಿಂದ ಕೈ ತೊಳ್ಕೊಳಿ. ವಾಸ್ನೆ ಓಡಿ ಹೋಗತ್ತೆ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…