ಉಪಯುಕ್ತ ಮಾಹಿತಿ

‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

1311

ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ  ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ  ಔತಣಕೂಟದ ಎಲೆಯಲ್ಲಿ ಊಟಕ್ಕೆ  ಉಪ್ಪಿನ ಕಾಯಿ ಇಲ್ಲ ಅಂದ್ರೆ  ಅ ಭೋಜನ ಅಸಂಪೂರ್ಣ  ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-  

ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ  ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-

ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

 

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ.  ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ,  ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು,  ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ.  ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಉಪಯುಕ್ತ ಮಾಹಿತಿ

    ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

    ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…

  • ಸ್ಪೂರ್ತಿ

    6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

    ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…