ಉಪಯುಕ್ತ ಮಾಹಿತಿ

‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

1296

ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ  ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ  ಔತಣಕೂಟದ ಎಲೆಯಲ್ಲಿ ಊಟಕ್ಕೆ  ಉಪ್ಪಿನ ಕಾಯಿ ಇಲ್ಲ ಅಂದ್ರೆ  ಅ ಭೋಜನ ಅಸಂಪೂರ್ಣ  ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-  

ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ  ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-

ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

 

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ.  ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ,  ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು,  ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ.  ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…

  • ಸುದ್ದಿ

    ತಮ್ಮ ನಾಯಕ ಚುನಾವಣೆಯಲ್ಲಿ ಗೆಲ್ಲಲೆಂದು ತನ್ನ ನಾಲಿಗೆ ಸೀಳಿ ದೇವಸ್ಥಾನದ ಹುಂಡಿಗೆ ಹಾಕಿದ ಹುಚ್ಚು ಅಭಿಮಾನಿ..!

    ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

  • ದೇಶ-ವಿದೇಶ

    ಚಾಲಾಕಿ ಚೀನಾ ದೇಶವು ನಮ್ಮ ಭಾರತ ಮತ್ತು ವಿಶ್ವವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

    ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.