News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

1322

ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ  ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ  ಔತಣಕೂಟದ ಎಲೆಯಲ್ಲಿ ಊಟಕ್ಕೆ  ಉಪ್ಪಿನ ಕಾಯಿ ಇಲ್ಲ ಅಂದ್ರೆ  ಅ ಭೋಜನ ಅಸಂಪೂರ್ಣ  ಎನ್ನಿಸುತ್ತದೆ.

ಉಪ್ಪಿನಕಾಯಿಯಲ್ಲಿ ಹಲವು ಬಗೆಗಳಿವೆ:-  

ಮಾವಿನಕಾಯಿ, ಶುಂಠಿ, ನೆಲ್ಲಿಕಾಯಿ, ನಿಂಬೆಕಾಯಿ, ಎರಳಿಕಾಯಿ, ಬೆಳ್ಳುಳ್ಳಿ, ಹಾಗಲಕಾಯಿ, ಟೊಮೊಟೊ, ಮುಂತಾದವುಗಳಿಂದ ತಯಾರಿಸುವ ಉಪ್ಪಿನಕಾಯಿ ರುಚಿ ಅನುಭವಿಸಿದವರಿಗಷ್ಟೆ ತಿಳಿಯುತ್ತದೆ. ಯಾವುದೇ ಉಪ್ಪಿನಕಾಯಿ ತಿಂದರೂ ಪರವಾಗಿಲ್ಲ. ಆದರೆ ಹಿತಮಿತವಾಗಿರಬೇಕು. ಅತಿಯಾಗಿ ತಿಂದ್ರೆ  ಆರೋಗ್ಯಕ್ಕೆ ಹಾನಿಯುಂಟಾಗಲಿದೆ.

ಭಾರತೀಯರು ಉಪ್ಪಿನಕಾಯಿ ಪ್ರಿಯರು:-

ದೇಶದ ಎಲ್ಲಾ ಭಾಗಗಳಲ್ಲೂ ಬಗೆಬಗೆಯ ಉಪ್ಪಿನಕಾಯಿಗಳು ಬಳಕೆಯಲ್ಲಿವೆ. ಅವರವರ ರುಚಿಗೆ ತಕ್ಕಂತೆ ತಯಾರಾಗುತ್ತವೆ. ಊಟಕ್ಕೆ ಮಾತ್ರ ಉಪ್ಪಿನಕಾಯಿ ಬಳಸುವುದಷ್ಟೆ ಅಲ್ಲ. ಯಾವುದೇ ತಿಂಡಿ ಜತೆಯಲ್ಲೂ ಬಳಸಬಹುದಾಗಿದೆ. ಇಡ್ಲಿ, ರೊಟ್ಟಿ, ದೋಸೆ, ಮುಂತಾದ ತಿಂಡಿಗಳ ಜತೆಯಲ್ಲೂ ತಿನ್ನಬಹುದು. ಎಷ್ಟೋ ಬಾರಿ ಚಟ್ನಿ ಬದಲಿಗೆ ಉಪ್ಪಿನಕಾಯಿ ತಿಂದರೆ ಒಳ್ಳೆಯದು. ಅದಕ್ಕಿಂತ ಹೆಚ್ಚು ತಿಂದರೆ ಅನಾಹುತಗಳಿಗೆ ಆಹ್ವಾನ ನೀಡಿದಂತೆಯೇ.

 

ಉಪ್ಪಿನಕಾಯಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಉಪ್ಪು, ಮಸಾಲೆಗಳಿರುತ್ತವೆ. ಉಪ್ಪಿನಕಾಯಿ ತಯಾರಿಸುವಾಗ ಅದು ಬಹಳ ದಿನ ಕೆಡದಂತಿರಲು ಹೆಚ್ಚಿನ ಪ್ರಮಣದಲ್ಲಿ ಎಣ್ಣೆ ಬಳಸುವುದುಂಟು. ಉಪ್ಪಿನಕಾಯಿ ಹೋಳುಗಳು ಎಣ್ಣೆಯನ್ನು ಹೀರಿಕೊಳ್ಳುತ್ತವೆ.  ಪರಿಸ್ಥಿತಿ ಹೀಗಿರುವಾಗ ನಾವೇನಾದರೂ ಅತಿಯಾಗಿ ಉಪ್ಪಿನಕಾಯಿ ಸೇವಿಸಿದರೆ,  ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಅಂಶಗಳು ದೇಹವನ್ನು ಸೇರಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗುತ್ತವೆ. ಉಪ್ಪಿನಕಾಯಿಯಲ್ಲಿ ಉಪ್ಪಿನಾಂಶವೂ ಅಧಿಕವಾಗಿರುತ್ತದೆ. ಇದೂ ಕೂಡ ಹೃದಯದೊತ್ತಡಕ್ಕೆ ಕಾರಣವಾಗುತ್ತದೆ.

ಹೆಚ್ಚು ಉಪ್ಪು ದೇಹಕ್ಕೆ ಸೇರಿದಲ್ಲಿ ಉರಿಯೂತ ಮತ್ತು ನೀರನ್ನು ಹಿಡಿದಿಟ್ಟುಕೊಳ್ಳಲು ಆಸ್ಪದವಾಗಿ ಹಲವು ತೊಂದರೆಗಳಿಗೀಡು ಮಾಡುತ್ತದೆ. ಹೃದಯ ಸಂಬಂಧಿ ಖಾಯಿಲೆ ಗಳಿದ್ದವರು,  ಉಪ್ಪಿನಕಾಯಿ ಸೇವನೆ ಕುರಿತು ಎಚ್ಚರದಿಂದಿರಬೇಕು. ಹೃದಯದ ಒತ್ತಡದ ಸಮಸ್ಯೆಗಳಿರುವವರು ಇದರ ಬಳಕೆಯಿಂದ ದೂರ ಉಳಿದರೂ ಒಳ್ಳೆಯ ದಾಗುತ್ತದೆ. ಉಪ್ಪಿನಕಾಯಿಯಲ್ಲಿರುವ ಸೋಡಿಯಂ ಲವಣ, ಹೊಟ್ಟೆಯುಬ್ಬರಿಕೆಗೂ ದಾರಿ ಮಾಡಿಕೊಡುತ್ತದೆ. ಈ ಲವಣಾಂಶದಿಂದ ಹೊಟ್ಟೆಯಲ್ಲಿ ನೀರು ಉಳಿದು ಕೊಳ್ಳಲು ಸಾಧ್ಯವಾಗಿ ಕೆಲವು ಆಮ್ಲೀಯ ವಾಯುಗಳು ಉತ್ಪತ್ತಿಯಾಗುತ್ತವೆ.

ಉಪ್ಪಿನಕಾಯಿಯನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮೂತ್ರಪಿಂಡಗಳ ಕಾರ್ಯದ ಮೇಲೂ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಉಪ್ಪಿನ ಕಾಯಿಯಲ್ಲಿರುವ ಕೆಲವು ಲವಣಗಳು ಮೂತ್ರಪಿಂಡಗಳ ಕೆಲಸ ಹೆಚ್ಚುವಂತೆ ಮಾಡುವುದರಿಂದ ಅಡ್ಡ ಪರಿಣಾಮಗಳಾಗುತ್ತವೆ.  ಆದ್ದರಿಂದ ಉಪ್ಪಿನಕಾಯಿಯನ್ನು ಮಿತವಾಗಿ ಸೇವಿಸಿ, ಆರೋಗ್ಯದ ಸುಧಾರಣೆಗೆ ಗಮನ ಹರಿಸಿ. ಊಟಕ್ಕೆ ತಕ್ಕ ಉಪ್ಪಿನಕಾಯಿಯಷ್ಟೆ ಇರಲಿ.ಹಾಗಿದ್ದಾಗ ಊಟದ ರುಚಿ, ದೈಹಿಕ ಆರೋಗ್ಯವೂ ಚೆಂದವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಆರೋಗ್ಯ, ಸರ್ಕಾರಿ ಯೋಜನೆಗಳು

    ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

  • Uncategorized, ಸಿನಿಮಾ

    ‘ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?..ತಿಳಿಯಲು….ಓದಿ…

    ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.

  • ಆರೋಗ್ಯ

    ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

    ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…