ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ. ಇದೆಲ್ಲದರ ನಡುವೆ ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಕೆಲ ಸಿನಿಮಾ ಮತ್ತು ರಾಜಕೀಯದ ಗಣ್ಯರು ಮಾತನಾಡಿದ್ದಾರೆ.

ರಾಜಕೀಯಕ್ಕೆ ಬರೋದಾಗಿ ಘೋಷಿಸಿ ತೀವ್ರ ಸಂಚಲನ ಮೂಡಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರು ಇವತ್ತು ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದಾರೆ.
ಇವತ್ತು ರಾಜಕೀಯ ಪಕ್ಷದ ಹೆಸರು, ಸ್ವರೂಪ, ಪ್ರಣಾಳಿಕೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಶಿವಾನಂದ ಸರ್ಕಲ್ ಬಳಿಯ ಗಾಂಧಿಭವನದಲ್ಲಿ ಪಕ್ಷದ ಹೆಸರು ಘೋಷಣೆ ಮಾಡಿದ್ದಾರೆದೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಪಾತ್ರ, ಕಾರ್ಯಕಾರಿ ಸಮಿತಿ ಮತ್ತು ಪಕ್ಷದ ಪ್ರಣಾಳಿಕೆಯನ್ನೂ ಉಪೇಂದ್ರ ಘೋಷಿಸಲಿದ್ದಾರೆ.
ಪಕ್ಷದ ಹೆಸರು:-
ಇತ್ತೀಚೆಗಷ್ಟೇ ಉಪೇಂದ್ರ ಅವರ ಪಕ್ಷದ ಹೆಸರು ಫೊಷಣೆಯಾಗಿದ್ದು, ಅವರ ಪಕ್ಷದ ಹೆಸರು ಪ್ರಜಾಕಾರಣ ಅಲ್ಲ, ಪ್ರಜಾಕೀಯವೂ ಅಲ್ಲ. ಬದಲಾಗಿ `ಉತ್ತಮ ಪ್ರಜಾ ಪಾರ್ಟಿ’ ಎಂದು ತಿಳಿಸಿದ್ದರು. ಸದಸ್ಯತ್ವ ನೋಂದಣಿ ಅರ್ಜಿಯಲ್ಲೂ ಉಪ್ಪಿ ಪಕ್ಷದ ಹೆಸರು ಬಹಿರಂಗವಾಗಿತ್ತು.

ಪ್ರಜಾಕೀಯ ಆಂದೋಲನದಿಂದ ಸುದ್ದಿ ಮಾಡುತ್ತಿರುವ ಉಪ್ಪಿಯ ಹೊಸ ರಾಜಕೀಯ ಪಕ್ಷದ ಹೆಸರು ತೀವ್ರ ಕುತೂಹಲವನ್ನು ಕೆರಳಿಸಿದೆ. ಈಗಾಗಲೇ ಸಿನಿಮಾ ರಂಗದಲ್ಲಿ ನಟರಾಗಿ, ನಿರ್ದೇಶಕರಾಗಿ ಮತ್ತು ಬರಹಗಾರರಾಗಿ ಉಪ್ಪಿ ಸೇವೆ ಸಲ್ಲಿದ್ದಾರೆ. ಈಗ ಪ್ರಜಾ ಸೇವೆ ಮಾಡಲು ರಾಜಕೀಯಕ್ಕೆ ಬರುತ್ತಿದ್ದಾರೆ.
ಸಭೆ ನಡೆಸುತ್ತಿರುವ ಉಪೇಂದ್ರ:-
ಈಗಾಗಲೇ ತಮ್ಮ ಆಪ್ತರ ಜೊತೆ ಸರಣಿ ಸಭೆ ನಡೆಸುತ್ತಿರುವ ಉಪೇಂದ್ರ, ತಮ್ಮ ಹೊಸ ಪಕ್ಷದ ಸದಸ್ಯತ್ವ ಪಡೆಯಲು ಬಯಸುವವರಿಗೆ ಅರ್ಜಿ ರೆಡಿ ಮಾಡಿದ್ದಾರೆ. ಶೀಘ್ರವೇ ರಾಜ್ಯದ ವಿವಿಧೆಡೆ ಸುತ್ತಾಡಿ ಜನರ ಅಭಿಪ್ರಾಯ ಸಂಗ್ರಹಿಸಲು ಉಪೇಂದ್ರ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಉಪ್ಪಿ ಹೊಸ ಪಕ್ಷಕ್ಕೆ ಸೇರುವವರಿಗೆ ಅರ್ಜಿಗಳನ್ನೂ ಈಗಾಗಲೆ ಸಿದ್ಧಪಡಿಸಿಕೊಳ್ಳಲಾಗಿದೆ. ಉಪ್ಪಿ ತಮ್ಮ ರಾಜಕೀಯ ಪ್ರವೇಶ ಬಗ್ಗೆ ಪ್ರಕಟಿಸುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯೂ ನಡೆದಿತ್ತು. ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಅದ್ಭುತ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು.
ಬದಲಾವಣೆ ತರಲು ಉಪ್ಪಿ:-
ರಾಜಕೀಯದಲ್ಲಿ ಬದಲಾವಣೆ ತರಲು ಜನರ, ಅಭಿಮಾನಿಗಳ ಸಲಹೆ ಸೂಚನೆಗಳನ್ನು ಪಡೆಯಲು ಉಪೇಂದ್ರ ಇ-ಮೇಲ್ ವಿಳಾಸಗಳನ್ನೂ ಕೊಟ್ಟಿದ್ದರು. ಅದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಇ-ಮೇಲ್ಗಳು ಹರಿದುಬಂದಿದ್ದವು.

ನಾವು ಕಟ್ಟುವ ತೆರಿಗೆ ಹಣವನ್ನು ಪ್ರಜಾಪ್ರತಿನಿಧಿಗಳು ಸಮರ್ಥವಾಗಿ ಬಳಕೆ ಮಾಡಬೇಕು. ಅಂತಹವನ್ನು ನಾವು ಆಯ್ಕೆ ಮಾಡಬೇಕಾಗಿದೆ ಎಂದಿದ್ದರು ಉಪ್ಪಿ. ಸ್ವಚ್ಛಭಾರತದ ತರಹ ತಳಮಟ್ಟದಿಂದ ಈ ಕಾರ್ಯ ಆರಂಭವಾಗಬೇಕು ಎಂದಿರುವ ಉಪೇಂದ್ರ ತಮ್ಮ ಪಕ್ಷಕ್ಕೆ ಸೇರುವ ಎಲ್ಲರಿಗೂ ಮುಕ್ತ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….
78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್ನ ಸಂಗ್ರೂರ್ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…